ಪ್ರೀತಿ ವಿಚಾರದಲ್ಲಿ ಗಲಾಟೆ; ಯುವತಿಯ ಮೇಲೆ ಆ್ಯಸಿಡ್ ಎರಚಿದ ಯುವಕ!
Team Udayavani, Apr 28, 2022, 1:02 PM IST
ಬೆಂಗಳೂರು: ಪ್ರೀತಿಯ ವಿಚಾರವಾಗಿ ಯುವಕನೋರ್ವ ಯುವತಿಗೆ ಆ್ಯಸಿಡ್ ಎರಚಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಯುವತಿಗೆ ಆ್ಯಸಿಡ್ ಎರಚಿದ ಯುವಕನನ್ನು ನಾಗೇಶ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಯುವತಿಯನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರೀತಿಯ ವಿಚಾರವಾಗಿ ನಾಗೇಶ್ ಯುವತಿಯ ಹಿಂದೆ ಬಿದ್ದಿದ್ದ. ಇದೇ ವಿಚಾರವಾಗಿ ಗಲಾಟೆಯಾಗಿತ್ತು. ಈ ಕೋಪದಲ್ಲಿ ಯುವಕ ಗುರುವಾರ ಬೆಳಗ್ಗೆ ಫೈನಾನ್ಸ್ ಕಂಪನಿಯೊಂದರ ಕಚೇರಿಯ ಬಳಿ ಯುವತಿಯ ಮೇಲೆ ಆ್ಯಸಿಡ್ ಎರಚಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಪೇದೆ ಪರೀಕ್ಷೆಯಲ್ಲೂ ಬ್ಲೂಟೂತ್ ಬಳಕೆ
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ನಾಗೇಶ್ ಎಂಬವನು ಯುವತಿ ಮೇಲೆ ಆ್ಯಸಿಡ್ ಹಾಕಿದ್ದಾನೆ. ಈ ಕಾಲದಲ್ಲಿ ಇದೊಂದು ಅಮಾನುಷ ಕೃತ್ಯ. ಪೊಲೀಸರು ಅವನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಯುವತಿಗೆ ಒಳ್ಳೆಯ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