ಅಕ್ಷಯ ತೃತೀಯ: ಬಂಗಾರ ಖರೀದಿ ಜೋರು


Team Udayavani, May 8, 2019, 3:03 AM IST

akshaya

ಬೆಂಗಳೂರು: ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಮಂಗಳವಾರ ಸಿಲಿಕಾನ್‌ ಸಿಟಿಯಲ್ಲಿ ಬಹುತೇಕ ಚಿನ್ನಾಭರಣ ಮಳಿಗೆಗಳಲ್ಲಿ ಚಿನ್ನ ಖರೀದಿಯ ಭರಾಟೆ ಜೋರಾಗಿತ್ತು.

ಅಕ್ಷಯ ತೃತೀಯದಂದು ಆಭರಣ ಖರೀದಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆ ಇದೆ. ಅದರಲ್ಲೂ ಚಿನ್ನ ಬಂಗಾರ ಕೊಂಡರೆ ವರ್ಷವಿಡೀ ಒಳ್ಳೆಯದಾಗುತ್ತದೆ ನಂಬಿಕೆಯಿಂದ ಜನರು ಚಿನ್ನಾಭರಣ ಮಳಿಗೆಗಳಿಗೆ ಭೇಟಿ ನೀಡಿ ಆಭರಣಗಳನ್ನು ಖರೀದಿಸಿದರು.

ಮಂಗಳವಾರ ಮುಂಜಾನೆ 3 ಗಂಟೆ 5 ನಿಮಿಷಕ್ಕೆ ಆರಂಭವಾದ ಶುಭಗಳಿಗೆಗೆ ಕೆಲ ಆಭರಣ ಮಳಿಗೆಗಳಲ್ಲಿ ಅಕ್ಷಯ ತೃತೀಯಕ್ಕಾಗಿ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಒಡವೆಗಳಿಗೆ ರಿಯಾಯಿತಿ ಹಾಗೂ ಬಹುಮಾನಗಳನ್ನು ನೀಡಲಾಯಿತು.

ಸುಲ್ತಾನ್‌ ಡೈಮಂಡ್ಸ್‌ ಅಂಡ್‌ ಗೋಲ್ಡ್‌ ಅಕ್ಷಯ ತೃತೀಯ ಅಂಗವಾಗಿ 5 ಗ್ರಾಂ ಚಿನ್ನಾಭರಣಗಳು ಹಾಗೂ 25 ಸಾವಿರ ಮೇಲ್ಪಟ್ಟು ವಜ್ರಾಭರಣಗಳ ಖರೀದಿಗೆ ಉಚಿತ ಚಿನ್ನದ ನಾಣ್ಯ, ಜೋಸ್ಕೊ ಜ್ಯುವೆಲರ್ 30 ಸಾವಿರ ಮೇಲ್ಪಟ್ಟ ಚಿನ್ನಾಭರಣ ಖರೀದಿ ಮೇಲೆ ಉಚಿತ ಚಿನ್ನದ ನಾಟ್ಯ ನೀಡಲಾಯಿತು.

ಶ್ರೀಸಾಯಿ ಗೋಲ್ಡ್‌ ಪ್ಯಾಲೇಸ್‌ ಜ್ಯುವೆಲರಿಯಲ್ಲಿ ಚಿನ್ನ, ಬೆಳ್ಳಿ, ವಜ್ರ ಖರೀದಿಸುವವರಿಗೆ ತಿರುಪತಿ ಪದ್ಮಾವತಿ ಸನ್ನಿಧಿಯಲ್ಲಿ ಪೂಜಿಸಲ್ಪಟ್ಟ ಲಕ್ಷ್ಮೀ ವಿಗ್ರಹ ನೀಡುವ ಜತೆಗೆ ಮಹಿಳೆಯರಿಗೆ ಮಡಲಕ್ಕಿ ತುಂಬಲಾಯಿತು. ಕೆಲವೊಂದು ಮಳಿಗೆಗಳಲ್ಲಿ ಕ್ರೆಡಿಟ್‌ ಮತ್ತು ಡೆಬಿಟ್‌ ಕಾರ್ಡ್‌ಗಳ ಮೇಲೆ ಶೇ.5ರಷ್ಟು ಕ್ಯಾಶ್‌ಬ್ಯಾಕ್‌ ಕೂಡಾ ಲಭ್ಯವಿತ್ತು. ಮಳಿಗೆಗಳಲ್ಲಿ ಜನಜಂಗುಳಿ ಕಂಡು ಬಂತು.

ಬಂಗಾರದ ಓಲೆ, ಉಂಗುರ, ಮೂಗು ನತ್ತು, ಚೈನು, ಬೆಳ್ಳಿ ಕಾಲು ಚೈನು, ಲಕ್ಷ್ಮೀ ಮುದ್ರೆಯ ಚಿನ್ನದ ನಾಣ್ಯ, ಪಾರಂಪರಿಕ ಆಭರಣಗಳು, ಟೆಂಪಲ್‌ ಜ್ಯುವೆಲರ್, ಆ್ಯಂಟಿಕ್‌ ಸೇರಿದಂತೆ ವಿವಿಧ ನೂತನ ವಿನ್ಯಾಸದ ಆಭರಣಗಳಿಗೆ ಬೇಡಿಕೆ ಹೆಚ್ಚಿತ್ತು. ವಿಶೇಷವಾಗಿ ರಾಜಕೀಯ ಪಕ್ಷದ ಚಿಹ್ನೆ ಹಾಗೂ ನಾಯಕರ ಭಾವಚಿತ್ರವಿರುವ ಆಭರಣಕ್ಕೆ ಈ ಬಾರಿ ಬೇಡಿಕೆ ಇತ್ತು ಎಂದು ಚಿನ್ನದಂಗಡಿ ಮಾರಾಟಗಾರರು ತಿಳಿಸಿದರು.

ಹೆಚ್ಚಿನ ಬೇಡಿಕೆ ಇತ್ತು. 916 ಹಾಲ್‌ ಮಾರ್ಕ್‌ ಇರುವ ಒಂದು ಗ್ರಾಂ ಆಭರಣ ಚಿನ್ನ 3,100 ರೂ. ಅಪರಂಜಿ ಚಿನ್ನ 3,300 ರೂ.ಅಸುಪಾಸಿನಲ್ಲಿ ಮಾರಾಟವಾಯಿತು.

ಕಳೆದ ಬಾರಿಗಿಂತ ವಹಿವಾಟು ದುಪ್ಪಟ್ಟಾಗಿದೆ. ವಿಶೇಷ ಆ್ಯಂಟಿಕ್‌ ಆಭರಣಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತು. ಮಧ್ಯಾಹ್ನನಂತರ ಗ್ರಾಹಕರ ಆಗಮನ ಜೋರಿತ್ತು.
-ಟಿ.ಎ.ಶರವಣ, ಅಧ್ಯಕ್ಷ, ಕರ್ನಾಟಕ ಜ್ಯುವೆಲ್ಲರ್ಸ್‌ ಅಸೋಸಿಯೇಷನ್‌

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.