ರೌಡಿಕೊಲೆ: 11 ಮಂದಿ ಬಂಧನ

ಹಳೇ ದ್ವೇಷದ ಹಿನ್ನೆಲೆ ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದಿದ್ದ ಆರೋಪಿಗಳು

Team Udayavani, Oct 29, 2021, 10:53 AM IST

ರೌಡಿಕೊಲೆ- 11 ಮಂದಿ ಬಂಧನ

ಬೆಂಗಳೂರು: ಇತ್ತೀಚೆಗೆ ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ ಆನಂದ್‌ನನ್ನು ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದಿದ್ದ 11 ಮಂದಿಯನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಉಮೇಶ್‌ ಅಲಿಯಾಸ್‌ ಮಿಕಾ, ನಾಗೇಶ್‌ ಅಲಿಯಾಸ್‌ ನಾಗ, ವಿನಯ್‌, ಚಂದನ್‌, ನಾಗರಾಜು, ನವೀನ್‌ ಕುಮಾರ್‌, ಮೊಹಿತ್‌ ಅಲಿಯಾಸ್‌ ಜಾಕಿ, ಗಿರೀಶ್‌, ಕುಮಾರ್‌, ಮಂಜುನಾಥ, ನಾಗ ಬಂಧಿತರು. ಆರೋಪಿಗಳೆಲ್ಲರೂ ಶಿವಪುರ, ನೆಲಗೆದರನಹಳ್ಳಿ ನಿವಾಸಿಗಳಾಗಿದ್ದು, 28 ವರ್ಷದ ವಯಸ್ಸಿನವರಾಗಿದ್ದಾರೆ.

ಅ.24ರಂದು ಪೀಣ್ಯ ಠಾಣೆಯ ರೌಡಿಶೀಟರ್‌ ಆನಂದ್‌ ಅಲಿಯಾಸ್‌ ಶಿವಪುರ ಆನಂದ್‌ನನ್ನು ಮನೆ ಸಮೀಪದಲ್ಲಿಯೇ ಕೊಲೆಗೈದು ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ಹಳೇ ದ್ವೇಷಕ್ಕೆ ಕೊಲೆ: ಕೊಲೆಯಾದ ಆನಂದ್‌ ಆರು ವರ್ಷಗಳ ಹಿಂದೆ ಪ್ರಕರಣ ವೊಂದರಲ್ಲಿ ಜೈಲು ಸೇರಿದ್ದ. ಜೈಲಿನಲ್ಲಿ ಕುಳಿತುಕೊಂಡೆ ಪೀಣ್ಯ ಠಾಣೆ ರೌಡಿಶೀಟರ್‌ ವಸಂತ ಎಂಬಾತನನ್ನು ಚಿತ್ರದುರ್ಗದ ಹಿರಿಯೂರು ತಾಲೂಕಿನ ಬಳಿ ತನ್ನ ಸಹಚರರ ಮೂಲಕ ಕೊಲೆ ಮಾಡಿಸಿದ್ದ. ಅದೇ ದ್ವೇಷದ ಹಿನ್ನೆಲೆಯಲ್ಲಿ ವಸಂತನ ಸಹೋದರ ನಾಗೇಶ್‌ ಅಲಿಯಾಸ್‌ ನಾಗ ಆರು ವರ್ಷಗಳಿಂದ ಆನಂದ್‌ ಕೊಲೆಗೆ ಸಂಚು ರೂಪಿಸಿದ್ದ.

ಇದನ್ನೂ ಓದಿ;- ಸಚಿವ ಚವ್ಹಾಣರಿಂದ ಗ್ರಾಮ ಸಂಚಾರ

ಆದರೆ, ಸಾಧ್ಯವಾಗಿರಿಲ್ಲ. ಮೂರು ತಿಂಗಳ ಹಿಂದೆಯೂ ಹತ್ಯೆಗೆ ಸಂಚು ರೂಪಿಸಿ ವಿಫ‌ಲಗೊಂಡಿದ್ದ. ಅದೇ ವೇಳೆಯಲ್ಲಿ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಆನಂದ್‌, ಒಂದು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿ ತನ್ನ ಸ್ವಂತ ಊರಾದ ಚನ್ನರಾಯ ಪಟ್ಟಣದಲ್ಲಿ ವಾಸವಾಗಿದ್ದ. ಅ.24ರಂದು ಕೋರ್ಟ್‌ಗೆ ಹಾಜರಾಗಬೇಕೆಂದು ಅ.23ರಂದು ರಾತ್ರಿ ಶಿವಪುರದ ಮನೆಗೆ ಬಂದಿದ್ದ ಎಂದು ಪೊಲೀಸರು ಹೇಳಿದರು.

ಮುಳುವಾದ ಅದ್ದೂರಿ ಸ್ವಾಗತ: ಮೂರು ತಿಂಗಳ ಬಳಿಕ ಊರಿಗೆ ಬಂದಿದ್ದ ಆನಂದ್‌ ನನ್ನು ಅ.23ರಂದು ರಾತ್ರಿ ಆತನ ಹುಡುಗರು ಏರಿಯಾದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಿದ್ದರು. ಈ ವಿಚಾರ ತಿಳಿದ ನಾಗೇಶ್‌, ತನ್ನ ಸ್ನೇಹಿತ ಉಮೇಶ್‌ ಅಲಿಯಾಸ್‌ ಮಿಕಾಗೆ ಈ ವಿಚಾರ ತಿಳಿಸಿ ಹತ್ಯೆಗೆ ಸಂಚು ರೂಪಿಸಿದ್ದರು. ಅ.24ರಂದು ರಾತ್ರಿ ಆನಂದ್‌, ಮನೆಯಿಂದ ಹೊರಗಡೆ ಫೋನ್‌ ನಲ್ಲಿ ಮಾತನಾಡುತ್ತ ಸುಮಾರು 100 ಮೀಟರ್‌ ದೂರ ಬರುತ್ತಿದ್ದಂತೆ, ಅಲ್ಲೇ ಕಾಯುತ್ತಿದ್ದ ನಾಗೇಶ್‌ ಮತ್ತು ತಂಡ ಏಕಾಏಕಿ ದಾಳಿ ನಡೆಸಿ ಹತ್ಯೆಗೈದು ಪರಾರಿಯಾಗಿತ್ತು ಎಂದು ಪೊಲೀಸರು ಹೇಳಿದರು.

ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಆರೋಪಿಗಳು –

ಕೃತ್ಯ ಎಸಗಿದ ಆರೋಪಿಗಳು ನೇರವಾಗಿ ಧರ್ಮಸ್ಥಳಕ್ಕೆ ಹೋಗಿ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿ ಶ್ರೀಮಂಜು ನಾಥನ ದರ್ಶನ ಪಡೆದು, ಅಲ್ಲಿಯೇ ಒಂದು ದಿನ ತಂಗಿದ್ದರು. ನಂತರ ಅ.27ರಂದು ಬೆಂಗಳೂರಿಗೆ ಬರುತ್ತಿರುವ ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.