ಹಿರಿಯ ಕಲಾವಿದೆ ಕೃಷ್ಣಕುಮಾರಿ ನಿಧನ
Team Udayavani, Jan 25, 2018, 6:50 AM IST
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಚಲನಚಿತ್ರ ಹಿರಿಯ ಕಲಾವಿದೆ ಕೃಷ್ಣಕುಮಾರಿ (83)
ಬುಧವಾರ ಮುಂಜಾನೆ ನಿಧನರಾಗಿದ್ದಾರೆ.
ಮೂಳೆ ಕ್ಯಾನ್ಸರ್ಗೆ ತುತ್ತಾಗಿದ್ದ ಅವರು, ಅನಾರೋಗ್ಯ ತೀವ್ರಗೊಂಡು ಕೊನೆಯುಸಿರೆಳೆದಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿರುವ ಅವರು, “ಇಂಡಿಯನ್ ಎಕ್ಸ್ ಪ್ರಸ್’ ಪತ್ರಿಕೆಯ ಮಾಜಿ ಸಂಪಾದಕ ಅಜಯ… ಮೋಹನ್ ಖೈತಾನ್ ಅವರನ್ನು ವಿವಾಹವಾಗಿದ್ದರು. ಪುತ್ರಿ ದೀಪಿಕಾ, ಅಳಿಯ ವಿಕ್ರಮ್ ಮತ್ತು ಮೊಮ್ಮಗ ಪವನ್ ಜೊತೆಗೆ ಕೃಷ್ಣಕುಮಾರಿ ಬೆಂಗಳೂರಿನಲ್ಲಿ ನೆಲೆಸಿದ್ದರು. 1951ರಲ್ಲಿ ಬಿಡುಗಡೆಯಾದ “ನವ್ವುತೆ ನವರತ್ನಾಲು’ ಚಿತ್ರದಿಂದ ಕೃಷ್ಣಕುಮಾರಿ ಅವರು ಚಿತ್ರರಂಗಕ್ಕೆ ಪ್ರವೇಶಿಸಿದರು. 60ರ ದಶಕದ ಖ್ಯಾತ ನಟಿ ಎನಿಸಿಕೊಂಡಿದ್ದ ಅವರು, ತಮಿಳು, ಕನ್ನಡ ಸೇರಿದಂತೆ ಮಲಯಾಳಂ ಭಾಷಾಚಿತ್ರಗಳಲ್ಲೂ ನಟಿಸಿದ್ದರು. ತೆಲುಗು ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಕನ್ನಡದಲ್ಲಿ ಭಕ್ತ ಕನಕದಾಸ, ಸ್ವರ್ಣಗೌರಿ, ಸತಿ ಸಾವಿತ್ರಿ ಸೇರಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಬಹುಭಾಷಾ ಹಿರಿಯ ತಾರೆ “ಸಾಹುಕಾರ್ ಜಾನಕಿ’ ಸಹೋದರಿ ಕೂಡ ಹೌದು.
ನಾವಿಬ್ಬರು ಗೆಳತಿಯರಂತಿದ್ದೆವು. ಕಷ್ಟ ಸುಖಗಳಿಗೆ ಭಾಗಿಯಾಗುತ್ತಿದ್ದೆವು. ಕೃಷ್ಣಕುಮಾರಿ ಯಾರಿಗೇ ಆಗಲಿ, ನೇರವಾಗಿ ಮಾತಾಡುವ ಸ್ವಭಾವದವಳಾಗಿರಲಿಲ್ಲ. ಎಷ್ಟೇ ಕಷ್ಟವಿದ್ದರೂ ಅದನ್ನು ಹೇಳಿಕೊಳ್ಳುತ್ತಿರಲಿಲ್ಲ. ಅವಳನ್ನು ಕಳೆದುಕೊಂಡಿದ್ದು ತುಂಬಾ ದುಃಖ ತಂದಿದೆ. ನನ್ನ ಶರೀರದ ಒಂದು ಭಾಗ ಕಳೆದು ಹೋದಂತಾಗಿದೆ.
– ಸಾಹುಕಾರ್ ಜಾನಕಿ, ಸಹೋದರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