ಎಲ್ಲ ಗೊಂದಲ ಶೀಘ್ರ ಶಮನ


Team Udayavani, Jun 10, 2018, 12:00 PM IST

yella-gon.jpg

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದಲ್ಲಿ ಉಂಟಾಗಿರುವ ಎಲ್ಲ ಗೊಂದಲಗಳು ಶೀಘ್ರವೇ ಬಗೆಹರಿಯಲಿದ್ದು, ಕೆಲವು ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶನಿವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಕ್ಷದಲ್ಲಿರುವ ಗೊಂದಲ ಆದಷ್ಟು ಬೇಗ ಬಗೆಹರಿಯಲಿದೆ. ಮಾಜಿ ಸಚಿವ ಎಂ.ಬಿ.ಪಾಟೀಲ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ಎಂ.ಬಿ.ಪಾಟೀಲ್‌ ಅವರಾಗಿಯೇ ದೆಹಲಿಗೆ ಹೋಗಿದ್ದಾರೋ ಅಥವಾ ಹೈಕಮಾಂಡ್‌ ಅವರನ್ನು ಕರೆಸಿಕೊಂಡಿದೆಯೋ ಗೊತ್ತಿಲ್ಲ. ದಿನೇಶ್‌ ಗುಂಡೂರಾವ್‌ ಕೂಡ ಯಾವ ಕಾರಣಕ್ಕೆ ದೆಹಲಿಗೆ ಹೋಗಿದ್ದಾರೆ ಎಂಬುದು ತಿಳಿದಿಲ್ಲ  ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಪರಮೇಶ್ವರ್‌ ಅವರನ್ನು ಭೇಟಿ ಮಾಡಿದ ಸಚಿವ ಆರ್‌.ವಿ.ದೇಶಪಾಂಡೆ, ನಂತರ ಸುದ್ದಿಗಾರರ ಜತೆ ಮಾತನಾಡಿ, ಸಂಪುಟ ರಚನೆ  ಸಂದರ್ಭದಲ್ಲಿ ಅಸಮಾಧಾನ ಸಹಜ. ಹಲವರು ಆಕಾಂಕ್ಷಿಗಳು ಇರುತ್ತಾರೆ, ಅವಕಾಶ ಸಿಗದೇ ಇ¨ªಾಗ ಅಸಮಾಧಾನ ವ್ಯಕ್ತ ಪಡಿಸುತ್ತಾರೆ. ಎಲ್ಲರನ್ನೂ ಮನವೊಲಿಸುವ ಕೆಲಸ ನಡೆಯುತ್ತಿದೆ. ಒಂದೇ ಪಕ್ಷದ ಸರ್ಕಾರ ಇರುವಾಗಲೇ ಇವೆಲ್ಲ ಸಮಾನ್ಯ, ಇನ್ನು ಸಂಮಿಶ್ರ ಸರ್ಕಾರದಲ್ಲಿ ಇರುವುದಿಲ್ಲವೇ ಎಂದು ಪ್ರಶ್ನಿಸಿದರು.

ನನಗೂ ಸಚಿವ ಸ್ಥಾನ ಕೊಟ್ಟಿರಲಿಲ್ಲ: ಮತ್ತೂಂದೆಡೆ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಡಿ.ಕೆ.ಶಿವಕುಮಾರ್‌ ಅವರ ಮನೆ ಮುಂದೆ ಪ್ರತಿಭಟಿಸಿ, ಮನವಿ ಸಲ್ಲಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಸಚಿವರು, ಮುನಿಯಪ್ಪ ಅವರನ್ನು ಪಕ್ಷ ಗಮನದಲ್ಲಿ ಇಟ್ಟಿಕೊಂಡಿದೆ. ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಈ ಬಗ್ಗೆ ಶಾಸಕಾಂಗ ಪಕ್ಷದ ನಾಯಕರು, ಪಕ್ಷದ ಅಧ್ಯಕ್ಷರು ಗಮನಹರಿಸುತ್ತಾರೆ ಎಂದು ಹೇಳಿದರು.

ಧರ್ಮಸಿಂಗ್‌ ಅವರ ಅವಧಿಯಲ್ಲಿ ನನಗೆ ಸಚಿವ ಸ್ಥಾನ ನೀಡಿರಲಿಲ್ಲ, ಸಿದ್ದರಾಮಯ್ಯ ಅವರು ಸಿಎಂ ಆದ ನಂತರ ಆರು ತಿಂಗಳವರೆಗೆ ನನಗೆ ಸಚಿವ ಸ್ಥಾನ ನೀಡಿರಲಿಲ್ಲ. ಆದರೆ, ಮುಂದೆ ಪಕ್ಷ ಒಳ್ಳೆಯ ಸ್ಥಾನಮಾನ ನೀಡಿದೆ. ಹೀಗಾಗಿ ಮುನಿಯಪ್ಪ ಅವರಿಗೂ ಒಳ್ಳೆಯ ಹುದ್ದೆ ಸಿಗುತ್ತದೆ. ಹೆಚ್ಚುವರಿ ಖಾತೆ ಹಿಂಪಡೆದು ಸಂಪುಟ ಪುನರ್‌ ರಚನೆ ಮಾಡುವಾಗ ಬೇರೆಯವರಿಗೆ ಅವಕಾಶ ಸಿಗಲಿದೆ ಎಂದು ಹೇಳಿದರು.

ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿದೆ. ಬಿಜೆಪಿ ಅಧಿಕಾರದಲ್ಲಿ ಇರಬಾರದು ಎಂದು ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಆದರೆ, ಕಾಂಗ್ರೆಸ್‌ ನಾಯಕರು ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪುಟ ರಚನೆ ಮಾಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಕ್ಷಣಿಕ ಮಾತ್ರ. 
-ಜಾಫ‌ರ್‌ ಷರೀಫ್, ಕಾಂಗ್ರೆಸ್‌ ಹಿರಿಯ ಮುಖಂಡ

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.