ಜಾಹೀರಾತು ಬೈಲಾ ಬೇಗುದಿ


Team Udayavani, Jul 30, 2019, 3:10 AM IST

jahiratu

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ನಗರಾಭಿವೃದ್ಧಿ ಇಲಾಖೆ ನಡುವೆ ಕಗ್ಗಂಟಾಗಿರುವ ಹೊರಾಂಗಣ ಜಾಹೀರಾತು ಬೈಲಾ ವಿಚಾರ ಸೋಮವಾರ ನಡೆದ ಪಾಲಿಕೆ ಕೌನ್ಸಿಲ್‌ ಸಭೆಯಲ್ಲಿ ಪ್ರತಿಧ್ವನಿಸಿತು. ಬಹುತೇಕ ಸದಸ್ಯರಿಂದ “ಜಾಹೀರಾತು ಬೇಡ’ ಎಂದು ಒಕ್ಕೊರಲ ಅಭಿಪ್ರಾಯ ವ್ಯಕ್ತವಾದರೂ, ಈ ಸಂಬಂಧ ಯಾವುದೇ ನಿರ್ಣಯಕ್ಕೆ ಬರಲು ಸಾಧ್ಯವಾಗಲಿಲ್ಲ.

ಪಾಲಿಕೆಯ ಕೆಂಪೇಗೌಡ ಸಭಾಗಂಣದಲ್ಲಿ ನಡೆದ ವಿಶೇಷ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ರೂಪಿಸಿರುವ “ಬಿಬಿಎಂಪಿ ಜಾಹೀರಾತು ನಿಯಮಗಳು-2019’ರ ಕರಡು ವಿರುದ್ಧ ಪಕ್ಷಾತೀತವಾಗಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ದುರುದ್ದೇಶದಿಂದ ಕೂಡಿದ ಈ ಹೊಸ ಕರಡು ಕೈಬಿಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ಪರಿಣಾಮ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಸಭೆಯನ್ನು ಮಂಗಳವಾರಕ್ಕೆ ಮುಂದೂಡಿದರು.

ಸಭೆ ಆರಂಭದಲ್ಲಿ ಜಾಹೀರಾತು ನಿಯಮಗಳು-2019ರ ಕರಡು ಬಗ್ಗೆ ಆಡಳಿತ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌ ವಿಷಯ ಪ್ರಸ್ತಾಪಿಸಿದರು. ಜಾಹೀರಾತು ನೀತಿಯು ಹಲವು ಗೊಂದಗಳಿಂದ ಕೂಡಿದೆ. ಪಾಲಿಕೆಯ 2018ರ ಬೈಲಾ ಮತ್ತು ಸರ್ಕಾರ ರೂಪಿಸಿರುವ ಹೊಸ ನಿಯಮದ ಬಗ್ಗೆ ಚರ್ಚೆ ನಡೆಯಬೇಕಾಗಿದೆ. ಸರ್ಕಾರ ಕೆಎಂಸಿ ಕಾಯ್ದೆ 427 ಕಲಂ ಪ್ರಕಾರ ಹೊಸ ನೀತಿ ರೂಪಿಸಿದೆ ಎಂದು ಹೇಳಿದರು.

