ಒಂದೇ ಕ್ಲಿಕ್ಕಿನಲ್ಲಿ ಸಕಲ ಪದವಿ ಕೋರ್ಸ್


Team Udayavani, May 11, 2019, 3:08 AM IST

onde

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಲಭ್ಯವಿರುವ ಕೋರ್ಸ್‌, ಪ್ರಾಧ್ಯಾಪಕರು, ತರಗತಿ ವೇಳಾಪಟ್ಟಿ ಹಾಗೂ ಸೌಲಭ್ಯಗಳ ಮಾಹಿತಿಗಾಗಿ ವಿದ್ಯಾರ್ಥಿಗಳು ಕಾಲೇಜಿನಿಂದ ಕಾಲೇಜಿಗೆ ಅಲೆದಾಡಬೇಕಿಲ್ಲ! ಎಲ್ಲ ಮಾಹಿತಿ ಬೆರಳ ತುದಿಯಲ್ಲೇ ಸಿಗಲಿದೆ.

2019-20ನೇ ಸಾಲಿಗೆ ಸರ್ಕಾರಿ ಪದವಿ ಕಾಲೇಜಿನಲ್ಲಿ ದಾಖಲಾತಿ ಪಡೆಯ ಬಯಸುವ ವಿದ್ಯಾರ್ಥಿಗಳು ಕೋರ್ಸ್‌ ಅಥವಾ ಇನ್ಯಾವುದೋ ಮಾಹಿತಿಗಾಗಿ ಕಾಲೇಜುಗಳಿಗೆ ಎಡತಾಕಬೇಕಿಲ್ಲ. ಕಾಲೇಜು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲೇ ಎಲ್ಲ ಮಾಹಿತಿ ಲಭ್ಯ. ರಾಜ್ಯದ 412 ಸರ್ಕಾರಿ ಕಾಲೇಜುಗಳು ವೆಬ್‌ಸೈಟ್‌ ಸಿದ್ಧಪಡಿಸಿದ್ದು, ಇಲಾಖೆಯ ಅಂತರ್ಜಾಲ ತಾಣದಲ್ಲಿ ಲಿಂಕ್‌ ದೊರೆಯಲಿದೆ. ವಿದ್ಯಾರ್ಥಿಗಳು ಸುಲಭವಾಗಿ ಆ ಲಿಂಕ್‌ ತೆರೆದು, ತಮಗೆ ಬೇಕಾದ ಸರ್ಕಾರಿ ಪದವಿ ಕಾಲೇಜಿನ ಮಾಹಿತಿ ಪಡೆಯಬಹುದಾಗಿದೆ.

ಎಲ್ಲ ಸರ್ಕಾರಿ ಕಾಲೇಜಿನ ವೆಬ್‌ಸೈಟ್‌ ಏಕರೂಪದಲ್ಲಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಮಾಹಿತಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ದೊರೆಯಲಿದೆ (ಕೆಲವು ಕಾಲೇಜು ಇನ್ನೂ ಕನ್ನಡ ವೆಬ್‌ಸೈಟ್‌ ಸಿದ್ಧಪಡಿಸಿಲ್ಲ). ಕಾಲೇಜಿನ ಇತಿಹಾಸದ ಮೆಲುಕು, ಮಿಷನ್‌, ಗುರಿ ಮತ್ತು ವಿಷನ್‌ ಈ ಮೂರು ಅಂಶಗಳು ಹೋಂ ಪೇಜ್‌ನಲ್ಲಿ ಸಿಗಲಿದೆ.

ಎಲ್ಲಾ ವಿವರ ಲಭ್ಯ: ಕಾಲೇಜಿನಲ್ಲಿ ಲಭ್ಯವಿರುವ ಕೋರ್ಸ್‌ಗಳು, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಸಂಪೂರ್ಣ ವಿವರ ದೊರೆಯಲಿದೆ. ಎಷ್ಟು ಕೋರ್ಸ್‌ಗಳು ಮತ್ತು ಅಲ್ಲಿರುವ ಕಾಂಬಿಷೇನ್‌ ವಿವರವು ಅಲ್ಲೇ ದೊರೆಯಲಿದೆ.

ಕೋರ್ಸ್‌ಗಳ ಮಾಹಿತಿಯ ಜತೆಗೆ ಕಾಯಂ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು ಹಾಗೂ ಕಾಲೇಜು ಸಿಬ್ಬಂದಿ ಮಾಹಿತಿಯೂ ಲಭ್ಯವಾಗಲಿದೆ. ಅಲ್ಲದೆ, ಯಾವ ವಿಭಾಗಕ್ಕೆ ಯಾವ ಪ್ರಾಧ್ಯಾಪಕರು ಎಂಬ ಮಾಹಿತಿಯೂ ಇದರಲ್ಲಿ ಸಿಗಲಿದೆ. ವೆಬ್‌ಸೈಟ್‌ನ ಸ್ಟುಡೆಂಟ್‌ ಸಫೋರ್ಟ್‌ ವಿಭಾಗದಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್‌, ರೇಂಜರ್‌, ರೋವರ್‌, ರ್ಯಾಗಿಂಗ್‌ ತಡೆ ಸಮಿತಿ ಮತ್ತು ಪ್ಲೇಸ್‌ಮೆಂಟ್‌ ಸೆಲ್‌ಗ‌ಳ ಮಾಹಿತಿ ಇದೆ.

