ಒಂದೇ ಆ್ಯಪ್‌ನಲ್ಲಿ ಎಲ್ಲ ಇಲಾಖೆ ದೂರು


Team Udayavani, Feb 9, 2020, 11:10 AM IST

bng-tdy-2

ಬೆಂಗಳೂರು: ರಾಜಧಾನಿ ಅಭಿವೃದ್ಧಿಗೆ ಸರ್ಕಾರ ಬದ್ಧ ವಾಗಿದ್ದು, ದೂರ ದೃಷ್ಟಿಯುಳ್ಳ ಯೋಜನೆ ರೂಪಿಸಿ ಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ವಿಭಾಗ, ಆರೋಗ್ಯ ಇಲಾಖೆ ಹಾಗೂ ಐಟಿ ಇಲಾಖೆಯಿಂದ ವಿಧಾನಸೌಧ ಮುಂಭಾಗದಲ್ಲಿ ಶನಿವಾರ ಆಯೋಜಿಸಿದ್ದ ಸಹಾಯ 2.0 ಮತ್ತು ನಮ್ಮ ಬೆಂಗಳೂರು ಅಪ್ಲಿಕೇಷನ್‌, ಪಿ.ಒ.ಎಸ್‌ ದಂಡ ವಿಧಿಸುವ ಯಂತ್ರ, ಆ್ಯಂಬುಲೆನ್ಸ್‌ ವಾಹನ ಹಾಗೂ ಯಾಂತ್ರಿಕ ಕಸ ಗುಡಿಸುವ ವಾಹನಕ್ಕೆ ಚಾಲನೆ ನೀಡಿ ಸಿಎಂ ಮಾತನಾಡಿದರು.

ನಗರದ ಸಾರ್ವಜನಿಕರ ದೂರುಗಳನ್ನು ಶೀಘ್ರ ಬಗೆಹರಿ ಸುವುದು, ತುರ್ತು ಸಂದರ್ಭಗಳಲ್ಲಿ ನೆರವಾಗಲು ಆ್ಯಂಬುಲೆನ್ಸ್‌ ಸೇವೆ ಪರಿಚಯಿಸಲಾಗುತ್ತಿದೆ. ನಮ್ಮ ಬೆಂಗಳೂರು ಅಪ್ಲಿಕೇಷನ್‌ನ ಮೂಲಕ ಹಲವು ಇಲಾಖೆ ಗಳಿಗೆ ದೂರು ಸಲ್ಲಿಸಬಹುದಾಗಿದೆ. ದೂರುಗಳು ನಿರ್ದಿಷ್ಟ ಸಮಯದಲ್ಲಿ ಪರಿಹಾರವಾಗಲಿದೆ ಎಂದು ಹೇಳಿದರು.

ಸಹಾಯ 2.0 ಆ್ಯಪ್‌: ಬೆಂಗಳೂರು ನಗರದ ನಾಗರಿಕರು ತಮ್ಮ ಕುಂದು ಕೊರತೆಗಳನ್ನು ದಾಖಲಿಸಲು ಹಾಗೂ ಪರಿಹರಿಸಲು ಸಹಾಯ ಎನ್ನುವ ತಂತ್ರಾಂಶವನ್ನು ಪರಿಚಯಿಸಲಾಗಿದೆ. ಇದನ್ನು ಸದ್ಯ ಮತ್ತಷ್ಟು ಉತ್ಕೃಷ್ಟಗೊಳಿಸಲಾಗಿದೆ. “ಸಹಾಯ 2.0′ ತಂತ್ರಾಂಶವನ್ನು ಅಭಿವೃದ್ದಿಪಡಿಸಿ ಬಿಡುಗಡೆಗೊಳಿಸಲಾಗುತ್ತಿದೆ. ಸಹಾಯ 2.0 ತಂತ್ರಾಂಶದ ಮೂಲಕ ವಿವಿಧ ಮಾದರಿಯ ದೂರುಗಳು ಸಂಬಂಧ ಪಟ್ಟ ಅಧಿಕಾರಿಗಳಿಗೆ ನೇರವಾಗಿ ತಲುಪಲಿದೆ. ಪಾಲಿಕೆಯ ಅಧಿಕಾರಿಗಳು ನೋಂದಾಯಿತ ದೂರುಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸಲು ಅನಕೂಲವಾಗುವಂತೆ ಈ ತಂತ್ರಾಂಶದಲ್ಲಿ ಹಲವು ವ್ಯವಸ್ಥೆಗಳನ್ನು ಮಾಡಲಾಗಿದ್ದು, ಸಾರ್ವಜನಿಕರಿಂದ ದೂರು ದಾಖಲಾದ ತಕ್ಷಣದಿಂದಲೇ ಅಧಿಕಾರಿಗಳು ದೂರಿನ ವಿವರವನ್ನು ತಮ್ಮ ಮೊಬೈಲ್‌ನಲ್ಲಿ ನೋಡಬಹುದಾಗಿದೆ ಹಾಗೂ ದೂರನ್ನು ಪರಿಹಾರವಾದ ತಕ್ಷಣವೇ ಛಾಯಚಿತ್ರ ಸಾರ್ವಜನಿಕರಿಗೆ ತಲುಪಲಿದೆ.