ಮಾಜಿ ಸಚಿವರ ಕೈವಾಡ; ಆರೋಪ: ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಮಾತನಾಡಿ, “ಪಾಲಿಕೆ ರೂಪಿಸಿದ ಬೈಲಾ ಸಮರ್ಪಕವಾಗಿಲ್ಲ ಎಂದು ಸರ್ಕಾರ ಯಾವುದೇ ನೋಟಿಸ್‌ ನೀಡಿಲ್ಲ. ಕರಡು ಕೈಬಿಡುವಂತೆ ನಿರ್ಣಯ ತೆಗೆದುಕೊಳ್ಳಬೇಕು. ಪಾಲಿಕೆ ಸದಸ್ಯರ ನಿರ್ಣಯವನ್ನು ಕಡೆಗಣಿಸಿ, ಸದಸ್ಯರಿಗೆ ಅವಮಾನ ಮಾಡಿದಂತಾಗಿದೆ. ಪಾಲಿಕೆಯ ಸದಸ್ಯರು ಸರ್ವಾನುಮತದಿಂದ ತೆಗೆದುಕೊಂಡ ನಿರ್ಣಯವನ್ನು ಪಾಲಿಕೆ ಗಮನಕ್ಕೆ ತರದೆ, ಹೊಸ ಕರಡು ರೂಪಿಸಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಉಸ್ತವಾರಿ ಸಚಿವರು ಚುನಾವಣಾ ನೀತಿಸಹಿಂತೆ ಸಂದರ್ಭದಲ್ಲೇ ಈ ಸಂಬಂಧ ಎರಡೆರಡು ಬಾರಿ ಸಭೆ ನಡೆಸಿ, “ಬಿಬಿಎಂಪಿ ಜಾಹೀರಾತು ನಿಯಮಗಳು-2019’ರ ಕರಡು ರೂಪಿಸಿದ್ದಾರೆ. ಚುನಾವಣೆಗೆ ಹಣ ಸಂಗ್ರಹಿಸುವ ಉದ್ದೇಶದಿಂದ ಈ ರೀತಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಈಗ ಹೊಸ ಕರಡಿನಲ್ಲಿ ಖಾಸಗಿ ಜಾಹೀರಾತಿಗೆ ಅನುಮತಿ ನೀಡಲಾಗಿದೆ ಮತ್ತು ನಿಯಮ ಉಲ್ಲಂ ಸಿದರೆ, ಒಂದು ದಿನಕ್ಕೆ ಒಂದು ಸಾವಿರ ರೂ.ದಂಡ ಎಂದು ಉಲ್ಲೇಖೀಸಲಾಗಿದೆ. ದಿನಕ್ಕೆ ಒಂದು ಸಾವಿರ ರೂ. ನೀಡಿ ಅವರು ಲಕ್ಷಾಂತರ ರೂ. ಲಾಭ ಮಾಡಿಕೊಳ್ಳುತ್ತಾರೆ ಎಂದೂ ಎಂದೂ ಪದ್ಮನಾಭ ರೆಡ್ಡಿ ಆರೋಪಿಸಿದರು.

ಮೂರು ತಿಂಗಳಲ್ಲೇ ಅನುಮೋದಿಸಬೇಕಿತ್ತು: ಪದ್ಮನಾಭ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ ಪಾಲಿಕೆ ಸದಸ್ಯ ಮಂಜುನಾಥ ರಾಜು, “ಬಿಬಿಎಂಪಿ 2018ರಲ್ಲಿ ರೂಪಿಸಿದ ಜಾಹೀರಾತು ಬೈಲಾವನ್ನು ಸರ್ಕಾರ ಮೂರು ತಿಂಗಳಲ್ಲೇ ಅನುಮೋದಿಸಬೇಕಿತ್ತು. ಆದರೆ, ಅನುಮೋದನೆ ನೀಡದ ಕಾರಣ “ಕರ್ನಾಟಕ ಪೌರಾಡಳಿತ ಕಾಯ್ದೆ-1976’ರ ಕಲಂ 425 ಪ್ರಕಾರ, ಡೀಮ್ಡ್ ಅನುಮೋದನೆ ಹೊಂದಿದೆ. ಜಾಹೀರಾತು ನಿಷೇಧದ ಬಗ್ಗೆ ಪಾಲಿಕೆ ಸರ್ವಾನುಮತದಿಂದ ನಿರ್ಣಯ ತೆಗೆದುಕೊಂಡಿದೆ. ನಗರಾಭಿವೃದ್ಧಿ ಇಲಾಖೆಯು ಏಕಾಏಕಿ ಪಾಲಿಕೆಯ ಗಮನಕ್ಕೆ ತರದೆ ಕರಡು ರೂಪಿಸಿರುವುದು ಕೌನ್ಸಿಲ್‌ ಧ್ವನಿ ಅಡಗಿಸಿದಂತಾಗಿದೆ. ಇದರಲ್ಲಿ ಕಾಣದ ಕೈಗಳ ಕೈವಾಡವಿದೆ ಎಂದು ಆರೋಪಿಸಿದರು.

