ಸುಲಿಗೆ ಮಾಡುವ ಆ್ಯಂಬುಲೆನ್ಸ್ ಚಾಲಕರ ವಿರುದ್ದ ಕ್ರಮ
Team Udayavani, May 31, 2021, 4:16 PM IST
ಬೆಂಗಳೂರು: ದುಬಾರಿ ಹಣ ವಸೂಲಿಮಾಡುವುದು ಗಮನಕ್ಕೆ ಬಂದರೆ ಅಂತಹಆ್ಯಂಬುಲೆನ್ಸ್ ಚಾಲಕರ ವಿರುದ್ಧ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯಸಚಿವ ಆರ್.ಅಶೋಕ ಹೇಳಿದರು.
ಪ್ರಧಾನಿ ಮೋದಿಯವರ ಆಡಳಿತಕ್ಕೆ ಏಳುವರ್ಷ ತುಂಬಿದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಕ್ಷೇತ್ರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕೆಲ ಆ್ಯಂಬುಲೆನ್ಸ್ ಚಾಲಕರು ಸೋಂಕಿನಿಂದಸಾವನ್ನಪ್ಪಿರುವವರ ಶವ ಸಾಗಿಸಲು, ಸೋಂಕಿತರನ್ನುಆಸ್ಪತ್ರೆಗೆ ದಾಖಲಿಸಲು ಸುಲಿಗೆ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ.
ಇಂಥ ಚಾಲಕರವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು.ಈಗಾಗಲೇ ಈ ಕುರಿತಂತೆ ಪೊಲೀಸ್ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜನ ಕೂಡಾಈ ರೀತಿ ಪ್ರಕರಣಗಳ ಕುರಿತು ದೂರುದಾಖಲಿಸಬೇಕು ಎಂದು ಹೇಳಿದರು.ನಗರದಲ್ಲಿ ನಿಧಾನಕ್ಕೆ ಪ್ರಕರಣಗಳ ಸಂಖ್ಯೆಇಳಿಕೆಯಾಗುತ್ತಿದೆ. ಸೋಂಕು ನಿಯಂತ್ರಿಸಲುಸಾಕಷ್ಟು ಕ್ರಮಗಳನ್ನ ಅನುಸರಿಸಲಾಗುತ್ತಿದೆ.ಸೋಂಕಿತರ ಪರೀಕ್ಷೆಯಲ್ಲಿ ಮಹತ್ತರ ನಿರ್ಧಾರತೆಗೆದುಕೊಳ್ಳಲಾಗಿದೆ. ಬೆಂಗಳೂರು ದಕ್ಷಿಣಭಾಗದಲ್ಲಿ ಆರ್ ಟಿ ಪಿ ಸಿ ಆರ್ ಪರೀಕ್ಷೆಯ ಜೊತೆಗೆರಕ್ತದ ಮಾದರಿಯನ್ನು ತೆಗೆದುಕೊಳ್ಳಲಾಗುತ್ತಿದೆ.
ಈಮೂಲಕ ಸೋಂಕಿನ ತೀವ್ರತೆಯನ್ನತಿಳಿಯಬಹುದಾಗಿದೆ. ಸೋಂಕಿತರಿಗೆ ಆಕ್ಸಿಜನ್ಬೆಂಬಲ, ಐಸಿಯೂ ಅಥವಾ ವೆಂಟಿಲೇಟರ್ ಚಿಕಿತ್ಸೆನೀಡಬೇಕಾ ಎಂಬುದು ಈ ರಕ್ತದ ಮಾದರಿಯಪರೀಕ್ಷೆಯಿಂದ ತಿಳಿದು ಬರಲಿದೆ. ಮೊದಲುಬೆಂಗಳೂರು ದಕ್ಷಿಣ ಭಾಗದಲ್ಲಿ ಇದನ್ನ ಜಾರಿಗೊಳಿಸಿನಂತರ ಉಳಿದ ಭಾಗಕ್ಕೂ ಜಾರಿಗೊಳಿಸಲಾಗುವುದು.ಈ ಪರೀಕ್ಷೆ ಸಂಪೂರ್ಣ ಉಚಿತವಾಗಿರುತ್ತದೆ ಎಂದುಹೇಳಿದರು.
ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಕುರಿತಂತೆಪ್ರತಿಕ್ರಿಯೆ ನೀಡಿದ ಸಚಿವರು, ರವಿ ಸುಬ್ರಹ್ಮಣ್ಯಅವರು ನನಗೆ ಇಪ್ಪತ್ತು ವರ್ಷದಿಂದ ಪರಿಚಿತರು.ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಬೇಕೆಂಬ ದುರುದ್ದೇಶಇಟ್ಟುಕೊಂಡೆ ಈ ತಿರುಚಿದ ಆಡಿಯೋ ಬಿಡುಗಡೆಮಾಡಲಾಗಿದೆ. ತನಿಖೆಗೆ ಆದೇಶಿಸಲಾಗಿದೆ.ಸಧ್ಯದಲ್ಲೇ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನರನಡುವೆ ಇದ್ದು ಅವರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.ಆದರೆ ವಿರೋಧ ಪಕ್ಷದ ನಾಯಕರಾದಸಿದ್ದರಾಮಯ್ಯನವರು ಕೇವಲ ಟ್ವೀಟ್ ನಲ್ಲಿ ಟೀಕೆಮಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದುಪ್ರತಿಪಕ್ಷಗಳ ಟೀಕೆಗೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?