ಇಲ್ಲೇ ನಡೆಯುತ್ತಾ ಏರ್‌ ಶೋ?


Team Udayavani, Feb 25, 2019, 6:31 AM IST

ille.jpg

ಬೆಂಗಳೂರು: ಸೂತಕಗಳ ನಡುವೆ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ “ಏರೋ ಇಂಡಿಯಾ ಶೋ-2019’ಕ್ಕೆ ಭಾನುವಾರ ತೆರೆಬಿದ್ದಿತು. ಆದರೆ, “ಮುಂಬರುವ ವೈಮಾನಿಕ ಪ್ರದರ್ಶನ ಎಲ್ಲಿ’ ಎಂಬ ಪ್ರಶ್ನೆಯನ್ನು ಹಾಗೇ ಬಿಟ್ಟುಹೋಯಿತು.

ಸಾಮಾನ್ಯವಾಗಿ ಮುಂದಿನ ಪ್ರದರ್ಶನ ನಡೆಯುವ ಸ್ಥಳವನ್ನು ಹಿಂದಿನ ಅಂದರೆ ಪ್ರಸ್ತುತ ವೈಮಾನಿಕ ಪ್ರದರ್ಶನದಲ್ಲೇ ಘೋಷಿಸುವುದು ವಾಡಿಕೆ. ಆದರೆ, 2017ರಿಂದ ಈ ಸಂಪ್ರದಾಯಕ್ಕೆ ತಿಲಾಂಜಲಿ ಇಡಲಾಗಿದೆ. ಈ ಬೆಳವಣಿಗೆ ನಂತರದಿಂದ ಪ್ರತಿ ಬಾರಿ ಸ್ಥಳಾಂತರದ ಕೂಗು ಜೋರಾಗುತ್ತಿದೆ.

ಅದರಲ್ಲೂ ಆಗಾಗ್ಗೆ ಗಾಳಿಸುದ್ದಿಯಂತೆ ಬಂದು-ಹೋಗುತ್ತಿದ್ದ “ಸ್ಥಳಾಂತರ ಕೂಗು’ ಇದೇ ಮೊದಲ ಬಾರಿ ಅಧಿಕೃತವಾಗಿ ಕೇಳಿಬಂದಿತ್ತು. ಇದು ತೀವ್ರ ಚರ್ಚೆಗೂ ಗ್ರಾಸವಾಗಿತ್ತು. ಇದೆಲ್ಲದರ ನಡುವೆ 12ನೇ ಪ್ರದರ್ಶನ ಉಳಿಸಿಕೊಳ್ಳುವಲ್ಲಿ ಬೆಂಗಳೂರು ಯಶಸ್ವಿಯಾಯಿತು. ಆದರೆ, 13ನೇ ಪ್ರದರ್ಶನಕ್ಕೂ ಉದ್ಯಾನ ನಗರಿ ವೇದಿಕೆ ಆಗಲಿದೆಯೇ ಎಂಬ ಪ್ರಶ್ನೆಗೆ ಉತ್ತರ ಸಿಗಲಿಲ್ಲ. 

2019ನೇ ವೈಮಾನಿಕ ಪ್ರದರ್ಶನವನ್ನು ಲಖನೌನ ಬಕ್ಷಿ ಕಾ ತಲಾಬ್‌ ಏರೋಸ್ಟೇಷನ್‌ನಲ್ಲಿ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಧಿಕೃತವಾಗಿ ಕೇಂದ್ರ ಸರ್ಕಾರಕ್ಕೆ ಎಂದು ಪತ್ರ ಬರೆದಿದ್ದರು.

ಈ ಪ್ರಸ್ತಾವನೆಗೆ ರಾಜ್ಯದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೂಡ ಬೆಂಗಳೂರಿನಲ್ಲೇ ನಡೆಸಬೇಕು ಎಂದು ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಅಂತಿಮ ಕ್ಷಣದಲ್ಲಿ ರಾಜ್ಯದಲ್ಲೇ ನಡೆಸಲು ತೀರ್ಮಾನಿಸಲಾಯಿತು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ 13ನೇ ಪ್ರದರ್ಶನದ ಸ್ಥಳ ಕುತೂಹಲ ಕೆರಳಿಸಿದೆ. 

