ಆರು ಗ್ರಾಂ ಚಿನ್ನಕ್ಕಾಗಿ ಮಹಿಳೆಯ ಹತ್ಯೆ: ದೃಶ್ಯಂ ಸಿನಿಮಾ ರೀತಿ ಕತೆ ಕಟ್ಟಿದ್ದ ಆರೋಪಿಗಳು!


Team Udayavani, Jul 13, 2021, 10:07 AM IST

drushyam

ಬೆಂಗಳೂರು: ಇತ್ತೀಚೆಗೆ ಒಂಟಿ ಮಹಿಳೆಯನ್ನು ಕೊಲೆಗೈದು ಪರಾರಿಯಾಗಿದ್ದ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದು, ಚಿನ್ನದ ಸರಕ್ಕಾಗಿ ಕೊಲೆಯಾಗಿದೆ. ಅಲ್ಲದೆ, ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಮಕ್ಕಳಿಗೆ ಕನ್ನಡದ “ದೃಶ್ಯಂ’ ಸಿನಿಮಾ ರೀತಿಯ ಕಥೆ ಹೇಳಿಕೊಟ್ಟಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಜ್ಞಾನಜ್ಯೋತಿ ನಗರದ ರಾಜಶೇಖರ್‌ (41 ವ) ಮತ್ತು ಆಕೆಯ ಸ್ನೇಹಿತೆ ಇಂದಿರಾ (37 ವ) ಬಂಧಿತರು. ಆರೋಪಿಗಳಿಂದ ಅಡಮಾನ ಇಟ್ಟಿದ್ದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಜು.10ರಂದು ಸಂಜೆ ಆರು ಗಂಟೆ ಸುಮಾರಿಗೆ ಓಂಕಾರ್‌ ಎಂಬುವರ ಪತ್ನಿ ರಂಜಿತಾ (26) ಎಂಬಾಕೆಯ ಕತ್ತು ಕೊಯ್ದು ಕೊಲೆಗೈದು, ಮೃತಳ ಕೈಯಲ್ಲಿ ಚಾಕು ಇಟ್ಟು ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ಆರೋಪಿಗಳಿಬ್ಬರು ಸಿನಿಮಾ, ಧಾರವಾಹಿಗಳ ಶೂಟಿಂಗ್‌ನಲ್ಲಿ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದರು. ಈ ಪೈಕಿ ಇಂದಿರಾ ಪತಿಯಿಂದ, ರಾಜಶೇಖರ್‌ ಕೂಡ ಪತ್ನಿಯಿಂದ ದೂರವಾಗಿದ್ದು, ಅಕ್ರಮ ಸಂಬಂಧ ಹೊಂದಿದ್ದಾರೆ. ಮೃತ ರಂಜಿತಾ ವಾಸವಿದ್ದ ಕಟ್ಟಡದ ಮೊದಲ ಮಹಡಿಯ ಬಾಡಿಗೆ ಮನೆಯಲ್ಲಿ ರಾಜಶೇಖರ್‌ ಮತ್ತು ಇಂದಿರಾಳ ಹಾಗೂ ಆಕೆಯ ಇಬ್ಬರು ಮಕ್ಕಳ ಜತೆ ವಾಸವಾಗಿದ್ದರು.

ಇದನ್ನೂ ಓದಿ:ಭದ್ರತಾ ಸಿಬ್ಬಂದಿಗೆ ಮೆಣಸಿನ ಹುಡಿ ಎರಚಿ ಜೈಲಿನಿಂದ ಪರಾರಿಯಾದ ಏಳು ಖದೀಮರು!

