ಮಿಲನ ನಂತರ‌ ಕಲಹ: ಉಗಾಂಡ ಯುವತಿ ಕೊಲೆ


Team Udayavani, Feb 3, 2017, 11:41 AM IST

murdered-uganda-lady.jpg

ಬೆಂಗಳೂರು: ಒಪ್ಪಿತ ಲೈಂಗಿಕ ಕ್ರಿಯೆ ನಂತರ ಹಣದ ವಿಚಾರದಲ್ಲಿ ಉಂಟಾದ ಜಗಳದಲ್ಲಿ ಉಗಾಂಡ ಯುವತಿಯನ್ನು ಹಿಮಾಚಲ ಪ್ರದೇಶ ಮೂಲದ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೊತ್ತನೂರಿನಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ.

10 ಸಾವಿರ ರೂ.ಗೆ ಒಪ್ಪಂದದಂತೆ ಯುವತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ಹಿಮಾಚಲ ಪ್ರದೇಶ ಮೂಲದ ಯುವಕ, ನಂತರ ಐದು ಸಾವಿರ ರೂ. ಮಾತ್ರ ನೀಡಲು ಮುಂದಾಗಿದ್ದ. ಇನ್ನೂ ಐದು ಸಾವಿರ ರೂ.ಗೆ ಉಗಾಂಡ ಯುವತಿ ಒತ್ತಾಯಿಸಿದಾಗ ಯುವಕ ನಿರಾಕರಿಸಿದ್ದ. ಹೀಗಾಗಿ ಯುವಕನ ಕೈಗೆ ಯುವತಿಯು ಚಾಕುವಿನಿಂದ ಹಲ್ಲೆ ಮಾಡಿದ್ದಾಳೆ. ಈ ವೇಳೆ ಯುವತಿಯಿಂದ ಚಾಕು ಕಸಿದುಕೊಂಡ ಯುವಕ ಆಕೆಯ ಕುತ್ತಿಗೆ ಸೇರಿದಂತೆ 18 ಕಡೆ ಇರಿದು ಕೊಲೆ ಮಾಡಿದ್ದಾನೆ. 

ಕೊತ್ತನೂರಿನ ತಿಮ್ಮೇಗೌಡ ಲೇಔಟ್‌ನಲ್ಲಿ ವಾಸವಿದ್ದ ಉಗಾಂಡದ ನಕಾಯಕಿ ಫ್ಲಾರೆನ್ಸ್‌ (25) ಕೊಲೆಯಾದ ಯುವತಿ. ಹಿಮಾಚಲ ಪ್ರದೇಶ ಮೂಲದ ಇಶಾನ್‌ (30) ಬಂಧಿತ ಯುವಕ. ಕೊಲೆಯಾದ ಯುವತಿ ನಡೆಸಿದ ಹಲ್ಲೆಯಿಂದ ಇಶಾನ್‌ ಕೈಗೆ ಗಾಯವಾಗಿದೆ. ಒಪ್ಪಂದವಾಗಿದ್ದೇ ಐದು ಸಾವಿರ ರೂ.ಗೆ ಆದರೆ, ಆಕೆ ಹತ್ತು ಸಾವಿರ ರೂ.ಗೆ ಒತ್ತಾಯಿಸಿ ಚಾಕುವಿನಿಂದ ಹಲ್ಲೆ ನಡೆಸಿದಳು. ನನ್ನನ್ನು ಕೊಲ್ಲಬಹುದು ಎಂದು ಹೆದರಿ ಕೊಲೆ ಮಾಡಿದೆ ಎಂದು ಆತ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ. 

ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಉಗಾಂಡದ ಯುವತಿ ಫ್ಲಾರೆನ್ಸ್‌ ಕೊತ್ತನೂರಿನ ತಿಮ್ಮೇಗೌಡ ಲೇಔಟ್‌ನಲ್ಲಿ ವಾಸವಿದ್ದಳು. ಹೆಣ್ಣೂರಿನ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಅದೇ ರೀತಿ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ಹಿಮಾಚಲ ಪ್ರದೇಶ ಮೂಲದ ಇಶಾನ್‌ ಬಿಟಿಎಂ ಲೇಔಟ್‌ನಲ್ಲಿ ವಾಸವಿದ್ದು ಮನೆ ಪಾಠ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾನೆ. 

