ಪಾಲಿಕೆ ಉಪ ಚುನಾವಣೆಗೂ ಮೈತ್ರಿ ಅಭ್ಯರ್ಥಿಗಳು ಕಣಕ್ಕೆ


Team Udayavani, May 7, 2019, 3:07 AM IST

bbmp2

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎರಡು ವಾರ್ಡ್‌ಗಳಿಗೆ ಮೇ 29ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಮೈತ್ರಿ ಅಭ್ಯರ್ಥಿಗಳು ಅಖಾಡಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಇಬ್ಬರು ಪಾಲಿಕೆ ಸದಸ್ಯರ ಅಕಾಲಿಕ ಮರಣದಿಂದಾಗಿ ಕಾವೇರಿಪುರ ಹಾಗೂ ಸಗಾಯಪುರ ವಾರ್ಡ್‌ಗಳ ಪಾಲಿಕೆ ಸದಸ್ಯ ಸ್ಥಾನಗಳು ತೆರವಾಗಿದ್ದು, ಮೇ 29ರಂದು ಎರಡೂ ವಾರ್ಡ್‌ಗಳಿಗೆ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಆ ಹಿನ್ನೆಲೆಯಲ್ಲಿ ಎರಡೂ ವಾರ್ಡ್‌ಗಳನ್ನು ಹಂಚಿಕೊಳ್ಳಲು ಕಾಂಗ್ರೆಸ್‌-ಜೆಡಿಎಸ್‌ ನಿರ್ಧರಿಸಿವೆ. ಅದರಂತೆ ಎರಡೂ ವಾರ್ಡ್‌ಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಎರಡೂ ಪಕ್ಷಗಳ ನಾಯಕರು ನಿರ್ಧರಿಸಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.

ಹೃದಯಾಘಾತದಿಂದ ಮೃತಪಟ್ಟಿದ್ದ ಕಾವೇರಿಪುರ ವಾರ್ಡ್‌ ಸದಸ್ಯೆ ರಮೀಳಾ, ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು. ಸಗಾಯಪುರದ ಪಾಲಿಕೆ ಸದಸ್ಯ ಏಳುಮಲೈ ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಸದಸ್ಯರಾಗಿದ್ದರು. ಹೀಗಾಗಿ ಕಾವೇರಿಪುರವನ್ನು ಜೆಡಿಎಸ್‌ ಹಾಗೂ ಸಗಾಯಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಇದರ ನಡುವೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯುವುದರಿಂದ ಮೈತ್ರಿ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಸಾಧ್ಯತೆಯಿದೆ.

ಅಭ್ಯರ್ಥಿಗಳ ಆಯ್ಕೆ ಕಸರತ್ತು: ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್‌ ಪಡೆಯಲು ಆಕಾಂಕ್ಷಿಗಳು ಪ್ರಮುಖ ನಾಯಕರ ಹಿಂದೆ ಬಿದ್ದಿದ್ದಾರೆ. ಅದರಂತೆ ಕಾವೇರಿಪುರದಲ್ಲಿ ಜೆಡಿಎಸ್‌ ಅಭ್ಯರ್ಥಿ ಆಯ್ಕೆಯ ಹೊಣೆಯನ್ನು ವರಿಷ್ಠರು ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌ ಅವರಿಗೆ ವಹಿಸಿದ್ದಾರೆ.

ಕಾವೇರಿಪುರ ವಾರ್ಡ್‌ ಒಬಿಸಿ-ಎ (ಮಹಿಳೆ) ಮೀಸಲಾಗಿದೆ. ಆ ಹಿನ್ನೆಲೆಯಲ್ಲಿ ರಮೀಳಾ ಅವರ ಸಂಬಂಧಿಕರು ಸೇರಿ ಸ್ಥಳೀಯ ಕಾರ್ಯಕರ್ತರಲ್ಲಿ ಕೆಲವರು ಟಿಕೆಟ್‌ ಪಡೆಯಲು ಕಸರತ್ತು ನಡೆಸಿದ್ದು, ಎರಡು ದಿನಗಳಲ್ಲಿ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಮಾಡಲು ಜೆಡಿಎಸ್‌ ಮುಂದಾಗಿದೆ.

ಇನ್ನು ಸಗಾಯಪುರ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು ಏಳುಮಲೈ ಅವರ ಸಹೋದರರಲ್ಲಿ ಒಬ್ಬರಿಗೆ ಟಿಕೆಟ್‌ ನೀಡುವ ಬಗ್ಗೆ ಕಾಂಗ್ರೆಸ್‌ ಮುಖಂಡರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದ್ದು, ಮಾಜಿ ಪಾಲಿಕೆ ಸದಸ್ಯೆ ಮಾರಿಮುತ್ತು ಸಹ ಟಿಕೆಟ್‌ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಪಕ್ಷ ನಾಯಕರು ಶೀಘ್ರದಲ್ಲಿಯೇ ಸಭೆ ನಡೆಸಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದ್ದಾರೆ ಎನ್ನಲಾಗಿದೆ.

ಆಡಳಿತ ಚುಕ್ಕಾಣಿ ಹಿಡಿಯುವ ಲೆಕ್ಕಾಚಾರ: ಬಿಬಿಎಂಪಿ 198 ಸದಸ್ಯರ ಪೈಕಿ ಬಿಜೆಪಿ 101, ಕಾಂಗ್ರೆಸ್‌ 75, ಜೆಡಿಎಸ್‌ 14 ಹಾಗೂ ಪಕ್ಷೇತರರು 6 ಸದಸ್ಯರಿದ್ದಾರೆ. ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುಣಾವಣೆಯಲ್ಲಿ ಬಿಜೆಪಿ ಎರಡೂ ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದರೆ, ಸಂಖ್ಯಾಬಲ 103ಕ್ಕೆ ಏರಲಿದೆ. ಅದೇ ರೀತಿ ಮೈತ್ರಿ ಪಕ್ಷದ ಬಲವೂ ಕಡಿಮೆಯಾಗಲಿದೆ. ಆಗ ಮೇಯರ್‌ ಸ್ಥಾನಕ್ಕೆ ಸಂಖ್ಯಾಬಲದ ಲೆಕ್ಕಚಾರ ಶುರುವಾಗಲಿದ್ದು, ಕೊನೆಯ ಸಾಲಿನ ಮೇಯರ್‌ ಸ್ಥಾನ ಪಡೆಯಲು ಅನುಕೂಲವಾಲಿದೆ.

ಪಕ್ಷದ ವರಿಷ್ಠರು ಕಾವೇರಿಪುರ ವಾರ್ಡ್‌ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ತಮಗೆ ನೀಡಿದ್ದಾರೆ. ಅದರಂತೆ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿದ ಬಳಿಕ ಸೂಕ್ತ ಅಭ್ಯರ್ಥಿಯನ್ನು ನೇಮಿಸಲಾಗುವುದು.
-ಆರ್‌.ಪ್ರಕಾಶ್‌, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.