ಕ್ರಿಕೆಟ್ ಬುಕ್ಕಿಯಿಂದ ಹಣ ಪಡೆದ ಆರೋಪ; ಐವರು ಪೊಲೀಸರ ಅಮಾನತು
Team Udayavani, Oct 9, 2022, 12:37 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕ್ರಿಕೆಟ್ ಬುಕ್ಕಿಯೊಬ್ಬನಿಗೆ ಬೆದರಿಸಿ ಲಕ್ಷಾಂತರ ರೂ. ಪಡೆದುಕೊಂಡಿದ್ದ ಆರೋಪದ ಮೇಲೆ ಸದಾಶಿವನಗರ ಠಾಣೆಯ ಇಬ್ಬರು ಪಿಎಸ್ಐ ಹಾಗೂ ಮೂವರು ಕಾನ್ ಸ್ಟೇಬಲ್ ಗಳನ್ನು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಮಾಡಿದ್ದಾರೆ.
ಸದಾಶಿವನಗರ ಠಾಣೆ ಪಿಎಸ್ಎ ಮೋಹನ್, ಬಸವರಾಜು ಮತ್ತು ಕಾನ್ ಸ್ಟೇಬಲ್ಗಳಾದ ಠಾಣೆ ವಿಶೇಷ ಘಟಕದ ಶಿವಕುಮಾರ್, ಅಪರಾಧ ವಿಭಾಗದ ಕಾನ್ ಸ್ಟೇಬಲ್ಗಳಾದ ಪರಶುರಾಮ್ ಹಾಗೂ ನಾಗರಾಜ್ರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಐವರ ವಿರುದ್ಧ ಇಲಾಖಾ ತನಿಖೆಗೆ ಆದೇಶ ನೀಡಲಾಗಿದೆ. ಇತ್ತೀಚೆಗೆ ನಡೆದ ಇಂಡಿಯಾ ಮತ್ತು ಪಾಕಿಸ್ತಾನದ ಕ್ರಿಕೆಟ್ ಟೂರ್ನಿಮೆಂಟ್ ನಡೆದಿತ್ತು. ಇದೇ ವೇಳೆ ಸದಾಶಿವನಗರ ಠಾಣೆಯ ಅಧಿಕಾರಿ-ಸಿಬ್ಬಂದಿಗೆ ಮುಕೇಶ್ ಎಂಬ ಬುಕ್ಕಿಯೊಬ್ಬ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾನೆ ಎಂಬ ಮಾಹಿತಿ ದೊರಕಿದೆ.
ಕೂಡಲೇ ಇಬ್ಬರು ಪಿಎಸ್ಐ ಹಾಗೂ ಮೂವರು ಕಾನ್ ಸ್ಟೇಬಲ್ ಗಳು ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಮುಕೇಶ್ ಎಂಬಾತನ ಮನೆ ಅಥವಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಆದರೆ, ಆರೋಪಿ ಮುಕೇಶ್ ನಾಪತ್ತೆಯಾಗಿದ್ದ. ಆಗ ಆತನ ಸ್ನೇಹಿತ ಯೋಗೇಶ್ ಎಂಬವರು ಸ್ಥಳದಲ್ಲಿದ್ದರು. ಆಗ ಯೋಗೇಶ್ನನ್ನು ವಿಚಾರಣೆ ನಡೆಸಿದ ಸಿಬ್ಬಂದಿ ಪ್ರಕರಣ ದಾಖಲಿಸಲು ಠಾಣೆಗೆ ಕರೆದೊಯ್ಯುವ ಮಾರ್ಗ ಮಧ್ಯೆ, ಒಂದು ಲಕ್ಷ ರೂ. ಕೊಟ್ಟರೆ ಪ್ರಕರಣದಿಂದ ಕೈಬಿಡುತ್ತೇವೆ. ಇಲ್ಲವಾದರೆ ಪ್ರಕರಣ ದಾಖಲಿಸುತ್ತೇವೆ ಎಂದು ಬೆದರಿಕೆಯೊಡ್ಡಿದ್ದಾರೆ.
ಹೆದರಿದ ಯೋಗೇಶ್, ಅಧಿಕಾರಿಗಳಿಗೆ ಒಂದು ಲಕ್ಷ ರೂ. ಕೊಟ್ಟಿದ್ದಾರೆ. ಅದರಿಂದ ಬೇಸರಗೊಂಡ ಯೋಗೇಶ್, ಮೂರು ದಿನಗಳ ಬಳಿಕ ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿಗೆ ಲಿಖಿತ ದೂರು ನೀಡಿದ್ದರು. ಈ ಕುರಿತು ಯಲಹಂಕ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಈ ವೇಳೆ ಯಾವುದೇ ಪ್ರಕರಣ ದಾಖಲಿಸದೆ, ಯೋಗೇಶ್ ನನ್ನು ಕರೆದೊಯ್ದಿದ್ದಾರೆ.
ಜತೆಗೆ ಅನುಮಾನದ ಮೇರೆಗೆ ಠಾಣೆಗೆ ಕರೆದೊಯ್ದೆ ಮಾರ್ಗಮಧ್ಯೆಯೇ ಬೆದರಿಸಿ ಹಣ ಪಡೆದು ಕಳುಹಿಸಿದ್ದಾರೆ. ಈ ಮೂಲಕ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ವರದಿ ನೀಡಿದ್ದರು. ಈ ವರದಿಯನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತರಲಾಗಿತ್ತು. ಬಳಿಕ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡಕ್ಕೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದರು. ಹೀಗಾಗಿ ಐವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಈ ಮಧ್ಯೆ ಯೋಗೇಶ್ ಬಗ್ಗೆ ಪ್ರಾಥಮಿಕ ವಿಚಾರಣೆ ನಡೆಸಿದಾಗ ಆತ ಕ್ರಿಕೆಟ್ ಬುಕ್ಕಿ ಅಲ್ಲ. ಬೇರೆ ವ್ಯವಹಾರ ನಡೆಸುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕರ್ತವ್ಯಲೋಪ ಆರೋಪದ ಮೇಲೆ ಇಬ್ಬರು ಪಿಎಸ್ಐ ಹಾಗೂ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಲಾಗಿತೆ. ಜತೆಗೆ ಐವರ ವಿರುದ್ಧ ಇಲಾಖಾ ತನಿಖೆಗೆ ಆದೇಶ ನೀಡಲಾಗಿದೆ. – ಶ್ರೀನಿವಾಸಗೌಡ, ಕೇಂದ್ರ ವಿಭಾಗ ಡಿಸಿಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