ಸಾಧನೆಯ ಹಾದಿಯಲ್ಲಿ ದಿಗ್ಗಜರ ಸಮಾಗಮ


Team Udayavani, Jul 8, 2018, 2:44 PM IST

sadhane.jpg

ಬೆಂಗಳೂರು: ಸುದೀರ್ಘ‌ 37 ವರ್ಷ ಸರ್ಕಾರಿ ಸೇವೆ ಸಲ್ಲಿಸಿ ಮುಖ್ಯ ಕಾರ್ಯದರ್ಶಿಯಂತಹ ಉನ್ನತ ಹುದ್ದೆಯಿಂದ ನಿವೃತ್ತರಾದ ಮಹಿಳಾ ಅಧಿಕಾರಿಯ ಆಡಳಿತದ ಮೆಲುಕು, ಮೈಲುಗಲ್ಲುಗಳು ಅಕ್ಷರ ರೂಪದಲ್ಲಿ “ಸಾಧನೆಯ ಹಾದಿಯಲ್ಲಿ’ ಕೃತಿಯಾಗಿ ಮೂಡಿ ಬಂದಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರ “”ಕ್ರಾನಿಕಲ್ಸ್‌ ಆಫ್ ಆ್ಯನ್‌ ಎಸಿ ಸಾಬ್‌’ (ಸಾಧನೆಯ ಹಾದಿಯಲ್ಲಿ) ಕೃತಿಯನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶನಿವಾರ ಬಿಡುಗಡೆಗೊಳಿಸಿ ನೌಕರಶಾಹಿಯ ಕೊಡುಗೆಯನ್ನು ಕೊಂಡಾಡಿದರೆ,  ನಿರ್ಗಮಿತ ಹಿರಿಯ ಸಹೋದ್ಯೋಗಿಯ ಚೊಚ್ಚಲ ಕೃತಿಗೆ ಹಿರಿಯ, ಕಿರಿಯ ಅಧಿಕಾರಿ ವರ್ಗ ಸಾಕ್ಷಿಯಾಯಿತು.

“ಎಸಿ ಸಾಬ್‌’ ಕೊಡುಗೆ ಸ್ಮರಿಸಿ ಬೀದರ್‌ ಬಳಗ ಭಾವುಕರಾದರು. ಇಂತದ್ದೊಂದು ಅಪೂರ್ವ ಸಂದರ್ಭವನ್ನು ಕೃತಿ ಬಿಡುಗಡೆ ಸಮಾರಂಭ ಸೃಷ್ಟಿಸಿತ್ತು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ರತ್ನಪ್ರಭಾ ಅವರನ್ನು ಸರ್ಕಾರಿ ಸೇವೆಯಲ್ಲಿ ಬಳಸಿಕೊಳ್ಳಲಾಗುವುದು ಎಂದರು. ಸರ್ಕಾರದ ಖ್ಯಾತಿ, ಅಪಖ್ಯಾತಿ ಅಧಿಕಾರಿಗಳ ಕೈಯಲ್ಲಿದೆ.

ರಾಜ್ಯ, ರಾಷ್ಟ್ರದ ಅಭಿವೃದ್ಧಿಗೆ ಅಧಿಕಾರಶಾಹಿಯ ಕೊಡುಗೆ ಅಪಾರ. ಅಂದಿನ ಕಾಲದಲ್ಲಿ ಮಹಿಳಾ ಅಧಿಕಾರಿಣಿಯೊಬ್ಬರು ಕೆಲಸ ಮಾಡುವುದು ಸುಲಭದ ಮಾತಾಗಿರಲಿಲ್ಲ. ಮಾತೃ ಹೃದಯದಿಂದ ಕಾರ್ಯ ನಿರ್ವಹಿಸಿದ ಅವರಿಗೆ ತಮ್ಮ ಕರ್ತವ್ಯ ನಿರ್ವಹಣೆ ತೃಪ್ತಿ ತಂದಿದೆ ಎಂದು ಭಾವಿಸಿದ್ದೇನೆ ಎಂದರು.

ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯ, ಸಮ್ಮಿಶ್ರ ಸರ್ಕಾರ ನಡೆಸುವುದು ಬಹಳ ಕಷ್ಟ. ವಿರೋಧಿಗಳು ಸ್ನೇಹಿತರಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಅಂತಹ ಜವಾಬ್ದಾರಿಯನ್ನು ರತ್ನಪ್ರಭಾ ಅವರು ನಿರ್ವಹಿಸಿದ್ದು, ಸಮರ್ಥ ನಾಯಕರೆನಿಸಿದ್ದಾರೆ ಎಂದರು.