ಈ ಮಧ್ಯೆ ಆರೋಪಿಗಳು ನಾಲ್ಕು ತಿಂಗಳಿಂದ ಬಾಡಿಗೆ ಕೊಟ್ಟಿಲ್ಲ. ಜತೆಗೆ ರಾಜಶೇಖರ್‌ ಎರಡು ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಸಾಲಗಾರರ ಒತ್ತಡ ಹೆಚ್ಚಾಗಿತ್ತು. ಈ ಮಧ್ಯೆ ರಂಜಿತಾ ಕಾರ್ಯಕ್ರಮವೊಂದಕ್ಕೆ ಹೋಗಲು ನೆಕ್ಲೆಸ್‌, ಚಿನ್ನದ ಸರ ಹಾಕಿಕೊಂಡು ಹೋಗಿದ್ದು, ಸೆಲ್ಫಿ ಫೋಟೋವೊಂದನ್ನು ಕ್ಲಿಕ್ಕಿಸಿಕೊಂಡಿದ್ದರು. ಆ ಫೋಟೋ ನೋಡಿದ ಇಂದಿರಾ, ನಕ್ಲೆಸ್‌ ಬಗ್ಗೆ ವಿಚಾರಿಸಿ, ಅದನ್ನು ಕೊಟ್ಟರೆ, ಅದೇ ಮಾದರಿಯಲ್ಲಿ ಹೊಸ ನಕ್ಲೆಸ್‌ ಮಾಡಿಸಿಕೊಳ್ಳುತ್ತೇನೆ ಎಂದು ಕೇಳಿದ್ದಳು. ಆದರೆ, ರಂಜಿತಾ ಕೊಡಲು ನಿರಾಕರಿಸಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಿವಿ, ಕತ್ತು ಕೊಯ್ದು ಕೊಲೆ: ಅದರಿಂದ ಆಕ್ರೋಶಗೊಂಡಿದ್ದ ಆರೋಪಿಗಳು ರಂಜಿತಾ ಕೊಲೆಗೆ ಸಂಚು ರೂಪಿಸಿದ್ದರು. ಜು.10ರ ಶನಿವಾರ ಬೆಳಗ್ಗೆ ಇಂದಿರಾ ರಂಜಿತಾ ಮನೆಗೆ ಬಂದಿದ್ದಾಳೆ. ಬಳಿಕ ರಂಜಿತಾ ಸ್ನಾನಕ್ಕೆ ಹೋಗುತ್ತಿದ್ದಂತೆ ರಾಜಶೇಖರ್‌ನನ್ನು ಸ್ಥಳಕ್ಕೆ ಕರೆಸಿ ಕೊಂಡಿದ್ದಾಳೆ. ಸ್ನಾನದ ಕೋಣೆಯಿಂದ ರಂಜಿತಾ ಹೊರಗಡೆ ಬರುತ್ತಿದ್ದಂತೆ ಇಂದಿರಾ ಕೇಬಲ್‌ನಿಂದ ಆಕೆಯ ಕುತ್ತಿಗೆ ಬಿಗಿದು ರಾಜಶೇಖರ್‌ ಕುತ್ತಿಗೆ ಕೊಯ್ದು ಕೊಲೆಗೈದಿದ್ದಾನೆ. ಬಳಿಕ ನಕ್ಲೆಸ್‌ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಸಿಗದಿದ್ದಾಗ, ಓಲೆಗಾಗಿ 2 ಕಿವಿ ಕೊಯ್ದು, ಕಿವಿಗಳನ್ನು ಸ್ನಾನದ ಕೊಠಡಿಯಲ್ಲಿ ಬಿಸಾಡಿ ಹೋಗಿದ್ದರು. ಆದರೆ, ಆ ಓಲೆಗಳು ರೋಲ್ಡ್‌ಗೋಲ್ಡ್‌ ಎಂದು ತಿಳಿಯುತ್ತಿದ್ದಂತೆ ತಾಳಿ ಸರದಲ್ಲಿದ್ದ ಆರು ಗ್ರಾಂ ತೂದ ಎರಡು ಗುಂಡುಗಳನ್ನು ಕಳವು ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ಅಡಮಾನ ಇಟ್ಟು ಸಿಕ್ಕಿಬಿದ್ದರು!: ‌ ಕೊಲೆಯಾದ ಸ್ಥಳ ಪರಿಶೀಲನೆಯಲ್ಲಿ ಚಿನ್ನಾಭರಣ ಕಳವುವಾಗಿರುವ ಮಾಹಿತಿ ಇರಲಿಲ್ಲ. ಆದರೆ, ಮೃತದೇಹ ಕೊಂಡೊಯ್ದಾಗ ಪತಿ ಗುಂಡು ಕಳವುವಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಅನಂತರ ಸಮೀಪದ ಚಿನ್ನಾಭರಣ ಮಳಿಗೆಯಲ್ಲಿ ವಿಚಾರಣೆ ನಡೆಸಿದಾಗ ಆರೋಪಿಗಳು ಗುಂಡುಗಳನ್ನು ಅಡಮಾನ ಇಟ್ಟಿರುವ ಮಾಹಿತಿ ಸಿಕ್ಕಿತ್ತು. ಸಿಸಿ ಕ್ಯಾಮೆರಾ ಮಾಹಿತಿ ಸಂಗ್ರಹಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು

ನೆಕ್ಲೆಸ್‌ ರಂಜಿತಾಳದಲ್ಲ: ಅಸಲಿಗೆ ಫೋಟೋದಲ್ಲಿದ್ದ40 ಗ್ರಾಂ ತೂಕದ ನೆಕ್ಲೆಸ್‌ ಮೃತ ರಂಜಿತಾಳದಲ್ಲ.ಕಾರ್ಯಕ್ರಮಕ್ಕೆ ಹೋಗುವ ಸಲುವಾಗಿ ಪರಿಚಯಸ್ಥರ ಬಳಿ ಪಡೆದು ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಆ ಫೋಟೋ ನೋಡಿ ಇಂದಿರಾ ನೆಕ್ಲೆಸ್‌ ಕೇಳಿದ್ದಳು. ಆದರೆ, ನೆಕ್ಲೆಸ್‌ ಅಸಲಿ ಕಥೆಯನ್ನು ರಂಜಿತಾ ಮರೆ ಮಾಚಿದ್ದರು. ಹತ್ಯೆ ಬಳಿಕ ಚಿನ್ನದ ನೆಕ್ಲೆಸ್‌ ಸಿಗಲಿಲ್ಲ. ಆಕೆಯ ಕೊರಳಿನಲ್ಲಿದ್ದ ಆರು ಗ್ರಾಂ ತಾಳಿ ಗುಂಡುಗಳು ಮಾತ್ರ ಸಿಕ್ಕಿತ್ತು ಎಂದು ಮೂಲಗಳು ತಿಳಿಸಿವೆ.

ಮಕ್ಕಳಿಗೆ ದೃಶ್ಯಂ ಪಾಠ!: ಮತ್ತೂಂದೆಡೆ ಆರೋಪಿಗಳ ವಿಚಾರಣೆ ನಡೆಸಿದಾಗ ಗೊಂದಲದ ಹೇಳಿಕೆ ನೀಡಿದರು. ವಿಚಾರಣೆ ಸಂದರ್ಭದಲ್ಲಿ ಇಂದಿರಾಳ ಇಬ್ಬರು ಮಕ್ಕಳು, ಘಟನೆ ದಿನ ಅಮ್ಮ ಶೂಟಿಂಗ್‌ ಕೆಲಸಕ್ಕೆ ಹೋಗಿದ್ದರು. ನಾವು ಕೂಡ ಮನೆಯಲ್ಲಿ ಇರಲಿಲ್ಲ. ರಾತ್ರಿ ಎಲ್ಲರೂ ಒಟ್ಟಿಗೆ ಬಂದಿದ್ದೇವೆ ಎಂದು ತಾಯಿ ಇಂದಿರಾ ಹೇಳಿಕೊಟ್ಟಿದ್ದ ಕಥೆಯನ್ನು ಇಂಚಿಂಚೂ ಬಾಯಿಬಿಟ್ಟಿದ್ದರು. ಅಷ್ಟರಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಸಂಪೂರ್ಣ ಸಾಕ್ಷ್ಯ ಸಂಗ್ರಹಿಸಿದ್ದರು. ಅದನ್ನುಕಂಡ ಆರೋಪಿಗಳು ತಬ್ಬಿಬ್ಟಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.