ಕಾರಲ್ಲಿ ಕೊಂಡೊಯ್ಯುತ್ತಿದ್ದ10 ಲಕ್ಷ ರೂ. ನಗದು ವಶ
Team Udayavani, Apr 19, 2018, 12:00 PM IST
ಬೆಂಗಳೂರು: ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಮತ್ತು ಪೊಲೀಸರು ನಗರದಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದು, ಕತ್ರಿಗುಪ್ಪೆಯ ವಾಟರ್ ಟ್ಯಾಂಕ್ ಬಳಿ ಐಶಾರಾಮಿ ಕಾರಿನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂ. ಗಳನ್ನು ಸ್ಥಿರ ತಪಾಸಣಾ ದಳ (ಎಸ್ಎಸ್ಟಿ) ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಇನ್ನೊಂದೆಡೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆಯಿಲ್ಲದೆ ಅಕ್ರಮವಾಗಿ 4 ಲಕ್ಷ ರೂ. ಮೌಲ್ಯದ ಸೀರೆ ಹಾಗೂ 4.92 ಲಕ್ಷ ನಗದನ್ನು ಚುನಾವಣಾ ವಿಚಕ್ಷಣಾ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಹಾಗೂ ಚುನಾವಣಾಧಿಕಾರಿಗಳನ್ನು ಒಳಗೊಂಡ ಎಸ್ಎಸ್ಟಿ ತಂಡ ಮಂಗಳವಾರ ವೇಳೆ ಕತ್ರಿಗುಪ್ಪೆ ವಾಟರ್ ಟ್ಯಾಂಕ್ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ಸಂಜೆ 5 ಗಂಟೆ ಸುಮಾರಿಗೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಬೆಂಝ್ ಕಾರು ಈ ಮಾರ್ಗದಲ್ಲಿ ಬಂದಾಗ ಸಿಬ್ಬಂದಿ ಕಾರು ನಿಲ್ಲಿಸಿ ತಪಾಸಣೆ ನಡೆಸಿದರು. ಈ ವೇಳೆ ಕಾರಿನಲ್ಲಿ 10 ಲಕ್ಷ ರೂ. ಪತ್ತೆಯಾಗಿದೆ. ಹಣದ ಕುರಿತು ಕಾರಿನಲ್ಲಿದ್ದ ಉದ್ಯಮಿ ಡೈಂಜಿನ್ ಎಂಬುವರನ್ನು ಪ್ರಶ್ನಿಸಿದಾಗ, ಇದು ರಿಯಲ್ ಎಸ್ಟೇಟ್ಗೆ ಸಂಬಂಧಿಸಿದ ಹಣವಾಗಿದ್ದು, ತಮಗೆ ಸೇರಿದ್ದು ಎಂದು ಹೇಳಿದ್ದಾರೆ. ಆದರೆ, ಈ ಕುರಿತು ದಾಖಲೆಗಳು ಅವರ ಬಳಿ ಇರಲಿಲ್ಲ.
ಈ ಹಿನ್ನೆಲೆಯಲ್ಲಿ ಹಣ ಜಪ್ತಿ ಮಾಡಿರುವ ಎಸ್ಎಸ್ಟಿ ಸಿಬ್ಬಂದಿ ಕಾರಿನಲ್ಲಿ ಪತ್ತೆಯಾದ ಈ ಹಣದ ಕುರಿತು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
164 ಸೀರೆಗಳ ಜಪ್ತಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸುಣಕಲ್ ಪೇಟೆ ಜಂಕ್ಷನ್ನಲ್ಲಿ ಕಾರೊಂದರ ಲ್ಲಿದ್ದ 168 ಸೀರೆಗಳು ಪತ್ತೆಯಾಗಿವೆ. ಕಾರು ಚಾಲಕ ಅಬ್ದಲ್ಲಾ ಎಂಬಾತನನ್ನು ದಾಖಲೆ ಕೇಳಿದಾಗ ತಬ್ಬಿಬ್ಟಾಗಿದ್ದಾನೆ. ಹೀಗಾಗಿ ಕಾರು, ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸೀರೆಗಳ ಮೌಲ್ಯ 4 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