ಸಾಹಿತ್ಯ ಸಮ್ಮೇಳನ ನಿರ್ಣಯಗಳಿಗೆ ಇನ್ನೂ “ಜಾರಿ’ ಭಾಗ್ಯವಿಲ್ಲ


Team Udayavani, Jan 5, 2019, 12:30 AM IST

sahitya-sammelana.jpg

ಬೆಂಗಳೂರು: ಇಂಗ್ಲೀಷ್‌ ಮಾಧ್ಯಮ ಶಾಲೆಗಳಲ್ಲಿ ಕಡ್ಡಾಯವಾಗಿ  ನಾಡಗೀತೆ ಹಾಡುವುದು. ಹೈಕೋರ್ಟ್‌ ಕಲಾಪ ಹಾಗೂ ತೀರ್ಪು ಕಡ್ಡಾಯವಾಗಿ ಕನ್ನಡದಲ್ಲಿರುವುದು. ಒಂದನೇ ತರಗತಿಯಿಂದ ನಾಲ್ಕನೇ ತರಗತಿ ವರೆಗೂ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಸೇರಿದಂತೆ ಈವರೆಗೆ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಕೈಗೊಂಡಿರುವ ಕನ್ನಡ ಉಳಿಸುವ ಹಲವು ನಿರ್ಣಯಗಳು ಇನ್ನೂ ಜಾರಿಯಾಗಿಲ್ಲ.

ಪ್ರತಿವರ್ಷ ಸಾಹಿತ್ಯ ಸಮ್ಮೇಳನಗಳಲ್ಲಿ ನಾಡು-ನುಡಿ ರಕ್ಷಣೆ ವಿಚಾರದಲ್ಲಿ ಹಲವಾರು ಮಹತ್ವದ ನಿರ್ಣಗಳನ್ನು ಅಂಗೀಕಾರ ಮಾಡಿದ್ದರೂ ರಾಜ್ಯ ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ಇಚ್ಛಾಶಕ್ತಿ ಕೊರತೆಯಿಂದ ಸಮ್ಮೇಳನಗಳಲ್ಲಿ ಕೈಗೊಂಡ ನಿರ್ಣಯಗಳು ಪುಸ್ತಕದಲ್ಲೇ ಉಳಿದಂತಾಗಿವೆ.

2014 ರಲ್ಲಿ ಕೊಡಗಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ನಾಡಗೀತೆಯನ್ನು ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ಕಡ್ಡಾಯವಾಗಿ ಹಾಡಬೇಕು. ಗಡಿನಾಡ ಶಾಲೆಗಳನ್ನು ಮುಚ್ಚಬಾರದು.  ಹೈಕೋರ್ಟ್‌ ಕಲಾಪ ಹಾಗೂ ತೀರ್ಪು ಕನ್ನಡದಲ್ಲಿರಬೇಕು ಎಂಬ ನಿರ್ಣಯಗಳನ್ನು ಅಂಗೀಕರಿಸಲಾಗಿತ್ತು. ಆದರೆ ಅವು ಜಾರಿಯಾಗಿಲ್ಲ.

ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಕುರಿತಾದ ಹಲವು ನಿರ್ಣಯಗಳನ್ನು ಸಮೇಳನದ ಅಧ್ಯಕ್ಷರು ಕೈಗೊಳ್ಳುತ್ತಾರೆ. ಆದರೆ, ಬಹುತೇಕ ಅವು ಅನುಷ್ಠಾನಕ್ಕೆ ಬರುವುದಿಲ್ಲ ಎಂದು ಕೊಡಗಿನಲ್ಲಿ ನಡೆದ 80 ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾರಥ್ಯ ವಹಿಸಿದ್ದ ಮಕ್ಕಳ ಸಾಹಿತಿ ನಾ.ಡಿಸೋಜ ಬೇಸರ ವ್ಯಕ್ತಪಡಿಸಿದ್ದಾರೆ.