ಕೆಎಂಸಿ ಕಲಂ 427 ತಪ್ಪಾಗಿ ಬಳಸಿಕೊಳ್ಳಲಾಗಿದೆ. ಕೌನ್ಸಿಲ್‌ ಬೈಲಾ ಮಾಡದಿದ್ದರೆ, ಸರ್ಕಾರ ನಿರ್ಣಯ ತೆಗೆದುಕೊಳ್ಳಬಹುದು. ಆದರೆ, ಪಾಲಿಕೆಯ ಎಲ್ಲ ಸದಸ್ಯರು ಒಮ್ಮತದಿಂದ ತೆಗೆದುಕೊಂಡಿರುವ ನಿರ್ಣಯವನ್ನು ಕಡೆಗಣಿಸುವುದು ಸರಿಯಲ್ಲ. ಸರ್ಕಾರ ಮತ್ತು ಪಾಲಿಕೆಯ ನಡುವೆ ತೊಡಕು ಉಂಟಾಗುವುದು ಬೇಡ. ಈ ಹಿಂದೆ ಪಾಲಿಕೆ ರೂಪಿಸಿರುವ ಬೈಲಾವನ್ನೇ ಮುಂದುವರಿಸುವಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ವಿರೋಧ ಪಕ್ಷದ ಸದಸ್ಯರಾದ ಕೆ. ಉಮೇಶ್‌ ಶೆಟ್ಟಿ, ಸತ್ಯನಾರಾಯಣ , ಎನ್‌. ಶಾಂತಕುಮಾರಿ ಮತ್ತು ಆಡಳಿತ ಪಕ್ಷದ ಸದಸ್ಯರಾದ ಗುಣಶೇಖರ್‌, ರಿಜ್ವಾನ್‌ ಹಾಗೂ ಮಂಜುನಾಥ ರೆಡ್ಡಿ ದನಿಗೂಡಿಸಿದರು. ಪಾಲಿಕೆ ಸದಸ್ಯ ಗುಣಶೇಖರ್‌ ಮಾತನಾಡಿ, ಸರ್ಕಾರ ಬಿಬಿಎಂಪಿಯ ಬೈಲಾ ತಿರಸ್ಕರಿಸಿರುವ ಬಗ್ಗೆ ಆಯುಕ್ತರು ವಿವರಣೆ ನೀಡಬೇಕು. ಜಾಹೀರಾತಿಗೆ ಪಾಲಿಕೆ ಜಾಗ ನೀಡುವುದರಿಂದ ಯಾವುದೇ ಲಾಭವಿಲ್ಲ. ಯಾವ ಪುರುಷಾರ್ಥಕ್ಕೆ ಜಾಹೀರಾತಿಗೆ ಅನುಮತಿ ನೀಡಬೇಕು ಎಂದು ಪ್ರಶ್ನೆ ಮಾಡಿದರು.

