ಎಲ್ಲ ಗೊಂದಲ ಬಗೆ ಹರಿಯುತ್ತೆ : ಎಚ್ಡಿಕೆ
Team Udayavani, Dec 29, 2018, 12:30 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಎಲ್ಲವೂ ಸುಗಮವಾಗಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ನನ್ನ ಮುಖನೋಡಿದರೆ ಅಸಮಾಧಾನವಾದಂತೆ ಕಾಣುತ್ತಿದೆಯಾ ಎಂದು ಮಾಧ್ಯಮದವರನ್ನೇ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದರು. ನಿಗಮ ಮಂಡಳಿ ನೇಮಕ ಕುರಿತು ಜೆಡಿಎಸ್ನ ಕೆಲವು ನಾಯಕರು ವಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದೆಲ್ಲದಕ್ಕೂ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಕಾಂಗ್ರೆಸ್ ನಾಯಕರು ಕಳುಹಿಸಿ ಕೊಟ್ಟಿದ್ದಾರೆ. ನೂತನ ಸಚಿವರ ಖಾತೆಗಳ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿ, ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.