ರೈತರ ನೆರವಿಗೆ ಬರಲಿದೆ “ಪ್ಲಾಂಟಿಕ್ಸ್‌’ ಆ್ಯಪ್‌


Team Udayavani, Oct 16, 2018, 6:10 AM IST

181015kpn66.jpg

ಬೆಂಗಳೂರು: ಸಾಂಪ್ರದಾಯಿಕ ಕೃಷಿ ಪದ್ದತಿಯನ್ನು ಆಧುನಿಕ ತಂತ್ರಜ್ಞಾನದ ಜೊತೆಗೆ ಸಮೀಕರಿಸುವ ಉದ್ದೇಶದಿಂದ ಕೃಷಿ ಬೆಳೆಗಳಿಗೆ ಬಾಧಿಸುವ ರೋಗಗಳು, ಕೀಟಬಾಧೆ ಹಾಗೂ ಪೋಷಕಾಂಶಗಳ ಕೊರತೆಯನ್ನು ಆರಂಭದಲ್ಲೇ ಪತ್ತೆ ಹಚ್ಚಿ, ಅದನ್ನು ಸಮರ್ಥವಾಗಿ ನಿಭಾಯಿಸುವ ಮತ್ತು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುವ “ಪ್ಲಾಂಟಿಕ್ಸ್‌’ ಅನ್ನುವ ವಿನೂತನ ಮೊಬೈಲ್‌ ಆ್ಯಪ್‌ ಇದೀಗ ಕರ್ನಾಟಕದ ರೈತರಿಗೂ ಲಭ್ಯವಾಗಲಿದೆ.

ಜರ್ಮನ್‌ ದೇಶದ ನವೋದ್ಯಮ ಸಂಸ್ಥೆಯಾಗಿರುವ “ಪಿಇಎಟಿ’ ಈ ಆ್ಯಪ್‌ ಅನ್ನು ವಿನ್ಯಾಸಗೊಳಿಸಿದ್ದು, ದೇಶದ ಪ್ರತಿಷ್ಠಿತ ಕೃಷಿ ಸಂಶೋಧನಾ ಸಂಸ್ಥೆಯಾಗಿರುವ “ಇಕ್ರಿಸ್ಯಾಟ್‌’ ಇದಕ್ಕೆ ತಾಂತ್ರಿಕ ಸಹಯೋಗ ನೀಡಿದೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ ಈ ವಿನೂತನ “ಪ್ಲಾಂಟಿಕ್ಸ್‌’ ಆ್ಯಪ್‌ ಬಿಡುಗಡೆಗೊಳಿಸಿದರು.

ಸೋಮವಾರದಿಂದಲೇ ಈ ಆ್ಯಪ್‌ ಕರ್ನಾಟಕದ ರೈತರಿಗೆ ಕನ್ನಡ ಭಾಷೆಯಲ್ಲಿ ಲಭ್ಯವಾಗಲಿದೆ. ಈ ಆ್ಯಪ್‌ ಅನ್ನು ಗೂಗಲ್‌ಪ್ಲೇ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು. 3ಜಿ ಆ್ಯಂಡ್ರಾಯ್ಡ ಸ್ಮಾರ್ಟ್‌ಫೋನ್‌ಗಳಲ್ಲಿ ಇದನ್ನು ಬಳಸಿಕೊಳ್ಳಬಹುದು. ರೈತರು ಅಥವಾ ಬಳಕೆದಾರರು ಯಾವುದೇ ರೋಗಪೀಡಿತ, ಕೀಟ ಬಾಧೆ ಅಥವಾ ಪೋಷಕಾಂಶಗಳ ಕೊರತೆ ಇರುವ ಬೆಳೆ ಅಥವಾ ಸಸಿಯ ಫೋಟೋಗಳನ್ನು ಪ್ಲಾಂಟಿಕ್ಸ್‌ ಅಪ್ಲಿಕೇಷನ್‌ ಮೂಲಕ ಅಪ್‌ಲೋಡ್‌ ಮಾಡಿದರೆ, ಅದು ತನ್ನ ವಿಶಿಷ್ಠ ತಂತ್ರಜ್ಞಾದ ಕೃತಕ ಬುದ್ದಿವಂತಿಕೆಯಿಂದ ರೋಗ ಗುರುತಿಸಿ ಅದರ ನಿರ್ವಹಣಾ ಮತ್ತು ನಿಯಂತ್ರಣ ಕ್ರಮಗಳನ್ನು ತಿಳಿಸುತ್ತದೆ.

