ಬೆಂಗಳೂರಿನಲ್ಲಿ ಅರ್ಚಕರ ಭವನ ನಿರ್ಮಾಣಕ್ಕೆ ಕ್ರಮ: ಶಶಿಕಲಾ ಜೊಲ್ಲೆ


Team Udayavani, Sep 16, 2021, 7:55 PM IST

fgsrt5r

ಬೆಂಗಳೂರು: ಹಿಂದೂ ದೇವಸ್ಥಾನಗಳ ಅರ್ಚಕರ ಹಿತ ದೃಷ್ಟಿಯಿಂದ ಬೆಂಗಳೂರಿನಲ್ಲಿ ಅರ್ಚಕರ ಭವನ ನಿರ್ಮಾಣ ಮಾಡುವ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವೆ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಗಮಿಸಿ ಜಯಮಹಲ್ ನಲ್ಲಿರುವ ತಮ್ಮ ಸರ್ಕಾರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ರಾಜ್ಯ ಮುಜರಾಯಿ ದೇವಸ್ಥಾನಗಳ ಅರ್ಚಕರ, ಆಗಮಿಕರ ಮತ್ತು ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರಿವಾಸ್ತವ ಅವರ ನೇತೃತ್ವದಲ್ಲಿ ಭೇಟಿ ಮಾಡಿದ ನೂರಕ್ಕೂ ಹೆಚ್ಚು ಅರ್ಚಕರ ನಿಯೋಗದ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು,  ನನಗೆ ಮುಜರಾಯಿ  ಇಲಾಖೆ ಸಿಕ್ಕಿರುವುದು ಹಿಂದಿನ ಜನ್ಮದ ಪುಣ್ಯ ಅನಿಸುತ್ತದೆ. ನಮಗೆ ಮಾನಸಿಕವಾಗಿ ಶಾಂತಿ ಸಮಾಧಾನ ಬೇಕು ಅಂದರೆ ದೇವಸ್ಥಾನಕ್ಕೆ ಹೋಗಿ ದೇವರಿಗೆ ಕೈಮುಗಿದಾಗ ನೆಮ್ಮದಿ ದೊರೆಯುತ್ತದೆ. ನಮ್ಮ ಹಿಂದು ಸಂಸ್ಕೃತಿ ಉಳಿಸಿಕೊಂಡು ಹೋಗಬೇಕು. ನಮ್ಮಲ್ಲಿ ವಿದೇಶಿ ಸಂಸ್ಕೃತಿ ಪಾಲನೆ ಹೆಚ್ಚಾಗುತ್ತಿದೆ ಆದರೆ, ವಿದೇಶಿಗರು ನಮ್ಮ ಸಂಸ್ಕೃತಿಯನ್ನು ಪಾಲನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ನಮ್ಮ ಸಂಸ್ಕೃತಿ ರಕ್ಷಣೆಗೆ ಬದ್ದವಾಗಿದೆ. ಅದಕ್ಕೆ ಅರ್ಚಕರ ಪಾತ್ರವೂ ಮಹತ್ವದ್ದಾಗಿದೆ ಎಂದು ಹೇಳಿದರು.

ಮುಜರಾಯಿ ಇಲಾಖೆಯಲ್ಲಿ ಎ.ಬಿ.ಸಿ ದರ್ಜೆಯ ದೇವಾಲಯಗಳಲ್ಲಿ ಸಿ ದರ್ಜೆಯ ದೇವಸ್ಥಾನಗಳ ಅರ್ಚಕರ ಸಮಸ್ಯೆಗಳು ಬಹಳಷ್ಟಿವೆ.  ಪ್ರಮುಖವಾಗಿ ಅರ್ಚಕರ ಭವನ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಅಲ್ಲದೆ ಅರ್ಚಕರಿಗೆ ಕ್ಯಾನ್ಸರ್, ಹೃದಯ ಸಂಬಂಧಿ  ಆರೋಗ್ಯದ ಸಮಸ್ಯೆಯಾದಾಗ ಅವರಿಗೆ ಆರ್ಥಿಕ ಸಹಾಯ ದೊರೆಯುವಂತೆ ನೋಡಿಕೊಳ್ಳಲು  ವಿಮೆ ಜಾರಿಗೊಳಿಸುವ ಬಗ್ಗೆ ಅಧಿವೇಶನದ ಬಳಿಕ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ. ತಸ್ತಿಕ್ ಹಣ  ಪಡೆಯಲು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ರಾಜ್ಯ ಸರ್ಕಾರ ದೇವಸ್ಥಾನಗಳ ರಕ್ಷಣೆ ಹಾಗೂ ಅರ್ಚಕರ ರಕ್ಷಣೆಗೆ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.

ವಿವಿಧ ಜಿಲ್ಲೆಗಳಿಂದ ಆಗಮಿಸಿದ ಅರ್ಚಕರು ತಮ್ಮ ಜಿಲ್ಲೆಗಳಲ್ಲಿ ಅರ್ಚಕರಿಗೆ ಇರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಪ್ರಮುಖವಾಗಿ ರಾಜ್ಯದ ಎಲ್ಲ ಅರ್ಚಕರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಅರ್ಚಕರ ಭವನ  ನಿರ್ಮಿಸುವುದು, ಅರ್ಚಕರಿಗೆ ಆರೋಗ್ಯ  ವಿಮೆ ಸಿ.ದರ್ಜೆಯ ದೇವಾಲಯಗಳ ಹಣವನ್ನು ಹೆಚ್ಚಳ ಮಾಡುವುದು, ಅರ್ಚಕರ ಮಕ್ಕಳಿಗೆ ಪೂಜಾ ತರಬೇತಿ ನೀಡಲು ಪಂಡಿತರನ್ನು ಕರೆಯಿತು ತರಬೇತಿ ನೀಡುವುದು,  ಸಾಮಾನ್ಯ ಸಂಪ್ರದಾಯ ನಿಧಿಯಿಂದ ಬ್ರಹ್ಮೋತ್ಸವ ನಡೆಸಲು ಸರ್ಕಾರದಿಂದ ಆರ್ಥಿಕ ಸಹಾಯ ಹಾಗೂ  ಅರ್ಚಕರು ಮನೆ ನಿರ್ಮಿಸಿಕೊಳ್ಳಲು ಕನಿಷ್ಠ ಐದು ಲಕ್ಷ ಸರ್ಕಾರದಿಂದ ಹಣ ಮಂಜೂರು ಮಾಡುವಂತೆ ಮನವಿ  ಮಾಡಿದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.