ಮಾಜಿ ಮೇಯರ್‌ ಮಂಜುನಾಥ ರೆಡ್ಡಿ ಮಾತನಾಡಿ, ಪಾಲಿಕೆ ಸದಸ್ಯರ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಯುತ್ತಿದೆ. ಸದಾ ಚಟುವಟಿಕೆಯಲ್ಲಿ ಇರುವ ಮಾಫಿಯಾ ಎಂದು ಯಾವುದಾದರೂ ಇದ್ದರೆ, ಅದು ಜಾಹೀರಾತು ಮಾಫಿಯಾ. ಬೆಂಗಳೂರಿಗೆ ಮತ್ತೆ ಜಾಹೀರಾತು ಬೇಡ. ಈ ವಿಷಯವಾಗಿ ಬಿಬಿಎಂಪಿಗೆ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದೆ. ಸಾರ್ವಜನಿಕರಿಂದಲೂ ಇದರ ಬಗ್ಗೆ ತೀವ್ರ ವಿರೋಧವಿದೆ. ಬಿಬಿಎಂಪಿಗೆ ಜಾಹೀರಾತಿನಿಂದ ಯಾವುದೇ ಲಾಭವಿಲ್ಲ. ಆದರೆ, ಈ ವಿಷಯವಾಗಿ ಕಳೆದ ಹತ್ತು ವರ್ಷಗಳಲ್ಲಿ ಕೋರ್ಟ್‌ಗೆ ಬಿಬಿಎಂಪಿ ಲಕ್ಷಾಂತರ ರೂ. ಖರ್ಚು ಮಾಡಿದೆ ಎಂದು ಹೇಳಿದರು.

ನಾನು ಭಾಗವಹಿಸುವಂತಿರಲಿಲ್ಲ; ಆಯುಕ್ತರ ಸಮಜಾಯಿಷಿ: ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಮಾತನಾಡಿ, ಪಾಲಿಕೆ ರೂಪಿಸಿರುವ ಬೈಲಾ ಬಗ್ಗೆ ಸರ್ಕಾರಕ್ಕೆ ಈ ಹಿಂದೆಯೇ ಎಲ್ಲ ಮಾಹಿತಿ ನೀಡಿದ್ದೇವೆ. ಮಾರ್ಚ್‌ 20ಕ್ಕೆ ಸರ್ಕಾರ ಸಭೆ ನಡೆಸಿತ್ತು. ಆ ಸಮಯದಲ್ಲಿ ಚುನಾವಣಾ ನೀತಿಸಹಿಂತೆ ಜಾರಿಯಲ್ಲಿತ್ತು. ನಾನು ಚುನಾವಣಾಧಿಕಾರಿಯಾಗಿದ್ದ ಕಾರಣ ಯಾವುದೇ ಸಭೆಯಲ್ಲಿ ಭಾಗವಹಿಸುವಂತಿರಲಿಲ್ಲ. ಹೀಗಾಗಿ, ಸಭೆಯಲ್ಲಿ ಭಾಗವಹಿಸಿರಲಿಲ್ಲ. ಈ ನಡುವೆ ಸರ್ಕಾರದಿಂದ ಬೈಲಾಗೆ ತಿದ್ದುಪಡಿ ತರುವಂತೆ ಪತ್ರ ಬಂದಿತ್ತು. ಬೈಲಾಗೆ ನಾನು ಯಾವುದೇ ತಿದ್ದುಪಡಿ ತರಲು ಸಾಧ್ಯವಿಲ್ಲ. ಇದು ಕೌನ್ಸಿಲ್‌ ನಿರ್ಣಯ ಎಂದು ಪತ್ರ ಬರೆದು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೆ ಎಂದು ಸಮಜಾಯಿಷಿ ನೀಡಿದರು.

