ವಿದ್ಯಾರ್ಥಿಗಳ ನೇಮಕಕ್ಕೆ ಕ್ರಮ


Team Udayavani, Jul 25, 2020, 7:03 AM IST

ವಿದ್ಯಾರ್ಥಿಗಳ ನೇಮಕಕ್ಕೆ ಕ್ರಮ

ಬೆಂಗಳೂರು: ಕೋವಿಡ್‌ ಪರೀಕ್ಷೆಗಳು ನಿಗದಿತ ಗುರಿ ತಲುಪಲು ಕೊರತೆಯಿರುವ ಸಿಬ್ಬಂದಿಯನ್ನು ಪ್ರಕೃತಿ ವಿಕೋಪ ನಿರ್ವಹಣೆ ಅಧಿನಿಯಮದ ಅಡಿಯಲ್ಲಿ ಆದೇಶ ಹೊರಡಿಸಿ ನೇಮಕ ಮಾಡಿ ಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾ ಕರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನೇರ ನೇಮಕದ ಜತೆಗೆ ರಾಜೀವ್‌ ಗಾಂಧಿ ಆರೋಗ್ಯ ವಿವಿ ಅಂತಿಮ ವರ್ಷದ ಪ್ರಯೋಗಾಲಯ ತಂತ್ರಜ್ಞ ಕೋರ್ಸ್‌ ವಿದ್ಯಾರ್ಥಿಗಳು, ವಿಜ್ಞಾನ ಪದವೀಧರರು ಮತ್ತು ಸ್ವಯಂ ಸೇವಕರನ್ನು ತರಬೇತಿ ನೀಡಿ ಬಳಸಿಕೊಳ್ಳಲು ತಕ್ಷಣ ಆದೇಶ ಹೊರಡಿಸುವಂತೆ ವಿಡಿಯೋ ಸಂವಾದದಲ್ಲಿ ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದರು. ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕನಿಷ್ಠ 30 ಸಾವಿರ ಪರೀಕ್ಷೆ ಮಾಡುವ ಗುರಿ ನೀಡಲಾಗಿದೆ. ಆದರೆ, ಸಿಬ್ಬಂದಿ ಕೊರತೆಯಿಂದ ಗುರಿ ತಲುಪಲು ಆಗುತ್ತಿಲ್ಲ.

ಈಗಾಗಲೇ ನಗರದಲ್ಲಿರುವ ಎಂಬತ್ತು ಖಾಸಗಿ ಲ್ಯಾಬ್‌ಗಳ ಸಿಬ್ಬಂದಿ, ಪೀವರ್‌ ಕ್ಲಿನಿಕ್‌ಗಳಲ್ಲಿರುವ ಸಿಬ್ಬಂದಿಗ ಳನ್ನು ಬಳಸಿಕೊಂಡರು ಗುರಿ ತಲುಪಲು ಸಾಧ್ಯವಾಗುತ್ತಿಲ್ಲ.  ಮಾದರಿ ಸಂಗ್ರಹಕ್ಕೆ ಸಂಚಾರಿ ವಾಹನಗಳಿದ್ದರೂ ಸಿಬ್ಬಂದಿ ಕೊರತೆಯಿಂದ ಅವುಗಳನ್ನು ಬಳಸಲಾಗುತ್ತಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತಕ್ಷಣವೇ ಸಿಬ್ಬಂದಿ ಕೊರತೆ ನೀಗಿಸಲು ಆದೇಶಿಸಿದರು.

ಮಾಹಿತಿ ಸಂಗ್ರಹಿಸಿ ಹಂಚಿಕೊಳ್ಳಿ: ಸಮೀಕ್ಷೆಯಲ್ಲಿ ಸಂಗ್ರಹಿಸುವ ಮಾಹಿತಿ ಯನ್ನು ವಲಯವಾರು ಅಧಿಕಾರಿ ಮತ್ತು ಸಿಬ್ಬಂದಿಗೆ ಹಂಚಿಕೊಳ್ಳುವ ವ್ಯವಸ್ಥೆ ಸಮರ್ಪಕವಾಗಿ ಆಗುತ್ತಿಲ್ಲ. ಇದಕ್ಕಾಗಿ ಎಲ್ಲ ವಲಯಗಳಲ್ಲೂ ಸ್ಥಳೀಯ ಮಾಹಿತಿಗಳ ಡ್ಯಾಷ್‌ಬೋರ್ಡ್‌ ಸ್ಥಾಪನೆ ಮಾಡಿ ವಾರ್‌ರೂಮ್‌ಗೆ ಲಭ್ಯವಾಗುವ ಮಾಹಿತಿಗಳನ್ನು ಹಂಚಿಕೆ ಮಾಡಿಕೊಳ್ಳ ಬೇಕು. ಮಾಹಿತಿ ವಿಕೇಂದ್ರಿಕೃತಗೊಳ್ಳದಿದ್ದರೆ ಪ್ರಯೋಜನ ಆಗುವುದಿಲ್ಲ. ಇದಕ್ಕೆ ಪೂರಕವಾಗಿ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಕಿಯೋನಿಕ್ಸ್‌ ಮೂಲಕ ನೇಮಕ ಮಾಡಿಕೊಳ್ಳಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಜನಪ್ರತಿನಿಧಿಗಳು ಮತ್ತು ಸ್ಥಳೀಯರನ್ನು ಕೋವಿಡ್‌ಗೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಕೋವಿಡ್ ಸೋಂಕಿತರು, ಕ್ವಾರಂಟೈನ್‌ ಮತ್ತು ಚಿಕಿತ್ಸೆಗೆ ಸಂಬಂಧಿ ಸಿದಂತೆ ಜನರಲ್ಲಿ ಅರಿವಿನ ಕೊರತೆ ಇದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಜಾಗೃತಿ ಆಂದೋಲನಕ್ಕೆ ಕ್ರಿಯಾ ಯೋಜನೆ ರೂಪಿಸಬೇಕು ಎಂದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.