ಅನಿಲ ಪೂರೈಕೆ-ಸಾಗಣೆಗೆ ಜಿಎಐಎಲ್ ಜತೆ ಒಪ್ಪಂದ
Team Udayavani, Jun 25, 2017, 11:15 AM IST
ಬೆಂಗಳೂರು: ಯಲಹಂಕ ಅನಿಲ ಆಧಾರಿತ ವಿದ್ಯುತ್ ಸ್ಥಾವರಕ್ಕೆ ಅನಿಲ ಪೂರೈಕೆ ಮತ್ತು ಸಾಗಣೆ ಸಂಬಂಧ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಹಾಗೂ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಜಿಎಐಎಲ್) ನಡುವೆ ಶನಿವಾರ ಒಡಂಬಡಿಕೆ ಏರ್ಪಟ್ಟಿತು.
ನಗರದ ರೇಸ್ಕೋರ್ಸ್ ರಸ್ತೆಯಲ್ಲಿರುವ ಕೆಪಿಸಿಎಲ್ ಕಚೇರಿಯಲ್ಲಿ ಶನಿವಾರ ನಡೆದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಎರಡೂ ಸಂಸ್ಥೆಗಳು ಒಪ್ಪಂದಕ್ಕೆ ಸಹಿ ಹಾಕಿದವು. ನಿಗಮದ ಪರವಾಗಿ ಮುಖ್ಯ ಎಂಜಿನಿಯರ್ ಡಿ.ಚಂದ್ರಕಾಂತ್ (ಜಿ.ಎಸ್.ಡಬ್ಲೂé) ಹಾಗೂ ಜಿಎಐಎಲ್ ಪರವಾಗಿ ಉಪ ಪ್ರಧಾನ ವ್ಯವಸ್ಥಾಪಕ (ಮಾರ್ಕೆಟಿಂಗ್) ಸುಮಿತ್ ಕಿಶೋರ್ ಒಪ್ಪಂದಕ್ಕೆ ಸಹಿ ಹಾಕಿದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ ನಾಯಕ್, ಜಿಎಐಎಲ್ನ ನಿರ್ದೇಶಕ (ಮಾರ್ಕೆಟಿಂಗ್) ಗಜೇಂದ್ರ ಸಿಂಗ್, ಕಾರ್ಯಕಾರಿ ನಿರ್ದೇಶಕ (ಮಾರ್ಕೆಟಿಂಗ್) ಮನೋಜ್ ಜೈನ್ ಇತರರು ಉಪಸ್ಥಿತರಿದ್ದರು.
ಯಲಹಂಕ ಅನಿಲ ಆಧಾರಿತ ವಿದ್ಯುತ್ ಸ್ಥಾವರಕ್ಕೆ 15 ವರ್ಷಗಳ ಅವಧಿಗೆ ನಿತ್ಯ 11 ಎಂಎಂಎಸ್ಸಿಎಂ ನಂತೆ ಅನಿಲ ಸರಬರಾಜು ಹಾಗೂ ಸಾಗಣೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಜಿಎಐಎಲ್ 2018ರ ಮಾರ್ಚ್ನೊಳಗೆ ಅನಿಲ ಪೂರೈಕೆ ಆರಂಭಿಸುವ ನಿರೀಕ್ಷೆ ಇದ್ದು, ಮುಂದಿನ ಮಾರ್ಚ್ನಿಂದ ವಿದ್ಯುತ್ ಉತ್ಪಾದನೆ ಆರಂಭವಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು