ಡೊಳ್ಳುಹೊಟ್ಟೆ ಪೊಲೀಸರಿಗೆ ಎಡಿಜಿಪಿ ಭಾಸ್ಕರ್ರಾವ್ ಎಚ್ಚರಿಕೆ
Team Udayavani, Jul 9, 2018, 6:15 AM IST
ಬೆಂಗಳೂರು: ಪೊಲೀಸರ ಡೊಳ್ಳುಹೊಟ್ಟೆಯಿಂದ ಇಲಾಖೆ ಮುಜುಗರಕ್ಕೀಡಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೆಎಸ್ಆರ್ಪಿ ಎಡಿಜಿಪಿ ಭಾಸ್ಕರ್ ರಾವ್ ಇಲಾಖಾ ಸಿಬ್ಬಂದಿ ಹೊಟ್ಟೆ ಕರಗಿಸಿಕೊಳ್ಳುವ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ.
ಡೊಳ್ಳು ಹೊಟ್ಟೆ ಇರುವ ಪೊಲೀಸರನ್ನು ದೈಹಿಕವಾಗಿ ಸದೃಢರನ್ನಾಗಿ ಮಾಡುವ ದೃಷ್ಠಿಯಿಂದ ಹಾಗೂ ಆರೋಗ್ಯದ ಸಲುವಾಗಿ ಈ ಆದೇಶ ಹೊರಡಿಸಿದ್ದು,ರಾಜ್ಯದ 12 ಕೆಎಸ್ಆರ್ಟಿಪಿ ಪಡೆಗಳ ಕಮಾಂಡೆಂಟ್ಗಳು ತಮ್ಮ ಕೆಳಸ್ತರದ ಅಧಿಕಾರಿಗಳ ತೂಕದ ಬಗ್ಗೆ ನಿಗಾ ವಹಿಸಬೇಕೆಂದು ಸೂಚಿಸಿದ್ದಾರೆ.
ಕೆಎಸ್ಆರ್ಪಿ ಪ್ರಹಾರ ದಳವಾಗಿ ಕರ್ತವ್ಯ ನಿರ್ವಹಿಸುತ್ತಿದೆ. ಈ ಪಡೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ,
ಉತ್ತಮ ಆರೋಗ್ಯ ಹೊಂದಿರಬೇಕು. ಆದರೆ, ಇತ್ತೀಚೆಗೆ ಕೆಲಸದೊತ್ತಡದಲ್ಲಿ ಆರೋಗ್ಯವನ್ನು ನಿರ್ಲಕ್ಷಿಸುತ್ತಿದ್ದಾರೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಎತ್ತರಕ್ಕೆ ತಕ್ಕಂತೆ ತೂಕ ಹೊಂದಬೇಕು. ಅಲ್ಲದೆ, ಕೆಎಸ್ಆರ್ಪಿಯಲ್ಲಿ ವಿವಿಧ ಕಾರಣಗಳಿಂದ ನಿಧನ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಪರಿಶೀಲಿಸಿದಾಗ ಮೂಲ ಕಾರಣ ಸಿಬ್ಬಂದಿಯ ಜೀವನ ಶೈಲಿ, ಆಹಾರ ಪದಟಛಿತಿ ಹಾಗೂ
ವ್ಯಾಯಾಮ ಮಾಡದಿರುವುದೇ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಡೊಳ್ಳು ಹೊಟ್ಟೆ ಪೊಲೀಸರ ಹೊಟ್ಟೆ ಕರಗಿಸುವ ಜವಾಬ್ದಾರಿಯನ್ನು ಅಯಾ
ಪಡೆಯ ಕಮಾಂಡೆಂಟ್ಗಳು ವಹಿಸಬೇಕು. ಅಗತ್ಯಕ್ಕಿಂದ ಹೆಚ್ಚಿನ ತೂಕವುಳ್ಳ ಅಧಿಕಾರಿ ಹಾಗೂ ಸಿಬ್ಬಂದಿ ಪ್ರತ್ಯೇಕಿಸಿ ಉತ್ತಮವಾದ ಹಾಗೂ ನಿಯಮಿತವಾದ ಪೌಷ್ಠಿಕ ಆಹಾರ ಪದ್ಧತಿ ಹಾಗೂ ನಿತ್ಯ ಯೋಗ, ವ್ಯಾಯಾಮಗಳನ್ನು ಮಾಡಿ ತೂಕವನ್ನು ಕಡಿಮೆ ಮಾಡಿಕೊಳ್ಳುವ ಬಗ್ಗೆ ಸೂಕ್ತ
ನಿಗಾವಹಿಸಬೇಕು.ಹಾಗೆಯೇ ಪ್ರತಿ ತಿಂಗಳು ಸಿಬ್ಬಂದಿ ತೂಕವನ್ನು ಪರಿಶೀಲಿಸಿ ಪುಸ್ತಕದಲ್ಲಿ ನಮೂದಿಸಬೇಕೆಂದು ಭಾಸ್ಕರ್ ರಾವ್ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