ಸಾರ್ವಜನಿಕರ ಸಂಪರ್ಕಕ್ಕೆ 24X7 ಲಭ್ಯವಿರಲಿದ್ದೇನೆ


Team Udayavani, Apr 2, 2021, 11:09 AM IST

ಸಾರ್ವಜನಿಕರ ಸಂಪರ್ಕಕ್ಕೆ 24X7 ಲಭ್ಯವಿರಲಿದ್ದೇನೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಆಗಿ ರಾಕೇಶ್‌ಸಿಂಗ್‌ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ನಗರದಲ್ಲಿ ಕೋವಿಡ್ ಸೋಂಕು ಉಲ್ಬಣ, ಜನಪ್ರತಿನಿಧಿಗಳು ಇಲ್ಲದ ಸಂದರ್ಭ ಹಾಗೂ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ ಹೊಣೆಯೂ ರಾಕೇಶ್‌ ಸಿಂಗ್‌ ಅವರ ಮೇಲಿದೆ. ಈ ಸಂದರ್ಭದಲ್ಲಿ ಪಾಲಿಕೆಯ ಆಡಳಿತಾಧಿಕಾರಿ ಆಗಿ ಅವರ ಮುಂದಿರುವ ಸವಾಲುಗಳು ಏನು ಮತ್ತು ಅವರ ದೂರದೃಷ್ಟಿ ಯೋಜನೆ ಏನು ಎನ್ನುವ ಬಗ್ಗೆ “ಉದಯವಾಣಿ’ ಯೊಂದಿಗೆ ರಾಕೇಶ್‌ಸಿಂಗ್‌ ಮುಕ್ತವಾಗಿ ಮಾತನಾಡಿದ್ದಾರೆ

ಜನಪ್ರತಿನಿಧಿಗಳು ಇಲ್ಲದೆ ಇರುವುದರಿಂದ ಪಾಲಿಕೆ ಮತ್ತು ಜನ ಸಂಪರ್ಕ ಕುಸಿದಿದೆ, ನಿಟ್ಟಿ ನಲ್ಲಿ ನಿಮ್ಮ ಯೋಜನೆ ಏನು ?

ಸಾರ್ವಜನಿಕ ಸಂಪರ್ಕಕ್ಕೆ ಆದ್ಯತೆ ನೀಡಲಾಗುವುದು. 24/7 ನಾನು ಲಭ್ಯವಿರಲಿದ್ದೇನೆ. ತುರ್ತು ಸಭೆಗಳನ್ನು ಹೊರತು ಪಡಿಸಿ ಉಳಿದೆಲ್ಲ ಸಂದರ್ಭದಲ್ಲಿ ಜನರಿಗೆ ನಾನು ಸಿಗಲಿದ್ದೇನೆ.

ಜನ ಸಂಪರ್ಕಕ್ಕೆ ವಿಶೇಷ ಯೋಜನೆ ನಿರೀಕ್ಷಿಸಬಹುದೇ?

ಜನ ಸಂಪರ್ಕಕ್ಕೆ ಆದ್ಯತೆ ನೀಡಲಾಗುವುದು. ಈ ಸಂಬಂಧ ವಿಶೇಷ ಯೋಜನೆ ರೂಪಿಸಿಕೊಳ್ಳುವ ನಿಟ್ಟಿ ನಲ್ಲಿ ಚರ್ಚೆ ಮಾಡಿ ಶೀಘ್ರ ಕ್ರಮವಹಿಸಲಾಗುವುದು.

ಕಠಿಣ ಪರಿಸ್ಥಿತಿಯಲ್ಲಿ ಆಡಳಿತಾಧಿಕಾರಿಯಾಗಿ ನಿಯೋಜನೆಗೊಂಡಿದ್ದೀರಿ ಸವಾಲಿನ ಬಗ್ಗೆ ?

ಯಾವುದೇ ಸಂಸ್ಥೆಯಾದರೂ ಒಬ್ಬ ವ್ಯಕ್ತಿ ಮೇಲೆ ಅವಲಂಬಿಸಿರುವುದಿಲ್ಲ. ಇಡೀ ತಂಡ ಮುಖ್ಯ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಒಟ್ಟಾಗಿ ಸಾಗುವ ಕೆಲಸ ಮಾಡುತ್ತೇನೆ.