2016ರಲ್ಲಿ ನಗರದ ಜಾಹೀರಾತಿನ ಬಗ್ಗೆ ಮತ್ತು ಅದರಿಂದ ಪಾಲಿಕೆಗೆ ಉಂಟಾಗುತ್ತಿರುವ ನಷ್ಟದ ಬಗ್ಗೆ ಸರ್ವೇ ಮಾಡಲಾಗಿತ್ತು. ಈ ಸರ್ವೇಯಲ್ಲಿ 5,522 ಹೋರ್ಡಿಂಗ್‌ಗಳನ್ನು ಗುರುತಿಸಲಾಗಿತ್ತು. ಹೋರ್ಡಿಂಗ್‌ ಅಳವಡಿಸಿಕೊಂಡವರು ಇಲ್ಲಿಯವರೆಗೆ ತೆರಿಗೆ ಹಣ ಪಾವತಿಸದೆ ಇರುವುದನ್ನು ಲೆಕ್ಕಹಾಕಿ 149 ಕೋಟಿ ರೂ. ಎಂದು ಮತ್ತು ಅದಕ್ಕೆ ಶುಲ್ಕ ಸೇರಿಸಿ 155 ಕೋಟಿ ರೂ. ಹಾಗೂ ಅದರ ಬಡ್ಡಿ ಸೇರಿಸಿ 331 ಕೋಟಿ ರೂ. ಎಂದು ಲೆಕ್ಕಹಾಕಲಾಗಿತ್ತು. ಈ ಹಂತದಲ್ಲಿ ಪಾಲಿಕೆಗೆ 65 ಕೋಟಿ ರೂ. ಸಂಗ್ರಹವಾಗಿದೆ. ಇನ್ನು ಕೆಲವರು ಈ ವಿಷಯವಾಗಿ ಕೋರ್ಟ್‌ ಮೊರೆಹೋಗಿದ್ದಾರೆ ಎಂದರು.

ಕೋರ್ಟ್‌ ಮತ್ತೂಮ್ಮೆ ಸಮೀಕ್ಷೆ ನಡೆಸುವಂತೆ ಆದೇಶ ನೀಡಿದ್ದರಿಂದ 3,652 ಹೋರ್ಡಿಂಗ್‌ಗಳ ಬಗ್ಗೆ ವಿವರ ಸಂಗ್ರಹಿಸಿ ವರದಿ ನೀಡಲಾಗಿತ್ತು. ಕೋರ್ಟ್‌ ಎಲ್ಲರಿಗೂ ನೋಟಿಸ್‌ ನೀಡುವಂತೆ ಆದೇಶಿಸಿತ್ತು. ಇದರಲ್ಲಿ 1,864 ಅನಧಿಕೃತ ಎಂದು ತಿಳಿದು ಬಂದಿತ್ತು. 474 ಎಫ್ಐಆರ್‌ ದಾಖಲಿಸಲಾಗಿತ್ತು. ಅನಧಿಕೃತ ಫ‌ಲಕಗಳನ್ನು 1,342 ಮಾಲೀಕರೆ ತೆರವುಗೊಳಿಸಿದ್ದರು ಮತ್ತು 290 ಫ‌ಲಕಗಳನ್ನು ಪಾಲಿಕೆ ತೆರವುಗೊಳಿಸಿದ್ದು, 214 ಜನ ಕೋರ್ಟ್‌ನಿಂದ ಮಧ್ಯಂತರ ಆದೇಶ ತಂದಿದ್ದಾರೆ. 1,806 ಪ್ರಕರಣಗಳು ಕೋರ್ಟ್‌ನಲ್ಲಿ ವಿಚಾರಣೆಯಲ್ಲಿವೆ. ಪ್ರಕರಣಗಳು ಕೋರ್ಟ್‌ನಲ್ಲಿರುವುದರಿಂದ ಅದನ್ನು ಉಲ್ಲಂಘನೆ ಮಾಡಿ, ತೆರಿಗೆ ಸಂಗ್ರಹ ಮಾಡಲು ಸಾಧ್ಯವಿಲ್ಲ ಎಂದು ಮಾಹಿತಿ ನೀಡಿದರು.

