ಕೃಷಿ ಅಧ್ಯಯನ: ಎಚ್ಡಿಕೆ ತಂಡ ಇಸ್ರೇಲ್ಗೆ
Team Udayavani, Aug 27, 2017, 12:21 PM IST
ಬೆಂಗಳೂರು: ಹನಿ ನೀರಾವರಿ, ತುಂತುರು ನೀರಾವರಿ ಹಾಗೂ ಕಡಿಮೆ ನೀರಿನಲ್ಲಿ ಯಶಸ್ವಿ ಕೃಷಿ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಲು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ತಂಡ 5 ದಿನಗಳ ಇಸ್ರೇಲ್ ಪ್ರವಾಸ ಕೈಗೊಂಡಿದೆ.
ಮುಂಬಯಿ ಮೂಲಕ ಇಸ್ರೇಲ್ಗೆ ತೆರಳಲು ಹೊರಟ ಈ ತಂಡ ಶನಿವಾರ ಸಂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿತು. ತಂಡದಲ್ಲಿ ಕುಮಾರಸ್ವಾಮಿ ಅಲ್ಲದೆ, ಮಂಡ್ಯ ಸಂಸದ ಸಿ.ಎಸ್. ಪುಟ್ಟರಾಜು, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಹಾಗೂ ಅಪ್ಪಾಜಿ ಗೌಡ ಇದ್ದಾರೆ.
ಐದು ದಿನಗಳ ಅಧ್ಯಯನ ಪ್ರವಾಸದ ಅವಧಿಯಲ್ಲಿ ಈ ತಂಡ ಇಸ್ರೇಲ್ ದೇಶದ ವಿವಿಧ ಭಾಗಗಳಿಗೆ ಭೇಟಿ ಕೊಟ್ಟು, ಹನಿ ನೀರಾವರಿ, ತುಂತುರು ನೀರಾವರಿ, ಕಡಿಮೆ ನೀರಿನಲ್ಲಿ ಯಶಸ್ವಿ ಕೃಷಿ ಚಟುವಟಿಕೆಗಳು ಸಹಿತ ಒಟ್ಟಾರೆ ನೀರಿನ ಮಿತ ಬಳಕೆ ಮತ್ತು ಸದ್ಬಳಕೆ ಬಗ್ಗೆ ಅಧ್ಯಯನ ನಡೆಸಲಿದೆ ಎನ್ನಲಾಗಿದೆ.
ಪತ್ರಕರ್ತರಿಗೆ, ಮಾಹಿತಿ ನೀಡಿದ ಎಚ್.ಡಿ. ಕುಮಾರಸ್ವಾಮಿ, ಸ್ವಂತ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲಾಗುತ್ತಿದೆ. ಆ. 27ರಿಂದ ಸೆ. 8ರ ವರೆಗೆ ಬಿಡುವಿಲ್ಲದ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