ಅಲ್ಲದೆ, ಈ ಆ್ಯಪ್‌ಗೆ ನಿರ್ದಿಷ್ಟ ಸಮಯ ನಿಗದಿ ಮಾಡಲಾಗಿದ್ದು, ಈ ಕಾಲಮಿತಿಯ ಒಳಗಾಗಿ ಪರಿಹರಿಸಬೇಕಾಗಿದೆ. ಸಮಯ ಮೀರಿದ ದೂರುಗಳನ್ನು ಮೇಲಾಧಿಕಾರಿಗಳಿಗೆ ತಲುಪುವ ವ್ಯವಸ್ಥೆ ಮಾಡಲಾಗಿದೆ.

ನಮ್ಮ ಬೆಂಗಳೂರು ಆ್ಯಪ್‌: ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಬೇಕಾದ ದೂರುಗಳನ್ನು ಒಂದೇ ತಂತ್ರಾಂಶದ ಮೂಲಕ ದಾಖಲಿಸಲು ನಮ್ಮ ಬೆಂಗಳೂರು ಎನ್ನುವ ತಂತ್ರಾಂಶವನ್ನು ಪರಿಚಯಿಸಲಾಗಿದ್ದು, ಈ ಆ್ಯಪ್‌ನ ಮೂಲಕ ಬಿಬಿಎಂಪಿ, ಬೆಸ್ಕಾಂ, ಬಿಎಂಆರ್‌ಸಿಎಲ್‌, ಬಿಡಿಎ, ಜಲ ಮಂಡಳಿ, ಬಿಎಂಟಿಸಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಬಹುದಾಗಿದೆ. ಬಂದೇ ಆ್ಯಪ್‌ನ ಮೂಲಕ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ದೂರು ದಾಖಲಿಸಬಹುದು. ಸಾರ್ವಜನಿಕರು ಈ ತಂತ್ರಾಂಶದಲ್ಲಿ ಲಿಖೀತ, ಛಾಯಾಚಿತ್ರ ಹಾಗೂ ವಿಡಿಯೋ ಮೂಲಕ ದೂರಿನ ವಿವರಗಳನ್ನು ದಾಖಲಿಸಬಹುದಾಗಿದೆ.

ಪಿ.ಒ.ಎಸ್‌ ದಂಡ ವಿಧಿಸುವ ಯಂತ್ರ: ಮಾರ್ಷಲ್‌ಗ‌ಳು ಹಾಗೂ ಪಾಲಿಕೆಯ ಆರೋಗ್ಯಾಧಿಕಾರಿಗಳು ಇಲ್ಲಿಯವರೆಗೆ ಕಾಗದದ ಮೂಲಕ ದಂಡದ ಪ್ರತಿ ನೀಡು ತ್ತಿದ್ದರು. ಸದ್ಯ ಎಲೆಕ್ಟ್ರಾನಿಕ್‌ ಇ-ರಶೀದಿ ದಂಡ ವಿಧಿಸುವ ಯಂತ್ರ ವನ್ನು ಪರಿಚಯಿಸಲಾಗಿದೆ. ಯಂತ್ರದಲ್ಲಿ ದಂಡವನ್ನು ಈ ಯಂತ್ರಗಳ ಮುಖಾಂತರ ಘನತ್ಯಾಜ್ಯ ನಿರ್ವ ಹಣೆಗೆ ಅನುಸಾರವಾಗಿ ಮಾರ್ಷಲ್‌ಗ‌ಳು ದಂಡ ವಿಧಿಸ ಲಿದ್ದು, ಪಾರದರ್ಶಕತೆ ಸಿಗಲಿದೆ. ಇದೇ ವೇಳೆ ಹೊಸದಾಗಿ 17 ಯಾಂತ್ರಿಕ ಕಸ ಗುಡಿಸುವ ಯಂತ್ರ ಪರಿಚಯಿಸಲಾಗಿದೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.