ಅಧಿಕಾರಿಗೆ ಶೋಕಾಸ್‌ ನೋಟಿಸ್‌: “ಪಾಲಿಕೆಯ ಅಧಿಕಾರಿಗಳು ಜಾಹೀರಾತಿನ ವಿಷಯದಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೂಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಅನುಸರಿಸುತ್ತಿದ್ದಾರೆ’ ಎಂದು ಪಾಲಿಕೆಯ ಆಡಳಿತ ಪಕ್ಷದ ಸದಸ್ಯ ಮಹಮ್ಮದ್‌ ರಿಜ್ವಾನ್‌ ನವಾಬ್‌ ಅವರು ಆರೋಪಿಸಿದರು. “ಖಾಸಗಿ ಸೈಕಲ್‌ ಕಂಪನಿಯೊಂದಕ್ಕೆ ನಗರದ ಮುಖ್ಯರಸ್ತೆಗಳಲ್ಲಿ 150 ಎಲ್‌ಇಡಿ ಡಿಸ್‌ಪ್ಲೆಗಳನ್ನು ಅಳವಡಿಸಲು ಅವಕಾಶ ನೀಡಲಾಗಿದೆ. ಇದನ್ನು ಅಧಿಕಾರಿಗಳು ಪಾಲಿಕೆಯ ಗಮನಕ್ಕೆ ತಂದಿಲ್ಲ. ಉನ್ನತ ಅಧಿಕಾರಿಗಳೇ ಈ ಹಗರಣದಲ್ಲಿ ಭಾಗಿಯಾಗಿದ್ದಾರೆ.

ಅವರಿಗೂ ಕಿಕ್‌ಬ್ಯಾಕ್‌ ಸೇರುತ್ತಿದೆ. ಸ್ಕೈವಾಕ್‌ ಮತ್ತು ಬಸ್‌ ನಿಲ್ದಾಣಗಳಲ್ಲಿ ಇಂದಿಗೂ ಜಾಹೀರಾತು ಇವೆ’ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, “ಬಸ್‌ ನಿಲ್ದಾಣ ಮತ್ತು ಸ್ಕೈವಾಕ್‌ಗಳಲ್ಲಿ ಜಾಹೀರಾತು ಅಳವಡಿಸಿಕೊಳ್ಳುವುದಕ್ಕೆ 20 ವರ್ಷಗಳವರೆಗೆ ಪಾಲಿಕೆ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿ, ಅದನ್ನು ತೆರವುಗೊಳಿಸಲು ಸಾಧ್ಯವಿಲ್ಲ.

“ಬಿಬಿಎಂಪಿ ಹೊರಾಂಗಣ ಸೈನೇಜ್‌ ಮತ್ತು ಸಾರ್ವಜನಿಕ ಸಂದೇಶ ನೀತಿ ಹಾಗೂ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ-2018’ರಲ್ಲೇ ಸ್ಕೈವಾಕ್‌ ಮತ್ತು ಬಸ್‌ ನಿಲ್ದಾಣಗಳಲ್ಲಿನ ಜಾಹೀರಾತನ್ನು ನಿಷೇಧಿಸಿ, ಅವರಿಗೆ ಬಾಕಿ ಹಣ ನೀಡುವ ಪ್ರಸ್ತಾವಕ್ಕೆ ಸಭೆ ಅನುಮತಿ ನೀಡಿರಲಿಲ್ಲ. ಇನ್ನು ಸೈಕಲ್‌ ಕಂಪನಿಯ ಟೆಂಡರ್‌ ಅನ್ನು ರದ್ದುಗೊಳಿಸಲಾಗಿದೆ’ಎಂದು ಮಾಹಿತಿ ನೀಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ಕಮಿಷನರ್‌ ಮತ್ತು ಪಾಲಿಕೆಯ ಸದಸ್ಯರ ಗಮನಕ್ಕೆ ತಾರದೆ 150 ಎಲ್‌ಇಡಿ ಡಿಸ್‌ಪ್ಲೆಗಳನ್ನು ಅಳವಡಿಸಲು ಅನುಮತಿ ಕೊಟ್ಟ ಅಧಿಕಾರಿಗೆ ಶೋಕಸ್‌ ನೋಟಿಸ್‌ ನೀಡಲಾಗಿದೆ’ ಎಂದು ಹೇಳಿದರು.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.