ಸಮ್ಮೇಳನಗಳಲ್ಲಿ ತೆಗೆದುಕೊಳ್ಳುವ ನಿರ್ಣಯಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಸಾಪದ್ದು ಕೂಡ ತಪ್ಪಿದೆ. ಒಂದಿಷ್ಟು ನಿರ್ಣಯಗಳನ್ನು ಮಂಡಿಸಿ ವೇದಿಕೆಯಲ್ಲಿ ಓದುವುದಕ್ಕೆ ಮಾತ್ರ ಸೀಮಿತವಾಗ ಬಾರದು. ಸಮ್ಮೇಳನಗಳಲ್ಲಿನ ನಿರ್ಣಯಗಳನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಪ್ರಚುರಪಡಿಸಬೇಕು. ಸಾಹಿತ್ಯ ಸಮ್ಮೇಳನ ಕೇವಲ ನಿರ್ಣಯಗಳ ಮಂಡನೆಗೆ ಮಾತ್ರ ಸೀಮಿತವಾಗಬಾರದು. ನಿರ್ಣಯಗಳ ಬೆನ್ನತ್ತಿ ಹೋಗುವ ಕೆಲಸ ಆಗಬೇಕಾಗಿದೆ ಎಂದು ಹೇಳಿದ್ದಾರೆ.

ಸರ್ಕಾರವು ಸಹ ಆರ್ಥಿಕ ನೆರವು ಕೊಟ್ಟು ಸುಮ್ಮನಾಗುವುದು ಸರಿಯಲ್ಲ. ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಚರ್ಚೆಗಳು ಹಾಗೂ ನಿರ್ಣಯಗÙನ್ನು ಗಂಭೀರವಾಗಿ ಪರಿಗಣಿಸಿ ಅವುಗಳ ಜಾರಿಯಾಗಿಯೇ ವಿಶೇಷ ಅಧಿಕಾರಿಯನ್ನು ನೇಮಿಸಬೇಕು. ಸರ್ಕಾರವೇ ಅಧಿಕಾರಿಯೊಬ್ಬರನ್ನು ಸಮ್ಮೇಳನಕ್ಕಾಗಿಯೇ ನೇಮಕ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಸರ್ಕಾರ ಗಮನ ಹರಿಸುವುದಿಲ್ಲ
ಸಮ್ಮೇಳದ ಕೆಲವು ನಿರ್ಣಗಳು ಈಡೇರಿಕೆಯಾಗಿವೆ. ಆದರೆ ಆಗಬೇಕಾಗಿರುವವು ಕೂಡ ಹಲವು ಇವೆ. 2015 ರಲ್ಲಿ ಶ್ರವಣಗೊಳದಲ್ಲಿ ನಡೆದ 81 ನೇ ಅಖೀಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದೆ. ಆಗ ಒಂದನೇ ತರಗತಿಯಿಂದ ನಾಲ್ಕನೇ ತರಗತಿ ವರೆಗೂ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕು ಎಂಬ ಒಂದೇ ಒಂದು ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಆದರೆ, ಇಲ್ಲಿಯವರೆಗೂ ಆ ಬೇಡಿಕೆಗೆ ಈಡೇರಿಕೆಯಾಗಿಲ್ಲ ಎಂದು ಕವಿ ಸಿದ್ಧಲಿಂಗಯ್ಯ ದೂರುತ್ತಾರೆ.

ಸಮ್ಮೇಳನದ ಅಧ್ಯಕ್ಷರು ಮಂಡಿಸುವಂತಹ ಆಶಯಗಳು ಕೂಡ ಈಡೇರಿಕೆ ಆಗಬೇಕು. ದುರದೃಷ್ಟವಶಾತ್‌ ಅವುಗಳ ಅನುಷ್ಠಾನವಾಗುತ್ತಿಲ್ಲ. ಈ ಸಂಬಂಧ ಕನ್ನಡಿಗರು ಹೋರಾಟ ನಡೆಸಬೇಕಾಗಿದೆ. ಅಧಿಕಾರಿಗಳು ಸರ್ಕಾರವನ್ನು ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿ ನಿರತವಾಗಿರುವುದೇ ಇದಕ್ಕೆ ಕಾರಣ ಎಂದು ಟೀಕಿಸುತ್ತಾರೆ.

