ಅಪರಾಧ ಪ್ರಕರಣಗಳ ಹೆಚ್ಚಳಕ್ಕೆ ಮದ್ಯ ಕಾರಣ?
ಎರಡೇ ದಿನದಲ್ಲಿ 9 ಗಂಭೀರ ಪ್ರಕರಣ ದಾಖಲು
Team Udayavani, May 10, 2020, 8:32 AM IST
ಬೆಂಗಳೂರು: ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ನಗರದಲ್ಲಿ ಅಪರಾಧಗಳ ಹಾವಳಿ ಹೆಚ್ಚಾಗಿದ್ದು, ಕೇವಲ ಎರಡೇ ದಿನಗಳಲ್ಲಿ 9 ಗಂಭೀರ ಪ್ರಕರಣ ದಾಖಲಾಗಿವೆ. ಲಾಕ್ಡೌನ್ ಅವಧಿಯಲ್ಲಿ ಅಂದರೆ ಇಡೀ ಏಪ್ರಿಲ್ನಲ್ಲಿ ದಾಖಲಾದ ಪ್ರಕರಣಗಳು ಕೇವಲ 8!.
ಹೌದು, ಕಳೆದ 2-3 ದಿನಗಳಲ್ಲಿ ಕೊಲೆ, ಕೊಲೆ ಯತ್ನ ಪ್ರಕರಣ, ಪುಂಡರ ಮೇಲೆ ಪೊಲೀಸರು ಗುಂಡು ಹಾರಿಸಿ ಗುಂಡೇಟಿನ ರುಚಿ ತೋರಿಸಿದ್ದು ಸೇರಿ ಸುಮಾರು ಒಂಬತ್ತು ಗಂಭೀರ ಪ್ರಕರಣಗಳು ದಾಖಲಾಗಿವೆ. ಏಪ್ರಿಲ್ನಲ್ಲಿ ಇದೇ ಮಾದರಿಯ ಒಟ್ಟಾರೆ 8 ಪ್ರಕರಣ ದಾಖಲಾಗಿವೆ. 42 ದಿನ ತುಸು ನಿರಾಳವಾಗಿದ್ದ ಪೊಲೀಸರಿಗೆ ಮತ್ತೆ ತಲೆನೋವು ಶುರುವಾಗಿದೆ.
ನಗರದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಮೊದಲ ದಿನವೇ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಬುಧವಾರ, ಗುರುವಾರವೂ ಅಪರಾಧ ಪ್ರಕರಣ ನಡೆದಿವೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಹರೀಶ್ ಎಂಬಾತ ಮದ್ಯ ಖರೀದಿಗಾಗಿ ಮನೆಯವರ ಬಳಿ ಹಣ ಕೇಳಿದ್ದು, ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಶೇ.80 ದೇಹ ಸುಟ್ಟುಹೋಗಿದೆ.
ಮತ್ತೂಂದು ಪ್ರಕರಣದಲ್ಲಿ ಅತಿಯಾಗಿ ಮದ್ಯ ಸೇವಿಸಿ ದೇವರಾಜ್ ಎಂಬಾತ ಆಯತಪ್ಪಿ ಚರಂಡಿಗೆ ಬಿದ್ದು ಮೃತಪಟ್ಟಿದ್ದಾನೆ. ಇನ್ನೊಂದು ಪ್ರಕರಣದಲ್ಲಿ ಮದ್ಯದ ಅಮಲಿನಲ್ಲಿ ಜಗಳ ತೆಗೆದು ಸ್ನೇಹಿತನೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯ ಶ್ರೀನಿವಾಸ್, ಸಂತೋಷ್ ಇಬ್ಬರು ಬಹಳ ದಿನಗಳ ನಂತರ ಒಟ್ಟಿಗೆ ದೊಮ್ಮಲೂರು ಸ್ಮಶಾನದ ಬಳಿ ಮದ್ಯ ಸೇವಿಸುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿದ್ದು, ಸಂತೋಷ್ ಶ್ರೀನಿವಾಸ್ಗೆ ಹೊಡೆದು ಕೊಲೆ ಮಾಡಿದ್ದಾನೆ.
ಅದೇ ರೀತಿ, ಹೈಗ್ರೌಂಡ್ ಠಾಣೆ ವ್ಯಾಪ್ತಿಯಲ್ಲಿ ಕುಡಿದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಇನ್ನು ಬಾಗಲಗುಂಟೆ ಬಳಿ ರೌಡಿಶೀಟರ್ಗಳಿಬ್ಬರು ಮದ್ಯದ ನಶೆಯಲ್ಲಿ ನಗರದಲ್ಲಿ ಪ್ರಾಬಲ್ಯ ಹೆಚ್ಚಿಸಿಕೊಳ್ಳುವ ವಿಚಾರದಲ್ಲಿ ರೌಡಿ ರಣ್ಸಿಂಗ್ ಮತ್ತು ಪ್ರಭು ಎಂಬಾತನ ನಡುವೆ ಗಲಾಟೆ ನಡೆದಿದೆ. ಪ್ರಭು ಕರಣ್ ಸಿಂಗ್ಗೆ ಚಾಕುವಿನಿದ ಇರಿದು ಕೊಲೆಗೈದಿದ್ದಾನೆ. ಬುಧವಾರ ಪ್ರಭುಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದೇ ವೇಳೆ ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಆರೋಪಿ ಸಂಜಯ್ ಎಂಬಾತನಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.
ಗುರುವಾರವೂ ನಗರದ 2 ಕಡೆ ಕೊಲೆ ಪ್ರಕರಣ ದಾಖಲಾಗಿದ್ದು, ರಾಮಮೂರ್ತಿನಗರ, ಆರ್.ಟಿ. ನಗರ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಉಳಿದಂತೆ ಶ್ರೀರಾಮಪುರ, ಸುಬ್ರಹ್ಮಣ್ಯಪುರ, ಕೆಂಗೇರಿ, ವಿದ್ಯಾರಣ್ಯಪುರ, ಶೇಷಾದ್ರಿಪುರ ಸೇರಿ ನಗರದ ವಿವಿಧೆಡೆ ಸಣ್ಣ-ಪುಟ್ಟ ಗಲಾಟೆ, ಹಲ್ಲೆ ಪ್ರಕರಣ ದಾಖಲಾಗಿದ್ದು, ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗುತ್ತಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
–ಮೋಹನ್ ಭದ್ರಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು