ಹಾಲುಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ
Team Udayavani, Feb 13, 2017, 12:26 PM IST
ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಹಾಲುಮತ ಮಹಾಸಭಾ ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್ನಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಾಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಹಾಸಭಾ ಅಧ್ಯಕ್ಷ ರುದ್ರಣ್ಣ ಗುಳಗುಳಿ, “”ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬುದು ಕುರುಬ ಸಮುದಾಯದ ಏಕೈಕ ಬೇಡಿಕೆಯಾಗಿದೆ. ಕಳೆದ ನವೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆದ ಬೃಹತ್ ಕುರುಬರ ಸಮಾವೇಶದಲ್ಲಿ ಈ ವಿಚಾರವಾಗಿ ಒಮ್ಮತದ ನಿರ್ಣಯವನ್ನೂ ಅಂಗೀಕರಿಸಲಾಗಿದೆ,” ಎಂದು ಹೇಳಿದರು.
“ಕುರುಬ ಸಮುದಾಯವು ನಾಯಕ ಸೇರಿದಂತೆ ಪರಿಶಿಷ್ಟ ಪಂಗಡದಲ್ಲಿ ಬರುವ ಇತರೆ ಸಮುದಾಯಗಳಷ್ಟೇ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಅಲ್ಲದೆ, ನಮ್ಮ ಸಮುದಾಯವನ್ನು ಪ.ಪಂಗಡಕ್ಕೆ ಸೇರಿಸಲು ಬೇಕಾದ ಎಲ್ಲಾ ಸಕಾರಣಗಳೂ ಇವೆ. ಹಾಗಾಗಿ ರಾಜ್ಯ ಸರ್ಕಾರ ಈ ಸಂಬಂಧ ಕೂಡಲೇ ದಿಟ್ಟ ನಿರ್ಧಾರ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.
“ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕು ಎಂಬ ಶಿಫಾರಸು ಇಂದು ನಿನ್ನೆಯದಲ್ಲ, ದಶಕಗಳಿಂದಲೂ ಇದೆ. ಆದರೆ, ಸರ್ಕಾರ ಇದುವರೆಗೂ ಬೇಡಿಕೆ ಈಡೇರಿಸಿಲ್ಲ. ಇದೇ ಧೋರಣೆ ಮುಂದುವರಿದರೆ ನಮಗೆ ಸಿಗಬೇಕಾದ ಮೀಸಲಾತಿ ಸೌಲಭ್ಯಗಳಿಗಾಗಿ ಬೀದಿಗಿಳಿದು ತೀವ್ರ ಸ್ವರೂಪದ ಹೋರಾಟಗಳನ್ನು ಮಾಡಬೇಕಾಗುತ್ತದೆ,” ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಕಾರ್ಯದರ್ಶಿ ಮುತ್ತುರಾಜ್ ಸೇರಿದಂತೆ ಪದಾಧಿಕಾರಿಗಳು, ಸಮುದಾಯದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