ಆನ್‌ಲೈನ್‌ನಲ್ಲೇ ವೇಳಾಪಟ್ಟಿ: ಕೋರ್ಸ್‌ ಮತ್ತು ಪ್ರಾಧ್ಯಾಪಕರ ಮಾಹಿತಿ ಮಾತ್ರವಲ್ಲ. ಪ್ರತಿ ವಿದ್ಯಾರ್ಥಿಗೂ ಅತಿ ಅವಶ್ಯಕವಾಗಿರುವ ವೇಳಾಪಟ್ಟಿ ಕೂಡ ವೆಬ್‌ಸೈಟ್‌ನಲ್ಲೇ ದೊರೆಯಲಿದೆ. ಒಂದೊಂದು ಸೆಮಿಸ್ಟರ್‌ಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಸೋಮವಾರದಿಂದ ಶನಿವಾರದವರೆಗಿನ ಎಲ್ಲ ವಿಷಯದ ವೇಳಾಪಟ್ಟಿ ಇಲ್ಲಿ ಸುಲಭವಾಗಿ ಸಿಗುತ್ತದೆ. ಜತೆಗೆ ಕಳೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ವಿವಿಧ ಕೋರ್ಸ್‌ಗಳ ಪಠ್ಯಕ್ರಮವೂ ಲಭ್ಯವಿದೆ. ಕಾಲೇಜಿನ ಗ್ರಂಥಾಲಯ ಮತ್ತು ಆನ್‌ಲೈನ್‌ ಓದಬಹುದಾದ ಪುಸ್ತಕ ಮತ್ತು ಅದರ ಮಾಹಿತಿಯೂ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳಿಗೆ ಸುಲಭವಾಗಿ ಸಿಗಲಿದೆ.

ಆನ್‌ಲೈನ್‌ ಅರ್ಜಿ ಇಲ್ಲ: 2019-20ನೇ ಸಾಲಿಗೆ ಪದವಿ ಕಾಲೇಜಿಗೆ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಲು ಅನುಕೂಲವಾಗುವ ವೆಬ್‌ಸೈಟ್‌ ಒಂದನ್ನು ಕಾಲೇಜು ಶಿಕ್ಷಣ ಇಲಾಖೆ ಅಭಿವೃದ್ಧಿ ಪಡಿಸುತ್ತಿದ್ದು, ಪೂರ್ಣ ಪ್ರಮಾಣದಲ್ಲಿ ಬಳಕೆಗೆ ಸಿಗದೇ ಇರುವುದರಿಂದ 2019-20ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

ಕಾಲೇಜಿಗೆ ಹೋಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳ ಪೂರ್ಣ ವಿವರನ್ನು ಆನ್‌ಲೈನ್‌ನಲ್ಲಿ ಎಂಟ್ರಿ ಮಾಡಲಾಗುತ್ತದೆ. 2020-21ನೇ ಸಾಲಿನಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಬರಲಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ವೆಬ್‌ಸೈಟ್‌ ಬಳಕೆ ಹೇಗೆ?: ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ dce.kar.nic.in ಅನ್ನು ತೆರೆದರೆ, ಮುಖ ಪುಟದ ಎಡಭಾಗದಲ್ಲಿ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಂಬ್ರೆಲಾ ವೆಬ್‌ಸೈಟ್‌ ಎಂಬ ಲಿಂಕ್‌ ಇದೆ. ಆ ಲಿಂಕ್‌ ತೆರೆದರೆ ನಿಮಗೆ ಬೇಕಾದ ಕಾಲೇಜು ಬರುತ್ತದೆ. ಕಾಲೇಜಿನ ಹೆಸರಿನ ಮೇಲೆ ಕ್ಲಿಕ್‌ ಮಾಡಿದರೆ, ಕಾಲೇಜಿನ ವೆಬ್‌ಸೈಟ್‌ ತೆರೆದುಕೊಳ್ಳುತ್ತದೆ.

ಎಲ್ಲ ಸರ್ಕಾರಿ ಕಾಲೇಜುಗಳು ವೆಬ್‌ಸೈಟ್‌ ತೆರೆಯಬೇಕು ಎಂದು ಸೂಚನೆ ನೀಡಿದ್ದೇವೆ. ಈಗ ವೆಬ್‌ಸೈಟ್‌ ಬಳಕೆಗೆ ಸಿದ್ಧವಾಗಿದೆ. ವಿದ್ಯಾರ್ಥಿಗಳು, ಪಾಲಕ, ಪೋಷಕರು ಕಾಲೇಜುಗಳ ಮಾಹಿತಿಯನ್ನು ಸುಲಭವಾಗಿ ಪಡೆದು, ಸರ್ಕಾರಿ ಕಾಲೇಜಿಗೆ ದಾಖಲಾಗಬಹುದಾಗಿದೆ.
-ಪ್ರೊ.ಎಸ್‌.ಮಲ್ಲೇಶ್ವರಪ್ಪ, ನಿರ್ದೇಶಕ, ಕಾಲೇಜು ಶಿಕ್ಷಣ ಇಲಾಖೆ

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.