ಆಡಳಿತಾಧಿಕಾರಿ ನಿರ್ಣಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯೇ ಸಿಗುವುದೆ ?

ಪಾಲಿಕೆಯಿಂದ ಸರ್ಕಾರಕ್ಕೆ ಹೋಗುವ ಪ್ರಸ್ತಾವನೆ, ನಿರ್ಣಯ ಮತ್ತು ಎಲ್ಲಮಾಹಿತಿಯನ್ನು ಮಾಧ್ಯಮಗಳ ಮೂಲಕಮತ್ತು ಪಾಲಿಕೆ ವೆಬ್‌ಸೈಟ್‌ನ ಮೂಲಕ ಜನರಿಗೆ ತಲುಪಿಸಲಾಗುವುದು.

ಬಿಬಿಎಂಪಿಗೆ ಹೊಸ ಪ್ರದೇಶ ಸೇರ್ಪಡೆ ಬಗ್ಗೆ ?

ಸರ್ಕಾರ ರಸ್ತೆ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ನೀಡಿದೆ. ವಿವಿಧ ಆದಾಯ ಮೂಲ ಬಳಸಿಕೊಂಡು ಹೊಸ ಪ್ರದೇಶ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.

ನಗರದಲ್ಲಿ ಕೋವಿಡ್ ಸೋಂಕು ಉಲ್ಬಣಿಸಿದೆ. ಬಗ್ಗೆ ತುರ್ತು ಕ್ರಮ ಏನು ?

ನಗರದಲ್ಲಿ ಕೋವಿಡ್ ಸೋಂಕು ತಡೆಗೆ ಕೇಂದ್ರ ಸರ್ಕಾರದ ಐದು ಅಂಶಗಳಿಗೆ ಆದ್ಯತೆ ನೀಡಲಾಗುವುದು. ಈ ನಿಟ್ಟಿನಲ್ಲಿ ಪ್ರತಿದಿನ ಪರಿಶೀಲನೆ ನಡೆಸಿ ಕ್ರಮ ವಹಿಸಲಾಗುವುದು.

ಪಾಲಿಕೆಯ ಆರ್ಥಿಕ ನಿರ್ವಹಣೆ ಮತ್ತು ಭ್ರಷ್ಟಾಚಾರ ತಡೆಗೆ ಯೋಜನೆ ಏನು ?

ಪಾಲಿಕೆಯ ನಿರ್ವಹಣೆ ಬಗ್ಗೆ ಒಂದು ವಾರ ಪರಿಶೀಲಿಸಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.

 ವಿಶೇಷ ಆಯುಕ್ತರನ್ನೇ ವಲಯ ಜಂಟಿ ಆಯುಕ್ತರಾನ್ನಾಗಿ ನಿಯೋಜಿಸಲಾಗಿದೆ ಇದರಿಂದ ಆಡಳಿತಾತ್ಮಕ ನಿರ್ವಹಣೆ ಮೇಲೆ ಪರಿಣಾಮ ಬೀರಲಿದೆಯೇ?

ಬಿಬಿಎಂಪಿ ಹೊಸ ಕಾಯ್ದೆಯ ಪ್ರಕಾರ ವಿಶೇಷ ಆಯುಕ್ತರು ವಲಯ ಜಂಟಿ ಆಯುಕ್ತ ರಾಗಿ ಕಾರ್ಯುನಿರ್ವಹಿಸಲಿದ್ದಾರೆ. ವಿಶೇಷ ಆಯುಕ್ತರ ಜವಾಬ್ದಾರಿ ಆಯುಕ್ತರ ಮಟ್ಟಕ್ಕೆ ಏರಿಕೆ ಆಗಿದೆ. ಹಾಲಿ ಜಂಟಿ ಆಯುಕ್ತರು ಇವರಿಗೆ ಆಡಳಿತಾತ್ಮಕ ನಿರ್ವಹಣೆಯಲ್ಲಿ ನೆರವು ನೀಡಲಿದ್ದಾರೆ.

 

ಹಿತೇಶ್ ವೈ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.