ವರ್ಕ್‌ ಫ್ರಂ ಹೋಂ ಮುಂದುವರಿಸಲು ಸಲಹೆ


Team Udayavani, Aug 25, 2021, 4:13 PM IST

ವರ್ಕ್‌ ಫ್ರಂ ಹೋಂ ಮುಂದುವರಿಸಲು ಸಲಹೆ

ಬೆಂಗಳೂರು: ಹೊರವರ್ತುಲ ರಸ್ತೆ(ಓಆರ್‌ಆರ್‌)ಯಲ್ಲಿ “ನಮ್ಮ ಮೆಟ್ರೋ’ಕಾಮಗಾರಿ ಆರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ಐಟಿ ಕಂಪನಿಗಳು 2022ರ ಡಿಸೆಂಬರ್‌ವರೆಗೆ ಮನೆಯಿಂದಲೇಕೆಲಸ (ವರ್ಕ್‌ ಫ್ರಂ ಹೋಂ) ಪದ್ಧತಿಯನ್ನು ಮುಂದುವರಿಸುವುದು ಸೂಕ್ತ!

– ಸರ್ಕಾರ ಇಂತಹದ್ದೊಂದು ಸಲಹೆಯನ್ನು ಐಟಿ ಕಂಪನಿಗಳ ಮುಂದಿಟ್ಟಿದೆ. ಕೋವಿಡ್‌ ಹಾವಳಿ ಹಿನ್ನೆಲೆಯಲ್ಲಿ ಈಗಾಗಲೇ ಕಳೆದ ಒಂದು ವರ್ಷದಿಂದಲೂ ಬಹುತೇಕ ಐಟಿ ಕಂಪನಿಗಳು ವರ್ಕ್‌ ಫ್ರಂ ಹೋಂ ವ್ಯವಸ್ಥೆ ಅಳವಡಿಸಿ ಕೊಂಡಿವೆ. ಇದೇ ಪದ್ಧತಿಯನ್ನು ಕಂಪನಿಗಳು ಅದರಲ್ಲೂ ವಿಶೇಷವಾಗಿ ಓಆರ್‌ಆರ್‌ ಮಾರ್ಗದಲ್ಲಿ ಬರುವ ಟೆಕ್‌ ಪಾರ್ಕ್‌ಗಳು, ಕಂಪನಿಗಳು 2022ರ ಡಿಸೆಂಬರ್‌ವರೆಗೆ ಮುಂದುವರಿಸುವುದು ಸೂಕ್ತ.

ಅಲ್ಲದೆ,ಕಚೇರಿಗೆಬರಲೇಬೇಕಾದ ಸಿಬ್ಬಂದಿಯ ಕೆಲಸದ ಅವಧಿಯನ್ನು ಪರಿಷ್ಕರಿಸಬೇಕು ಹಾಗೂ ಬಿಎಂಟಿಸಿಯಂತಹ ಸಮೂಹ ಸಾರಿಗೆ ಬಳಕೆಗೆ ಪ್ರೋತ್ಸಾಹಿಸಬೇಕು ಎಂದು ಎಲೆಕ್ಟ್ರಾನಿಕ್‌,ಐಟಿ-ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ:ಇಂಡಿಯನ್ ಐಡಲ್ 12: ಪ್ರಶಸ್ತಿ ವಿಜೇತ ಪವನ್ ದೀಪ್ ಉತ್ತರಾಖಂಡ್ ನ ಬ್ರ್ಯಾಂಡ್ ಅಂಬಾಸಿಡರ್

ಈ ಸಂಬಂಧ ರಾಷ್ಟೀಯ ಸಾಫ್ಟ್ ವೇರ್‌ ಮತ್ತು ಸೇವಾ ಕಂಪನಿಗಳ ಸಂಘ (ನ್ಯಾಸ್ಕಾಂ) ಪ್ರಾದೇಶಿಕ ನಿರ್ದೇಶಕರಿಗೆ ಪತ್ರ ಬರೆದಿರುವ ಡಾ.ರಮಣರೆಡ್ಡಿ, “ಸಂಚಾರದಟ್ಟಣೆ ಉಂಟಾಗದಿರಲು ಹಾಗೂ ಮೆಟ್ರೋ ಕಾಮಗಾರಿ ಯಾವುದೇ ಅಡತಡೆ ಇಲ್ಲದೆ ಸಾಗಲು ವರ್ಕ್‌ ಫ್ರಂ ಹೋಂ ಪದ್ಧತಿಯನ್ನು ಇನ್ನೂಒಂದೂವರೆ ವರ್ಷ ಮುಂದುವರಿಸಲು ಕೋರಲಾಗಿದೆ. ಇದೊಂದು ಸಲಹೆ ಅಷ್ಟೇ’ ಎಂದು ತಿಳಿಸಿದ್ದಾರೆ.

ಓಆರ್‌ಆರ್‌ನಲ್ಲಿ ಅಂದರೆ ಸೆಂಟ್ರಲ್‌ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್‌. ಪುರಂ ನಡುವೆ “ನಮ್ಮ ಮೆಟ್ರೋ’ ಎರಡನೇ ಹಂತದ 2ಎ ಅಡಿ ಎತ್ತರಿಸಿದ ಮಾರ್ಗ ನಿರ್ಮಾಣ ಕಾಮಗಾರಿ ಆರಂಭಗೊಂಡಿದ್ದು, ಇದು ಒಂದೂವರೆಯಿಂದ ಎರಡು ವರ್ಷ ಮುಂದುವರಿಯಲಿದೆ. ಐಟಿ ಹಬ್‌ ಆಗಿರುವ ಉದ್ದೇಶಿತ ಮಾರ್ಗವು ಈ ಮೊದಲೇ ಅತ್ಯಧಿಕ ಸಂಚಾರ ದಟ್ಟಣೆ ಇರುವ ರಸ್ತೆಯಾಗಿದೆ. “ಪೀಕ್‌ಅವರ್‌’ನಲ್ಲಂತೂಹೆಜ್ಜೆ-ಹೆಜ್ಜೆಗೂ ಇಲ್ಲಿ ವಾಹನ ಸವಾರರು ಪರದಾಡುತ್ತಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರವು ಆರು ಪಥದ ರಸ್ತೆಯಲ್ಲಿ “ಬಸ್‌ ಆದ್ಯತಾ ಪಥ’ (ಬಿಪಿಎಲ್‌), ಬೈಸಿಕಲ್‌ ಪಥ ನಿರ್ಮಾಣ, ಸಮೂಹ ಸಾರಿಗೆ ಪ್ರೋತ್ಸಾಹ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ. ಆದಾಗ್ಯೂ ಕೋವಿಡ್‌ ಪೂರ್ವದಲ್ಲಿ ಸಂಚಾರದಟ್ಟಣೆ ವಿಪರೀತ ಇರುವುದನ್ನು
ಕಾಣಬಹುದು. ಈ ಮಧ್ಯೆ ಮೆಟ್ರೋ ಕಾಮಗಾರಿ ಬೇರೆ ಕೈಗೆತ್ತಿಕೊಳ್ಳಲಾಗಿದ್ದು, ಸಹಜಸ್ಥಿತಿಗೆ ಮರಳಿದರೆ, ವಾಹನ ಸವಾರರು ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಆದ್ದರಿಂದ ವರ್ಕ್‌ ಫ್ರಂ ಹೋಂ ವ್ಯವಸ್ಥೆ ಮುಂದುವರಿಕೆ ಹಾಗೂ ಸಮೂಹ ಸಾರಿಗೆ ಬಳಕೆಗೆ ಪ್ರೋತ್ಸಾಹದಾಯಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.