30 ರಿಂದ ಅದಮ್ಯ ಚೇತನ ಸೇವಾ ಉತ್ಸವ


Team Udayavani, Dec 28, 2017, 11:50 AM IST

blore-4.jpg

ಬೆಂಗಳೂರು: ಅದಮ್ಯ ಚೇತನ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಡಿ.30ರಿಂದ ನಾಲ್ಕು ದಿನಗಳ
“ಅದಮ್ಯ ಚೇತನ ಸೇವಾ ಉತ್ಸವ-2018′ ಆಯೋಜಿಸಿದ್ದು, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಸಂಸ್ಥೆಯ ಅಧ್ಯಕ್ಷೆ ಹಾಗೂ ವ್ಯವಸ್ಥಾಪಕ ಟ್ರಸ್ಟಿ ತೇಜಸ್ವಿನಿ ಅನಂತ್‌ಕುಮಾರ್‌ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಡಿ.30ರಿಂದ ಜ.2ರವರೆಗೆ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಅದಮ್ಯ ಚೇತನ ಸೇವಾ ಉತ್ಸವ ನಡೆಯಲಿದೆ. ಇದೇ ವೇಳೆ ನ್ಯಾಷನಲ್‌ ಎಜುಕೇಷನ್‌ ಸೊಸೈಟಿಯ ಶತಮಾನೋತ್ಸವ ಸಂಭ್ರಮಾಚರಣೆ ಕೂಡ ನೆರವೇರಲಿದ್ದು, ಎರಡೂ ಕಾರ್ಯಕ್ರಮಗಳಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಚಾಲನೆ ನೀಡುವರು. ರಾಜ್ಯಪಾಲ ವಜುಬಾಯ್‌ ವಾಲಾ ಮತ್ತು ಸಿಎಂ ಸಿದ್ದರಾಮಯ್ಯ ಭಾಗವಹಿಸುವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕೇಂದ್ರ ಸಚಿವರಾದ ಅನಂತ್‌ಕುಮಾರ್‌, ಪ್ರಕಾಶ್‌
ಜಾವಡೇಕರ್‌, ಪಿಯೂಶ್‌ ಗೋಯಲ್‌ ಪಾಲ್ಗೊಳ್ಳಲಿದ್ದಾರೆ. ನ್ಯಾಷನಲ್‌ ಎಜುಕೇಷನ್‌ ಸೊಸೈಟಿಯ ಶತಮಾನೋತ್ಸವ
ಸಂಭ್ರಮದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷರಾದ ದಿ ಡಾ.ಎಚ್‌.ನರಸಿಂಹಯ್ಯ ಕುರಿತು ಕಿರು ಪರಿಚಯ ಪ್ರದರ್ಶನವಿದ್ದು, ಕ್ರಿಕೆಟ್‌ ಆಟಗಾರ ಅನಿಲ್‌ ಕುಂಬ್ಳೆ, ನಟಿ ಭಾರತಿ ವಿಷ್ಣುವರ್ಧನ್‌, ಇಸ್ರೋ ಅಧ್ಯಕ್ಷ ಡಾ. ಎ.ಎಸ್‌.ಕಿರಣ್‌ ಕುಮಾರ್‌ ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನವು ಈ ವರ್ಷ ಉತ್ಸವದಲ್ಲಿ ಪ್ರಮುಖ ಆಕರ್ಷಣೆಯಾಗಿದ್ದು, ದೇಶದ ಪ್ರಮುಖ ರಕ್ಷಣಾ ಮತ್ತು ವೈಮಾನಿಕ ಸಂಸ್ಥೆಗಳಾದ ಐಎಎಫ್, ಇಸ್ರೋ, ಎಡಿಎ, ಎಚ್‌ಎಎಲ್‌ ಪಾಲ್ಗೊಳ್ಳಲಿವೆ. ಇದೇ ವೇಳೆ ವೈಜಾಗ್‌ ನಿಂದ ಭಾರತೀಯ ವಾಯುಸೇನೆಯ ವರುಣಾಸ್ತ್ರ (ಜಲಾಂತರ್ಗಾಮಿ ಕ್ಷಿಪಣಿ) ಈ ಪ್ರದರ್ಶನದ ವಿಶೇಷವಾಗಿದೆ. ಅಷ್ಟೇ ಅಲ್ಲದೇ, ಪರಿಸರ-ವೈಜ್ಞಾನಿಕ ಪ್ರದರ್ಶನಗಳು ಸಹ ನಡೆಯಲಿದ್ದು, ವಿಶಿಷ್ಟ ನೇಚರ್‌ ಸೈನ್ಸ್‌ ಇಂಟರ್ನ್ಶಿಪ್‌ ಕಾರ್ಯಕ್ರಮವನ್ನು ವಾಗ್ದೇವಿ ವಿಲಾಸ್‌ ಸಂಸ್ಥೆಗಳ ಅಧ್ಯಕ್ಷ ಕೆ.ಹರೀಶ್‌ ನಡೆಸಿಕೊಡಲಿದ್ದಾರೆ. ಪ್ರಕೃತಿ-ಸಂಸ್ಕೃತಿ ಪ್ರದರ್ಶನ ಕೂಡ ಇರಲಿದೆ ಎಂದರು.

ಮಕ್ಕಳಿಗೆ ಹಲವು ಆಕರ್ಷಣೆ: ಮಕ್ಕಳಿಗೆ ವಿಶೇಷ ಆಕರ್ಷಣೆಯಾಗಿ ಸಿಮ್ಯುಲೇಟರ್‌ಗಳಿರುತ್ತವೆ. ರಕ್ತದಾನ ಶಿಬಿರ, ಪ್ರಶಸ್ತಿ ಪುರಸ್ಕೃತ ಸಿನಿಮಾ “ಜೀರ್‌ಜಿಂಬೆ’ ವಿಶೇಷ ಪ್ರದರ್ಶನ, ಗಿಡ ನಡೆವುದು ಮತ್ತು ಸೈಕಲ್‌ ರ್ಯಾಲಿ ಉತ್ಸವದ ಭಾಗವಾಗಲಿದೆ. 

ಸೌಂದರ್ಯ ಲಹರಿ ಮತ್ತು ಭಗವದ್ಗೀತೆ, ವಂದೇ ಮಾತರಂ ಸಾಮೂಹಿಕ ಪಠಣದೊಂದಿಗೆ ಯೋಗ, ನಿಸರ್ಗ-ವಿಜ್ಞಾನ ಪ್ರದರ್ಶನ, ಇಕೊ-ಚೇತನ ಪ್ರದರ್ಶನವೂ ಇದ್ದು, ಇದರಲ್ಲಿ ರಾಸಾಯನಿಕ ಮಕ್ತ ಧಾನ್ಯಗಳು, ಸಿರಿಧಾನ್ಯಗಳು, ರಾಸಾಯನಿಕ ಮುಕ್ತ ಸಾಬೂನು, ಟೆರೇಸ್‌ ಗಾರ್ಡ್‌ನ್‌ ಉತ್ಪನ್ನಗಳು, ಆಯುರ್ವೇದ ಔಷಧಗಳ ಪ್ರದರ್ಶನ ಮತ್ತು ಮಾರಾಟ, ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.