![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ರಾಜ್ಯದ ಎಲ್ಲಯಾತ್ರಿಕರೂ ಸುರಕ್ಷಿತ
Team Udayavani, Jul 5, 2018, 12:02 PM IST
![blore-5.jpg](https://www.udayavani.com/wp-content/uploads/2018/07/5/blore-5.jpg)
ಬೆಂಗಳೂರು: ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ ಎಲ್ಲ 259 ಕೈಲಾಸ ಮಾನಸ ಸರೋವರ ಯಾತ್ರಿಗಳೂ ಸುರಕ್ಷಿತ ಸ್ಥಳದಲ್ಲಿದ್ದು, ಬುಧವಾರ ತಮ್ಮ ಊರುಗಳಿಗೆ ಹಿಂತಿರುಗುವ ಸಿದ್ಧತೆಯಲ್ಲಿದ್ದಾರೆ. ಯಾತ್ರಿಕರೆಲ್ಲರೂ ವಿವಿಧ ತಂಡಗಳಲ್ಲಿ ದೆಹಲಿ, ಕಠ್ಮಂಡು, ಸಿಮಿಕೋಟ್ ಮತ್ತಿತರ ಕಡೆಗಳಲ್ಲಿ ಸುರಕ್ಷಿತವಾಗಿದ್ದಾರೆ. ವಿಮಾನ, ರೈಲುಗಳ ಮೂಲಕ ಬಂದು ತಲುಪಲಿದ್ದಾರೆ. ಈ ಪೈಕಿ ಜಿಗಣಿಯಿಂದ ತೆರಳಿದ್ದ 35 ಜನರ ತಂಡ ಬುಧವಾರ ರಾತ್ರಿಯೇ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
“ಸ್ವಲ್ಪದರಲ್ಲೇ ಬಚಾವ್’: ಬೆಂಗಳೂರಿಗೆ ಬಂದಿಳಿದ ಆ ತಂಡದ ನಾಗೇಶ್ “ಉದಯವಾಣಿ’ಯೊಂದಿಗೆ ಮಾತನಾಡಿ, “15 ದಿನಗಳ ಹಿಂದೆಯೇ ನಾವು ಜಿಗಣಿಯಿಂದ ವೈಷ್ಣವಿದೇವಿ ದರ್ಶನಕ್ಕೆ ತೆರಳಿದ್ದೆವು. ಅಮರನಾಥ ಯಾತ್ರೆಗೆ ತೆರಳುವ ಪ್ಲಾನ್ ಇತ್ತು. ಆದರೆ, ಅಲ್ಲಿ ಸಾಕಷ್ಟು ಮಳೆಯಾಗುತ್ತಿದೆ ಎಂಬ
ಮಾಹಿತಿ ಬಂತು. ಹಾಗಾಗಿ, ಆ ಪ್ರವಾಸ ಮೊಟಕುಗೊಳಿಸಿ, ಅಮೃತಸರದಿಂದ ವಿಮಾನದಲ್ಲಿ ಬಂದಿಳಿದೆವು’ ಎಂದು ಹೇಳಿದರು.
“ನನ್ನ ಅಣ್ಣ ಸೋಮಪ್ರಸಾದ್ ಮತ್ತು ಅತ್ತಿಗೆ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದರು. ಈಗ ಅವರು ಸಿಮಿಕೋಟ್ನಲ್ಲಿ ಸುರಕ್ಷಿತವಾಗಿದ್ದಾರೆ. ದೂರವಾಣಿ ಮೂಲಕ ಮಾತನಾಡಿದೆ. ಗುರುವಾರ ಬೆಂಗಳೂರಿಗೆ ಹಿಂತಿರುಗಲಿದ್ದಾರೆ’ ಎಂದು ಪ್ರಭು ಪ್ರಸಾದ್ ನಿಟ್ಟುಸಿರುಬಿಟ್ಟರು.
ಯಾರ್ಯಾರು ಎಲ್ಲೆಲ್ಲಿದ್ದಾರೆ?: “ಸಂಕಷ್ಟದಲ್ಲಿ ಸಿಲುಕಿರುವ ಬಹುತೇಕ ಎಲ್ಲರನ್ನೂ ಬುಧವಾರ ಸಂಪರ್ಕಿಸಿದ್ದೇವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಇನ್ನು ಕೆಲವರು ಮಾನಸ ಸರೋವರ ಯಾತ್ರೆಯಿಂದ ವೈಷ್ಣವಿದೇವಿ ದರ್ಶನ ಪ್ರವಾಸಕ್ಕೆ ತೆರಳಿದ್ದಾರೆ. ಸಂಧ್ಯಾ ಅವರ ನೇತೃತ್ವದಲ್ಲಿ ನೂರು ಜನರ ಒಂದು ತಂಡವು ಸಿಮಿಕೋಟ್ನ ಸುರಕ್ಷಿತ ಜಾಗದಲ್ಲಿದೆ. ಬೆಂಗಳೂರಿನ ಜೆ.ಪಿ. ನಗರದ ಅಣ್ಣಪ್ಪ ಸೇರಿದಂತೆ 80 ಜನರ ತಂಡ ವೈಷ್ಣವಿದೇವಿ ದರ್ಶನಕ್ಕೆ ಪ್ರಯಾಣ ಬೆಳೆಸಿದ್ದಾರೆ.
ರಾಮನಗರದ ರೇವಮ್ಮ ಮತ್ತು ಸಿದ್ದರೇವಯ್ಯ ದೆಹಲಿಯಲ್ಲಿದ್ದಾರೆ. ನಗರದ ವಿನಾಯಕ ಭಟ್ ನೇತೃತ್ವದ 7 ಜನರ ತಂಡ ಕಠ್ಮಂಡು ವಿನಲ್ಲಿದೆ. ಮೈಸೂರಿನ ಛಾಯಾ ದೇವಿ ಸೇರಿ 15 ಜನರ ತಂಡ ನೇಪಾಳ ದಾಟಿ ಪ್ರವಾಸಕ್ಕೆ ತೆರಳಿದ್ದಾರೆ’ ಎಂದು ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದರು.
ಹವಾಮಾನ ವೈಪರಿತ್ಯ ದಿಂದ ನೇಪಾಳದ ಸಿಮಿಕೋಟ್ನಲ್ಲಿ ಭಾರಿ ಮಳೆಯಿಂದ ಕರ್ನಾಟಕ ಮೂಲದ 259 ಯಾತ್ರಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಯುದ್ಧವಿಮಾನಗಳ ಮೂಲಕ ಅವರೆಲ್ಲರನ್ನೂ ಸುರಕ್ಷಿತ ಸ್ಥಳಗಳಿಗೆ ಕರೆತರಲಾಯಿತು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.