ವರದಿ ಅನುಷ್ಠಾನಗೊಂಡಿಲ್ಲ
ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣದ ಸಂಬಂಧ  ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ಧರಾಮಯ್ಯ ಅವರು ಶಿಕ್ಷಣ ತಜ್ಞರ ಒಂದು ಸಮಿತಿ ನೇಮಕ ಮಾಡಿದ್ದರು. ಆ ಸಮಿತಿ 21 ಅಂಶಗಳ ಒಂದು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಈ ಬಗ್ಗೆ ಮೈಸೂರಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಆದರೆ ಆ ವರದಿಯನ್ನು ಸರ್ಕಾರ ಇನ್ನೂ ಜಾರಿಗೆ ತಂದಿಲ್ಲ ಎಂದು ಮೈಸೂರಿನಲ್ಲಿ ನಡೆದ 83 ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಚಂದ್ರಶೇಖರ ಪಾಟೀಲ ದೂರುತ್ತಾರೆ.

ಕನ್ನಡ ಹಿತಾಸಕ್ತಿಗಾಗಿ ನಿರ್ಣಯವನ್ನು ಸ್ವೀಕಾರ ಮಾಡಲಾಗುತ್ತದೆ. ಆದರೆ ಸರ್ಕಾರ ಈಡೇರಿಕೆಗೆ ಮುಂದಾಗದಿದ್ದಾಗ ಮತ್ತದೇ ನಿರ್ಣಯಗಳನ್ನು ಸ್ವಲ್ಪ ಬದಲಾವಣೆ ಮಾಡಿ ಮುಂದಿನ ಅಧಿವೇಶನದಲ್ಲಿ  ಅಂಗೀಕಾರ ಮಾಡಲಾಗುತ್ತದೆ. ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು  ಕೈ ಕಟ್ಟಿ ಸುಮ್ಮನೇ ಕೂರಬಾರದು ಎನ್ನುತ್ತಾರೆ. 2004ರಲ್ಲಿ ಮೂಡುಬಿದಿರೆಯಲ್ಲಿ ನಡೆದ 71ನೇ ಅಖೀಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಕಮಲ ಹಂಪನ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಸರ್ಕಾರ ಈಡೇರಿಸಲೇಬೇಕು ಎಂಬ ನಿರ್ಣಯವಲ್ಲ. ಅದು ಆ ಸಮ್ಮೇಳನದ ಅಭಿಪ್ರಾಯವಾಗಿರುತ್ತದೆ, ಕಾರ್ಯಕಾರಿ ಸಮಿತಿಯೇ ಇದನ್ನು ನಿರ್ಧರಿಸಿ ಬಿಡುತ್ತದೆ.
– ಬರಗೂರು ರಾಮಚಂದ್ರಪ್ಪ, ಸಾಹಿತಿ.

ಸರ್ಕಾರ ಸಮ್ಮೇಳನಕ್ಕೆ ಹಣ ಕೊಡುತ್ತದೆ. ಆದರೆ ಅಲ್ಲಿ ತೆಗೆದು ಕೊಂಡಂತಹ ನಿರ್ಣಯಗಳನ್ನು ಈಡೇರಿಸುವ ಕಾರ್ಯಕ್ಕೆ ಮುಂದಾಗುವುದಿಲ್ಲ. ಹೀಗಾಗಿಯೇ ಹಳೆಯ ನಿರ್ಣಯಗಳನ್ನೇ ಮತ್ತೆ ಅಂಗೀಕಾರ ಮಾಡಿರುವ ಉದಾಹರಣೆಗಳಿವೆ.
– ಡಾ.ಗೀತಾ ನಾಗಭೂಷಣ್‌, ಗದಗ ಸಾಹಿತ್ಯ ಸಮ್ಮೇಳನಾಧ್ಯಕ್ಷೆ

– ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.