Phone tapping: ವಕೀಲರ ಫೋನ್‌ ಕದ್ದಾಲಿಕೆ ಆರೋಪ


Team Udayavani, Oct 29, 2023, 12:30 PM IST

Phone tapping: ವಕೀಲರ ಫೋನ್‌ ಕದ್ದಾಲಿಕೆ ಆರೋಪ

ಬೆಂಗಳೂರು: ಬಿಟ್‌ ಕಾಯಿನ್‌ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ವಿರುದ್ಧ ಫೋನ್‌ ಕದ್ದಾಲಿಕೆ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಪ್ರಕರಣದ ಕಿಂಗ್‌ ಪಿನ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಪರ ವಕೀಲ ಸ್ವರೂಪ್‌ ಆನಂದ 1ನೇ ಎಸಿಎಂಎಂ ಕೋರ್ಟ್ ಗೆ ದೂರು ನೀಡಿದ್ದು, ವಿಚಾರಣೆ ನಡೆಸಿದ ಕೋರ್ಟ್‌ ಎಸ್‌ಐಟಿ ಮುಖ್ಯಸ್ಥರಾದ ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಮನೀಶ್‌ ಖರ್ಬಿಕರ್‌ ಮತ್ತು ಡಿಐಜಿ ವಂಶಿಕೃಷ್ಣ ಹಾಗೂ ತನಿಖಾಧಿಕಾರಿಗೆ ನ.3ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ. ತುಮಕೂರಿನ ನ್ಯೂ ಎಕ್ಸ್‌ಟೆಷನ್‌ ಪೊಲೀಸ್‌ ಠಾಣೆಯಲ್ಲಿ 2017ರಲ್ಲಿ ಸರ್ಕಾರ ವೆಬ್‌ಸೈಟ್‌ ಹ್ಯಾಕ್‌ ಮಾಡಿದ ಆರೋಪದಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸ್‌ ದಾಖಲಾಗಿತ್ತು. ಬಳಿಕ 2021ರಲ್ಲಿ ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್‌ ಪ್ಪಕರಣದಲ್ಲಿ ಶ್ರೀಕೃಷ್ಣ ಸೇರಿ ಆರೇಳು ಮಂದಿ ಬಂಧನವಾಗಿತ್ತು. ಈ ವೇಳೆ ಶ್ರೀಕಿ ಸರ್ಕಾರಿ ವೆಬ್‌ಸೈಟ್‌ ಹ್ಯಾಂಕಿಂಗ್‌ ಮಾಡಿದ್ದಾನೆ ಎಂಬುದು ಗೊತ್ತಾಗಿತ್ತು.

ಮತ್ತೂಂದೆಡೆ ಕೋರ್ಟ್‌ನಲ್ಲಿ ಶ್ರೀಕಿ ಪರ ವಕೀಲ ಸ್ವರೂಪ್‌ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ವಕೀಲ ಸ್ವರೂಪ್‌ ಆನಂದ್‌ಗೆ ಸಿಐಡಿ ಎಸ್‌ ಐಟಿ ಇನ್‌ಸ್ಪೆಕ್ಟರ್‌ ಎಂ.ಜೆ.ದಯಾನಂದ ತುಮಕೂರಿನ ನ್ಯೂ ಎಕ್‌ Õಟೆಷನ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಕುರಿತು ಮಾಹಿತಿಗಾಗಿ ಖುದ್ದು ಹಾಜರಾಗುವಂತೆ ನೋಟಿಸ್‌ಜಾರಿ ಮಾಡಿದ್ದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸ್ವರೂಪ್‌ ಆನಂದ್‌, 1ನೇ ಎಸಿಎಂಎಂ ಕೋರ್ಟ್‌ಗೆ ಇನ್‌ಸ್ಪೆಕ್ಟರ್‌ ದಯಾನಂದ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ, ತಮ್ಮ ಫೋನ್‌ ಕದ್ದಾಲಿಕೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ದೂರಿನಲ್ಲಿ ಮಾಡಿರುವ ಆರೋಪ ಏನು?: ವಕೀಲ ಸ್ವರೂಪ್‌ ಆನಂದ್‌ ಕೋರ್ಟ್‌ಗೆ ನೀಡಿರುವ ದೂರಿನಲ್ಲಿ, ಅ.12ರಂದು ಇನ್‌ಸ್ಪೆಕ್ಟರ್‌ ದಯಾನಂದ್‌ ತಮಗೆ ಕರೆ ಮಾಡಿ, ಪ್ರಕರಣ ಕುರಿತ ಮಾಹಿತಿಗಾಗಿ ಅ.21 ಮತ್ತು ಅ.25ರಂದು ತಮ್ಮ ಸಿಐಡಿ ಕಚೇರಿಯಲ್ಲಿ ಭೇಟಿಯಾಗಬೇಕು ಎಂದು ಸೂಚಿಸಿದ್ದರು. ಆದರೆ, ಇದಕ್ಕೆ ಮೌಖೀಕವಾಗಿ ಇನ್‌ಸ್ಪೆಕ್ಟರ್‌ಗೆ ಉತ್ತರ ನೀಡಲಾಗಿತ್ತು. ಆದರೂ, ತನ್ನ ಫೋನ್‌ ಕದ್ದಾಲಿಕೆ ಮಾಡಲಾಗಿದೆ. ಪ್ರಮುಖವಾಗಿ 2023ರ ಜುಲೈ ತಿಂಗಳ ವಾಟ್ಸ್‌ಆ್ಯಪ್‌ ಸಂಭಾಷಣೆ ಮಾಹಿತಿಯನ್ನು ಇನ್‌ಸ್ಪೆಕ್ಟರ್‌ ಪಡೆದುಕೊಂಡಿದ್ದಾರೆ. ಇದು ನನಗೆ ಆತಂಕ ಉಂಟು ಮಾಡಿದೆ. ಜತೆಗೆ ನನ್ನ ಕಕ್ಷಿದಾರನ ವಿರುದ್ಧವೇ ಸಾಕ್ಷಿ ಹೇಳುವಂತೆ ಇನ್‌ಸ್ಪೆಕ್ಟರ್‌ ಪರೋಕ್ಷವಾಗಿ ಒತ್ತಾಯಿಸುತ್ತಿದ್ದಾರೆ ಎಂದು ಸ್ವರೂಪ್‌ ಆನಂದ್‌ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಕೋರ್ಟ್‌ ನ.3ರಂದು ಎಸ್‌ಐಟಿ ಮುಖ್ಯಸ್ಥರು ಹಾಗೂ ತನಿಖಾಧಿಕಾರಿಗಳು ಖುದ್ದು ಹಾಜರಾಗಬೇಕು ಎಂದು ಸೂಚಿಸಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.