ಚುನಾವಣೆ ಹಿನ್ನೆಲೆ; ಮತ್ತಷ್ಟು ಸೂಕ್ಷ್ಮ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಈ ಗೊಂದಲ ನಿವಾರಣೆ ಮಾಡಬಹುದಿತ್ತು. ಆದರೆ, ಈ ಬಗ್ಗೆ ಪ್ರಸ್ತಾಪಿಸಲಿಲ್ಲ. ಭಾರತೀಯ ವಾಯುಸೇನೆ ಸೇರಿದಂತೆ ರಕ್ಷಣಾ ಇಲಾಖೆಯೂ ಇದನ್ನು ಗೌಪ್ಯವಾಗಿಯೇ ಇಟ್ಟಿದೆ. ಲೋಕಸಭೆ ಚುನಾವಣೆ ಕೂಡ ಹೊಸ್ತಿಲಲ್ಲಿ ಇರುವುದರಿಂದ ಈ ವಿಚಾರ ಮತ್ತಷ್ಟು ಸೂಕ್ಷ್ಮವಾಗಿದೆ. ಈ ಮಧ್ಯೆ ವೈಮಾನಿಕ ಪ್ರದರ್ಶನದ ಆಸುಪಾಸು ನಡೆದ ಅಹಿತಕರ ಘಟನೆಗಳು ಸ್ಥಳಾಂತರದ ಕೂಗಿಗೆ ಪುಷ್ಠಿ ನೀಡಿದಂತಾಗಿದೆ.

ಫೆಬ್ರವರಿ 1ರಂದು “ಮಿರಾಜ್‌-2000′ ತರಬೇತಿ ಯುದ್ಧವಿಮಾನ ಪತನಗೊಂಡು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದರು. ತದನಂತರ ಪ್ರದರ್ಶನದ ಹಿಂದಿನ ದಿನವೇ ಸೂರ್ಯಕಿರಣ ತಂಡದ ಎರಡು ತರಬೇತಿ ಯುದ್ಧವಿಮಾನಗಳು ಡಿಕ್ಕಿಹೊಡೆದು, ಪೈಲಟ್‌ವೊಬ್ಬರು ಮೃತಪಟ್ಟರು. ಪ್ರದರ್ಶನದ ನಾಲ್ಕನೇ ದಿನ ನಿಲುಡೆ ಪ್ರದೇಶದಲ್ಲಿ 300ಕ್ಕೂ ಅಧಿಕ ಕಾರುಗಳು ಬೆಂಕಿಗಾಹುತಿಯಾದವು.  

“ಬೆಂಗಳೂರು ಶಾಶ್ವತ ನೆಲೆ ಆಗಲಿ’; ವಿಜಯ್‌ ಭಾಸ್ಕರ್‌: ವೈಮಾನಿಕ ಕ್ಷೇತ್ರದ ರಾಜಧಾನಿ ಬೆಂಗಳೂರು. ಹಾಗಾಗಿ, ವೈಮಾನಿಕ ಪ್ರದರ್ಶನ ನಡೆಯುವ ಶಾಶ್ವತ ನೆಲೆಯನ್ನಾಗಿ ಉದ್ಯಾನ ನಗರಿಯನ್ನು ಘೋಷಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್‌ ಭಾಸ್ಕರ್‌ ಮನವಿ ಮಾಡಿದರು. ಐದು ದಿನಗಳ 12ನೇ “ಏರೋ ಇಂಡಿಯಾ ಶೋ’ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯದಲ್ಲಿ ವೈಮಾನಿಕ ಕ್ಷೇತ್ರದಲ್ಲಿ ಹೂಡಿಕೆಗೆ ಸಾಕಷ್ಟು ಅವಕಾಶಗಳಿವೆ. ಬೆಂಗಳೂರು ಮಾತ್ರವಲ್ಲ; ಈಚೆಗೆ ಬೆಳಗಾವಿಗೆ ಕೂಡ ಏರೋಸ್ಪೇಸ್‌ ಪಾರ್ಕ್‌ ಬರುತ್ತಿದೆ. ಪ್ರತಿ ಪ್ರದರ್ಶನದಲ್ಲಿ ಪ್ರದರ್ಶಕರ ಸಂಖ್ಯೆ ಮತ್ತು ಹೂಡಿಕೆ ಪ್ರಮಾಣ ಹೆಚ್ಚುತ್ತಿದೆ. ಈ ಎಲ್ಲ ದೃಷ್ಟಿಯಿಂದ ಬೆಂಗಳೂರನ್ನು ವೈಮಾನಿಕ ಪ್ರದರ್ಶನದ ಶಾಶ್ವತ ನೆಲೆಯನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿದರು.

* ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.