ನಿರಂತರ ಸಂಶೋಧನೆಯಿಂದ ಮಾತ್ರ ಕೃಷಿ ಅಭಿವೃದ್ಧಿ


Team Udayavani, May 25, 2018, 11:52 AM IST

nirantra.jpg

ಬೆಂಗಳೂರು: ಕೃಷಿಯಲ್ಲಿ ನಿರಂತರ ಸಂಶೋಧನೆ ಹಾಗೂ ಅಧ್ಯಯನ ಅಗತ್ಯ. ಅದೇ ರೀತಿ ಕೃಷಿ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪರಿಸರವಾದಿ ಸುರೇಶ್‌ ಹೆಬ್ಳಿಕರ್‌ ಅಭಿಪ್ರಾಯಪಟ್ಟರು.

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮೇ 24ರಿಂದ 26ವರೆಗೆ ಹಮ್ಮಿಕೊಂಡಿರುವ ಮಾವು ಮತ್ತು ಹಲಸಿನ ಹಣ್ಣಿನ ತಳಿ ವೈವಿಧ್ಯತಾ ಮೇಳಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿಗೆ 6000 ವರ್ಷಗಳ ಇತಿಹಾಸವಿದ್ದು, ಇಡೀ ಭಾರತವೇ ಕೃಷಿ ವಲಯವನ್ನು ಅವಲಂಭಿಸಿದೆ. ಹಾಗಾಗಿ ನಿರಂತರ ಅಧ್ಯಯನದ ಹಾಗೂ ಸಂಶೋಧನೆಗಳ ಮೂಲಕ ಕೃಷಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ಭಾರತವು ವೈವಿಧ್ಯತೆಯ ನಾಡಗಿದ್ದು, ಈ ವೈವಿಧ್ಯತೆಗೆ ಅನುಗುಣವಾಗಿ ಕೃಷಿ ಉತ್ಪನ್ನಗಳಲ್ಲಿ ವಿವಿಧತೆಯನ್ನು ಕಾಣುತ್ತೇವೆ. ಇದಕ್ಕೆ ಸೂಕ್ತ ಉದಾಹರಣೆ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಸಂಶೋಧಿಸಿರುವ ಮಾವಿನ ಹಣ್ಣಿನ 1700 ಹಾಗೂ ಹಲಸಿನ 80 ತಳಿಗಳು. ಇಂತಹ ವ್ಯತ್ಯಾಸವನ್ನು ಬೇರೆ ದೇಶಗಳಲ್ಲಿ ಕಾಣುವುದು ಅತಿ ವಿರಳ. ಇನ್ನು ಮಾವಿನ ಹಣ್ಣೊಂದರಲ್ಲೇ ಸಾವಿರಕ್ಕೂ ಹೆಚ್ಚು ವೈವಿಧ್ಯ ತಳಿಗಳನ್ನು ಸಂಶೋಧಿಸಿರುವುದು ನಿಜಕ್ಕೂ ಅಚ್ಚರಿಯ ವಿಷಯ ಎಂದರು.

ಪರಿಸರ ತಜ್ಞ ಯಲ್ಲಪ್ಪ ರೆಡ್ಡಿ ಮಾತನಾಡಿ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಹಣ್ಣುಗಳ ವೈವಿಧ್ಯತೆಯಲ್ಲಿ ಭಾರತ ಮುಂಚುಣಿಯಲ್ಲಿದೆ. ಇಲ್ಲಿನ ಭೌಗೋಳಿಕ ವಿಭಿನ್ನತೆ ಇದಕ್ಕೆ ಮುಖ್ಯ ಕಾರಣ. ಈ ಅಂಶಗಳ ಆಧಾರದ ಮೇಲೆ ತೋಟಗಾರಿಕಾ ಸಂಸ್ಥೆಗಳು ಹೊಸ ರೀತಿಯ ತಳಿಗಳನ್ನು ಸಂಶೋಧಿಸಿ ರೈತರಿಗೆ ಪರಿಚಯಿಸುತ್ತಿರುವುದು ಶ್ಲಾಘನೀಯ ಎಂದರು.

ಆಧುನಿಕ ಜೀವನದ ಭರಾಟೆಯಲ್ಲಿ ವಿವಿಧ ರೋಗಗಳು ಜನರನ್ನು ಕಾಡುತ್ತಿದ್ದು, ವಿಶ್ವ ಅರೋಗ್ಯ ಸಂಸ್ಥೆಯ ವರದಿ ಪ್ರಕಾರ ಶೇ.40ರಷ್ಟು ಜನ ರೋಗದ ಚಿಕಿತ್ಸೆಗಾಗಿ ಹಣ ಖರ್ಚು ಮಾಡಿ ಬಡತನಕ್ಕೆ ಸಿಲುಕುತ್ತಿದ್ದಾರೆ. ಇದರ ಬದಲು ಆರೋಗ್ಯ ಕಾಪಾಡಿಕೊಳ್ಳಲು ನಿಸರ್ಗದ ಮೊರೆ ಹೋಗಬೇಕಿದೆ. ನಮ್ಮಲ್ಲಿ 700ಕ್ಕೂ ಹೆಚ್ಚು ಔಷಧೀಯ ಸಸಿ ಹಾಗೂ ಹಣ್ಣುಗಳಿದ್ದು, ಪ್ರತಿಯೊಬ್ಬರೂ ಅವುಗಳ ಸದುಪಯೋಗ ಪಡಿಸಿಕೊಂಡರೆ ರೋಗಮುಕ್ತ ಸಮಾಜ ಕಟ್ಟಬಹುದು ಎಂದು ಹೇಳಿದರು.

ಮೇಳದ ವಿಶೇಷತೆ: ಜನರಿಗೆ ಹಣ್ಣುಗಳ ಪೌಷ್ಟಿಕಾಂಶ ಹಾಗೂ ಮಹತ್ವ ಪರಿಚಯಿಸುವ ಉದ್ದೇಶದಿಂದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಮ್ಮಿಕೊಂಡಿರುವ ಮೇಳದಲ್ಲಿ 80ಕ್ಕೂ ಹೆಚ್ಚಿನ ಹಲಸು, 350ಕ್ಕೂ ಹೆಚ್ಚು ಮಾವಿನ ತಳಿಗಳನ್ನು ಪ್ರದರ್ಶನಕ್ಕಿಡಲಾಗಿದೆ. ಮೇ 26ವರೆಗೆ ಮೇಳ ನಡೆಯಲಿದ್ದು, ಬೆಳಗ್ಗೆ 9.30ರಿಂದ ಸಂಜೆ 5ಗಂಟೆಯವರೆಗೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಾರುಕಟ್ಟೆಗಿಂತ ಅತೀ ಕಡಿಮೆ ಬೆಲೆಯಲ್ಲಿ ಮಾವು ಮತ್ತು ಹಲಸಿನ ಹಣ್ಣುಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ವಿವಿಧ ತಳಿಗಳ ಕಸಿ ಗಿಡಗಳ ಮಾರಾಟ, ತಳಿಗಳಿಗಾಗಿ ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇದರ ಜತೆಗೆ ವಿಜ್ಞಾನಿಳೊಂದಿಗೆ ಬೇಸಾಯ, ಕೋಯ್ಲೋತ್ತರ ತಂತ್ರಜಾnನ, ಮೌಲ್ಯವರ್ಧನೆ ಹಾಗೂ ತಳಿ ಅಭಿವೃದ್ಧಿ ಕುರಿತು ರೈತರು ಚರ್ಚಿಸಬಹುದು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.