ಅಲ್ಲದೇ ಪ್ಲಾಂಟಿಕ್ಸ್‌ ಅಪ್ಲಿಕೇಷನ್‌ ಬಳಕೆದಾರರ ಗ್ರೂಪ್‌ ರಚಿಸಿಕೊಂಡು ಅದರ ಮೂಲಕ ಒಂದೇ ವೇದಿಕೆಯಡಿ ರೈತರು, ವಿಜ್ಞಾನಿಗಳು ಹಾಗೂ ಆಸಕ್ತರು ಮಾಹಿತಿ, ಅನುಭವ ಹಾಗೂ ಸಲಹೆಗಳನ್ನು ಪರಸ್ಪರ ಹಂಚಿಕೊಳ್ಳಬಹುದು. ಪ್ಲಾಂಟಿಕ್ಸ್‌ ಬೆಳೆಗಳ ಮಾರ್ಗದರ್ಶಿ ಮೂಲಕ ಬೆಳೆಯ ವಿವಿಧ ಹಂತಗಳಲ್ಲಿ ಕೈಗೊಳ್ಳುವ ಸಂಪೂರ್ಣ ವಿವರವನ್ನು ಮುಂಚಿತವಾಗಿ  ಅಳವಡಿಸಿರುವುದರಿಂದ ಈ ಹಂತಗಳನ್ನು ಅನುಸರಿಸುವುದರಿಂದ ಒಳ್ಳೆಯ ಗುಣಮಟ್ಟ ಹಾಗೂ ಹೆಚ್ಚು ಇಳುವರಿ ಪಡೆದುಕೊಳ್ಳಬಹುದು. ಅದೇ ರೀತಿ ಸಸ್ಯಪೀಡೆಗಳ ಕೋಶ (ಲೈಬ್ರರಿ) ಮೂಲಕ ಪೀಡೆಗಳ ವಿವರಣೆ ಹಾಗೂ ಅವುಗಳ ನಿರ್ವಹಣಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಇಲ್ಲಿವರೆಗೆ ಈ ಆ್ಯಪ್‌ ಅನ್ನು ಸುಮಾರು 3 ಲಕ್ಷ ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಪ್ರತಿ ತಿಂಗಳ ಬಳಕೆದಾರರ ಸರಾಸರಿ ಸಂಖ್ಯೆ 6 ಲಕ್ಷ ಇದೆ.

ರೈತರಿಗೆ ಅರಿವು ಮೂಡಿಸಲಾಗುವುದು: ಆ್ಯಪ್‌ ಬಿಡುಗಡೆಗೊಳಿಸಿ ಮಾತನಾಡಿದ ಕೃಷಿ ಸಚಿವ ಶಿವಶಂಕರ ರೆಡ್ಡಿ, ಕೃಷಿ ಪದ್ದತಿಯಲ್ಲಿ ತಂತ್ರಜ್ಞಾನದ ಬಳಕೆಗೆ ಪ್ಲಾಂಟಿಕ್ಸ್‌ ಆ್ಯಪ್‌ ಒಂದು ಅತ್ಯುತ್ತಮ ಹಾಗೂ ಅತ್ಯಾಧುನಿಕ ಸಾಧನವಾಗಿದೆ. ಇದರ ಬಳಕೆ ಹೆಚ್ಚಾದಂತೆ, ರೈತರಿಗೆ ಅನುಕೂಲಗಳು ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ಆ್ಯಪ್‌ ಅನ್ನು ರೈತರಿಗೆ ಪರಿಚಯಿಸುವ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ತಾಲೂಕ ಹಾಗೂ ಹೊಬಳಿ ಮಟ್ಟದಲ್ಲಿ ರೈತರ ಗ್ರೂಪ್‌ಗ್ಳನ್ನು ರಚಿಸಿ ಆ ಮೂಲಕ ಪರಸ್ಪರ ಅಭಿಪ್ರಾಯ, ಅನುಭವ ಹಾಗೂ ಸಲಹೆಗಳನ್ನು ಹಂಚಿಕೊಳ್ಳುಲು ವೇದಿಕೆ ಸೃಷ್ಟಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಇಎಟಿ ಹಾಗೂ ಇಕ್ರಿಸ್ಯಾಟ್‌ನ ಪ್ರತಿನಿಧಿಗಳು, ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.