ಫ್ಲಾರೆನ್ಸ್‌ ಹಾಗೂ ಇಶಾನ್‌ ನಡುವೆ ಪರಿಚಯವಿತ್ತು. ಬುಧವಾರ ಫ್ಲಾರೆನ್ಸ್‌ ಕೆಲಸದ ನಿಮಿತ್ತ ಕಮ್ಮನಹಳ್ಳಿಗೆ ಹೋಗಿದ್ದಾಗ ಅದೇ ವೇಳೆ ಅಲ್ಲಿಗೆ ಇಶಾನ್‌ ಬಂದಿದ್ದ. ಬಳಿಕ ಒಪ್ಪಿತ ಲೈಂಗಿಕ ಕ್ರಿಯೆಗೆ ಮಾತುಕತೆಯಾಗಿದ್ದು, ಬುಧವಾರ ರಾತ್ರಿ 11.30ರ ಸುಮಾರಿಗೆ ಇಶಾನ್‌ ಎಂ.ಜಿ.ರಸ್ತೆಯಿಂದ ಫ್ಲಾರೆನ್ಸ್‌ಳನ್ನು ಆಕೆಯ ಮನೆಗೆ ಕರೆದೊಯ್ದಿದ್ದ. ಲೈಂಗಿಕ ಕ್ರಿಯೆ ಮುಗಿದ ನಂತರ ಇಶಾನ್‌ ಆಕೆಗೆ 5 ಸಾವಿರ ರೂ.ಹಣ ಕೊಟ್ಟಿದ್ದಾನೆ.

ಆಗ ಆಕೆ, 10 ಸಾವಿರ ರೂ.ಕೊಡುವಂತೆ ಒತ್ತಾಯಿಸಿದ್ದಳು. ಈ ಸಂದರ್ಭದಲ್ಲಿ ಇಬ್ಬರ ನಡುವೆ ಜಗಳವಾಗಿದೆ. ಒಂದು ಹಂತದಲ್ಲಿ ಕುಪಿತಗೊಂಡ ಫ್ಲಾರೆನ್ಸ್‌ ಚಾಕುವಿನಿಂದ ನಿಶಾನ್‌ ಮೇಲೆ ಹಲ್ಲೆ ಮಾಡಿದ್ದಾಳೆ.  ಇದರಿಂದ ವಿಚಲಿತನಾದ ಇಶಾನ್‌ ಕೂಡಲೇ ಅದೇ ಚಾಕುವನ್ನು ಕಸಿದುಕೊಂಡು ಆಕೆಯ ಕುತ್ತಿಗೆ ಸೇರಿದಂತೆ ಹಲವು ಕಡೆ ಇರಿದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕುಸಿದು ಫ್ಲಾರೆನ್ಸ್‌ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 

ಘಟನೆ ತಿಳಿದು ಬಾಗಲೂರು ಠಾಣೆ ಇನ್ಸ್‌ಪೆಕ್ಟರ್‌ ಅಂಜನ್‌ಕುಮಾರ್‌ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಅಂಬೇಡ್ಕರ್‌ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಆಕೆಯ ಮನೆಯವರಿಗೆ ಪೊಲೀಸರು ವಿಷಯ ತಿಳಿಸಿದ್ದಾರೆ. 

ಠಾಣೆ ಎದುರು ಉಗಾಂಡದವರ ದಾಂಧಲೆ 
ಫ್ಲಾರೆನ್ಸ್‌ ಕೊಲೆಯಾದ ವಿಚಾರ ತಿಳಿದು ಸ್ಥಳದಲ್ಲಿ ಜಮಾಯಿಸಿದ್ದ ಆಕೆಯ ಉಗಾಂಡ ಮೂಲದ ಸ್ನೇಹಿತರು ಕೊಲೆ ಆರೋಪಿ ಇಶಾನ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇದನ್ನು ನಿರಾಕರಿಸಿದ ಬಾಗಲೂರು ಠಾಣೆ ಇನ್ಸ್‌ಪೆಕ್ಟರ್‌ ಅಂಜನ್‌ಕುಮಾರ್‌ ಮತ್ತು ಸಿಬ್ಬಂದಿ ಮೇಲೆ ಹಲ್ಲೆಗೂ ಯತ್ನಿಸಿ ದಾಂಧಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಇದನ್ನು ವಿರೋಧಿಸಿದ ಸ್ಥಳೀಯರ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಹಲ್ಲೆ ಯತ್ನ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಉಗಾಂಡದ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.