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌, ರತ್ನಪ್ರಭಾ ಅವರು ಹೆಚ್ಚು ಕೃತಿಗಳನ್ನು ರಚಿಸಿದರೆ ಯುವ ಅಧಿಕಾರಿಗಳಿಗೆ ದಾರಿದೀಪವಾಗಲಿದೆ ಎಂದು ಆಶಿಸಿದರು. ರತ್ನಪ್ರಭಾ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಐಎಎಸ್‌ ಅಧಿಕಾರಿಗಳಾದ ಪಿ.ಡಿ.ಶೆಣೈ, ಎಸ್‌.ವಿ.ರಂಗನಾಥ್‌, ಸಪ್ನ ಬುಕ್‌ಹೌಸ್‌ನ ನಿತಿನ್‌ ಶಾ, ಕೃತಿಯನ್ನು ಕನ್ನಡಕ್ಕೆ ಭಾಷಾಂತರಿಸಿರುವ ಜಿ.ಎನ್‌.ರಾಜಶೇಖರ್‌ ನಾಯ್ಡು ಗುಡಿಬಂಡೆ, ನೀರಜ್‌ ಬನ್ಸಾಲ್‌, ಎ.ವಿದ್ಯಾ ಸಾಗರ್‌ ಇತರರು ಉಪಸ್ಥಿತರಿದ್ದರು.

ರತ್ನಪ್ರಭಾ ಮನದಾಳದ ಮಾತು: ಔರಾದ್‌ನಿಂದ ಬರುತ್ತಿದ್ದ ಯುವಕನೊಬ್ಬ ತಮ್ಮೂರಿಗೆ ಬಂದು ಜನರ ಸಮಸ್ಯೆ ಆಲಿಸುವಂತೆ ಒತ್ತಾಯಿಸುತ್ತಿದ್ದ. ಒಮ್ಮೆ ತೀವ್ರ ಕಿರಿಕಿರಿ ಎನಿಸಿ ಅವನನ್ನು ಹೊರಕ್ಕೆ ಕಳುಹಿಸುವಂತೆ ಸಹಾಯಕರಿಗೆ ಸೂಚಿಸಿದೆ. ನನ್ನನ್ನು ನಿಂದಿಸುತ್ತಾ ಆತ ಹೊರ ಹೋದ.

ನಂತರ ನನಗೆ ಪತ್ರ ಬರೆದ ಆತ, “ಬ್ರಿಟೀಷರು ದೇಶ ಬಿಟ್ಟು ಹೋದರೂ ಅವರ ಅಹಂಕಾರವನ್ನು ನಿಮ್ಮಂತಹ ಐಎಎಸ್‌ ಅಧಿಕಾರಿಗಳಲ್ಲಿ ಬಿಟ್ಟು ಹೋಗಿದ್ದಾರೆ’ ಎಂದು ದೂರಿದ್ದ. ಒಂದು ದಿನ ಆತ ಹೇಳಿದ ಪ್ರದೇಶದಲ್ಲೇ ಜನಸಂಪರ್ಕ ದಿನ ಆಯೋಜಿಸಲು ಸೂಚಿಸಿದ್ದೆ. ಆ ದಿನ ಜೀಪ್‌ನಲ್ಲಿ ಹೋಗುವಾಗ ಸಾಕಷ್ಟು ಜನ ನಡೆದು ಹೋಗುತ್ತಿದ್ದರು.

ಆ ಬಗ್ಗೆ ಪ್ರಶ್ನಿಸಿದಾಗ ಅವರೆಲ್ಲಾ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿರುವ ವಿಚಾರ ತಿಳಿದು ಅಚ್ಚರಿಯಾಯಿತು. ಸಂಜೆ 5.30ರವರೆಗೆ ಜನರ ಸಮಸ್ಯೆಗಳನ್ನು ಆಲಿಸಿ ಸ್ಫಂದಿಸಿದ ಬಳಿಕ ಆ ಯುವಕ ಮರದ ಹಿಂದೆ ನಿಂತಿರುವುದು ಕಂಡು ಸಮಾಧಾನವಾಯಿತು. ತಿಂಗಳ ಬಳಿಕ ನನಗೆ ಚಿಕ್ಕಮಗಳೂರಿಗೆ ವರ್ಗಾವಾಯಿತು. ನಂತರ ಒಂದು ದಿನ ಆ ಯುವಕ ರಾಥೋಡ್‌ನಿಂದ ಪತ್ರ ಬಂದಿತ್ತು. ತನ್ನಿಂದ ತಪ್ಪಾಗಿದ್ದು, ಕ್ಷಮೆ ಕೇಳಿದ್ದರು. ನಾನು ಪತ್ರ ಬರೆದು ಕ್ಷಮೆ ಕೇಳಿದೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.