ಟೋಯಿಂಗ್‌ ಸಿಬ್ಬಂದಿಗೆ ಎಡಿಸಿಪಿ ತರಾಟೆ


Team Udayavani, Jul 2, 2019, 3:03 AM IST

toying

ಬೆಂಗಳೂರು: ನಿಷೇಧಿತ ಪ್ರದೇಶಗಳಲ್ಲಿ ನಿಂತಿದ್ದ ವಾಹನಗಳನ್ನು ಟೋಯಿಂಗ್‌ ಮಾಡುವ ಏಜೆನ್ಸಿ ಸಿಬ್ಬಂದಿ ವಿರುದ್ಧ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌ ಸೋಮವಾರ ಅಶೋಕನಗರ ಮೈದಾನದಲ್ಲಿ ಟೋಯಿಂಗ್‌ ಮಾಡುವ ಏಜೆನ್ಸಿಗಳ ಪ್ರತಿನಿಧಿಗಳ ಪರೇಡ್‌ ನಡೆಸಿ ನಿಯಮ ಉಲ್ಲಂಘನೆ ಮಾಡದಂತೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಟೋಯಿಂಗ್‌ ವಾಹನ ಸಿಬ್ಬಂದಿಯೇ ನಿಯಮಗಳನ್ನು ಉಲ್ಲಂಘಿಸುವುದು, ಟೋಯಿಂಗ್‌ ಮಾಡಿದ ವಾಹನಗಳಿಗೆ ಹಾನಿ ಆದರೂ ವಾಹನ ಮಾಲೀಕರ ವಿರುದ್ಧವೇ ಅಸಡ್ಡೆಯಿಂದ ವರ್ತಿಸುತ್ತಿರುವ ಬಗ್ಗೆ ನೂರಾರು ಮಂದಿ ವಾಹನ ಸವಾರರರಿಂದ ನೇರವಾಗಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ದೂರುಗಳು ಬರುತ್ತಿದ್ದವು.

ಈ ಹಿನ್ನೆಲೆಯಲ್ಲಿ ಸೋಮವಾರ ಸಂಚಾರ ವಿಭಾಗಗಳ ಎಲ್ಲ ಪೊಲೀಸ್‌ ಠಾಣೆಯ ಸಿಬ್ಬಂದಿ ಹಾಗೂ ಟೋಯಿಂಗ್‌ ಏಜೆನ್ಸಿ ಸಿಬ್ಬಂದಿ ಪರೇಡ್‌ ನಡೆಸಿದ್ದು, ಕೆಲ ಟೋಯಿಂಗ್‌ ವಾಹನಗಳನ್ನು ಖುದ್ದು ಪರಿಶೀಲಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟೋಯಿಂಗ್‌ ಮಾಡುವ ಯುವಕರ ಪೂರ್ವಾಪರ ಪರಿಶೀಲಿಸಿ, ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಅವರ ವಿವರ ನೊಂದಾಯಿಸಬೇಕು. ಸಮವಸ್ತ್ರ ಧರಿಸಬೇಕು. ಪ್ರಮುಖವಾಗಿ ಸಾರ್ವಜನಿಕರ ಜತೆ ಸಿಬ್ಬಂದಿ ಸರಿಯಾಗಿ ವರ್ತಿಸಬೇಕು. ಈ ಎಲ್ಲ ನಿಯಮಗಳನ್ನು ಪಾಲಿಸದಿದ್ದರೆ ಕೂಡಲೇ ಟೆಂಡರ್‌ ರದ್ದು ಪಡಿಸಲಾಗುವುದು.

ಯಾವುದೇ ವಾಹನವನ್ನು ಟೋಯಿಂಗ್‌ ಮಾಡುವ ಮೊದಲು ಆ ವಾಹನದ ಸಂಖ್ಯೆಯನ್ನು ಮೂರು ಬಾರಿ ಧ್ವನಿವರ್ಧಕದ ಮೂಲಕ ವಾಹನದ ಮಾಲೀಕರಿಗೆ ಎಚ್ಚರಿಕೆ ಕೊಡಬೇಕು. ಮೈಕ್‌ನಲ್ಲಿ ಕೂಗಿದಾಗ ವಾಹನ ಮಾಲೀಕರು ಓಡಿ ಬಂದರೆ ಅಥವಾ ವಾಹನಗಳನ್ನು ಟೋಯಿಂಗ್‌ ಮಾಡುವಂತಿಲ್ಲ.

ನಿಲುಗಡೆ ನಿಷೇದ ಪ್ರದೇಶದಲ್ಲಿ ವಾಹನ ನಿಲ್ಲಿಸಿದ್ದಕ್ಕೆ ದಂಡ ಹಾಕಬಹುದು ಎಂದು ಹರಿಶೇಖರನ್‌ ಎಚ್ಚರಿಕೆ ನೀಡಿದರು. ಇದರೊಂದಿಗೆ ಸಂಚಾರ ವಿಭಾಗದ ಇನ್‌ಸ್ಪೆಕ್ಟರ್‌, ಪಿಎಸ್‌ಐ, ಎಎಸ್‌ಐಗಳು ಮಾತ್ರ ದಂಡದ ಮೊತ್ತ ಸಂಗ್ರಹಿಸಬೇಕು. ಒಂದು ವೇಳೆ ಕಾನೂನು ನಿಗದಿಗಿಂತ ಹೆಚ್ಚಿನ ಮೊತ್ತವನ್ನು ಸಂಗ್ರಹಿಸುವುದು, ರಸೀದಿ ನೀಡದಿರುವ ಬಗ್ಗೆ ದೂರುಗಳು ಬಂದಲ್ಲಿ ಅಂತಹ ಅಧಿಕಾರಿಯ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೂ ಬಿಸಿ ಮುಟ್ಟಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌, ನಗರಾದ್ಯಂತ 44 ಸಂಚಾರ ಪೊಲೀಸ್‌ ಠಾಣೆಗಳಿವೆ. ಟೋಯಿಂಗ್‌ ಮಾಡಲು 86 ವಾಹನಗಳಿವೆ. ಈ ವೇಳೆ ಟೋಯಿಂಗ್‌ ಸಿಬ್ಬಂದಿ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಪರೇಡ್‌ ನಡೆಸಲಾಗಿದ್ದು, ಕಾನೂನು ನಿಯಮ ಪಾಲನೆ ಮಾಡಬೇಕೆಂದು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.

ಪ್ರಮುಖ ಅಂಶಗಳು: ಟೋಯಿಂಗ್‌ ವಾಹನದ ಉಸ್ತುವಾರಿ ಅಧಿಕಾರಿಯ ಕರ್ತವ್ಯಗಳು ಮತ್ತು ಜವಾಬ್ದಾರಿಗಳೇನು? ಟೋಯಿಂಗ್‌ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ(ಚಾಲಕ, ವಾಹನ ಎತ್ತುವ ಸಹಾಯಕರು) ಪಾತ್ರ ಮತ್ತು ಹೊಣೆಗಾರಿಕೆ.

ಟೋಯಿಂಗ್‌ ಕಾರ್ಯಾಚರಣೆ ವೇಳೆ(ಉಸ್ತುವಾರಿ ಅಧಿಕಾರಿ ಮತ್ತು ಟೋಯಿಂಗ್‌ ಸಿಬ್ಬಂದಿ) ಶಿಷ್ಟಾಚಾರದ ವರ್ತನೆಗಳು ಬಗ್ಗೆ ಸೂಕ್ತ ನಿರ್ದೇಶನ ಹಾಗೂ ವಿಶೇಷ ಕರ್ತವ್ಯಗಳ ಸಮಯದಲ್ಲಿ ಟೋಯಿಂಗ್‌ ವಾಹನ ಬಳಕೆ,ಟೋಯಿಂಗ್‌ ವಾಹನದಲ್ಲಿ ಇಡಬೇಕಾದ ಸಂಚಾರ ಉಪಕರಣಗಳು ಬಗ್ಗೆ ಮಾಹಿತಿ ಪರೇಡ್‌ನ‌ಲ್ಲಿ ಮಾಹಿತಿ ನೀಡಲಾಯಿತು.

ಟಾಪ್ ನ್ಯೂಸ್

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.