ಮೈತ್ರಿ ಸರ್ಕಾರ ಪತನ; ಬಿಜೆಪಿ ಭವಿಷ್ಯ


Team Udayavani, May 26, 2019, 3:08 AM IST

bjp-logo

ಬೆಂಗಳೂರು: ಬಿಜೆಪಿ ಸಂಸದರು, ನಾಯಕರು, ಮಾಜಿ ಸಚಿವರು ಶನಿವಾರವೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಡಾಲರ್ ಕಾಲೋನಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು.

ಸಂಸದರಾದ ಬಿ.ವೈ.ರಾಘವೇಂದ್ರ, ಶೋಭಾ ಕರಂದ್ಲಾಜೆ, ಜಿ.ಎಂ.ಸಿದ್ದೇಶ್ವರ್‌, ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಗೋವಿಂದ ಕಾರಜೋಳ, ಎಂ.ಪಿ.ರೇಣುಕಾಚಾರ್ಯ, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಇತರರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕೆಲ ಸಂಸದರು ಸಚಿವ ಸ್ಥಾನದ ಆಕಾಂಕ್ಷೆಯನ್ನು ಹಂಚಿಕೊಂಡರೆ, ಇನ್ನೂ ಕೆಲವರು ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದು ಸದ್ಯದಲ್ಲೇ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಎಂ.ಸಿದ್ದೇಶ್ವರ್‌, “ನಾನು ಕೇಂದ್ರ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಾನು ಪಕ್ಷದ ಒಳಿತಿಗೆ ದುಡಿಯುವ ವ್ಯಕ್ತಿ. ಸಚಿವ ಸ್ಥಾನ ಬೇಕು ಎಂದು ಕೇಳುವುದಿಲ್ಲ. ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ. ರಾಜ್ಯಕ್ಕೆ ಎಷ್ಟು ಕೇಂದ್ರ ಸಚಿವ ಸ್ಥಾನ ದಕ್ಕಲಿದೆ ಎಂಬುದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ. 25 ಸಂಸದರಿಗೂ ಸಚಿವ ಸ್ಥಾನ ಸಿಕ್ಕರೆ ಸಂತೋಷ’ ಎಂದರು.

ರೇಣುಕಾಚಾರ್ಯ ಮಾತನಾಡಿ, “ನಾವು “ಆಪರೇಷನ್‌ ಕಮಲ’ ನಡೆಸುವುದಿಲ್ಲ. ಆದರೆ, ನೂರಕ್ಕೆ ನೂರು ಮೈತ್ರಿ ಸರ್ಕಾರ ಪತನವಾಗಲಿದೆ. ಎಚ್‌.ಡಿ.ರೇವಣ್ಣನವರ ನಿಂಬೆಹಣ್ಣು ಕೊಳೆತು ಹೋಗಿದೆ. ರೇವಣ್ಣನವರ ಆ ನಿಂಬೆಹಣ್ಣಿಗೆ ದೇವೇಗೌಡರು ಬಲಿಯಾಗಿ ಸೋತಿದ್ದಾರೆ. ಸಿದ್ದರಾಮಯ್ಯಗೆ ಸ್ವಾಭಿಮಾನವಿದ್ದರೆ ಜೆಡಿಎಸ್‌ಗೆ ನೀಡಿರುವ ಬೆಂಬಲ ಹಿಂಪಡೆಯಲಿ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದರು.

“ಯಡಿಯೂರಪ್ಪ ಅವರು ದೇವಭಕ್ತರು. ರಾಜ್ಯಕ್ಕೆ ಒಳಿತಾಗಲಿ ಎಂಬ ಉದ್ದೇಶದಿಂದ ಹೋಮ, ಹವನ ಮಾಡಿಸಿದ್ದರು. ಬಿಜೆಪಿಗೆ ರಾಜ್ಯದಲ್ಲಿ 25 ಸ್ಥಾನ ದೊರಕಿದೆ. ಆದರೆ, ಜೆಡಿಎಸ್‌ನವರು, ದೇವೇಗೌಡರ ಕುಟುಂಬದವರು ಜ್ಯೋತಿಷಿಗಳು, ಮಾಟ ಮಂತ್ರದ ಬೆನ್ನು ಹತ್ತಿದ್ದರಿಂದ ಹೀಗಾಯಿತು. ರೇವಣ್ಣ, ಭವಾನಿ ರೇವಣ್ಣ ಅವರು ನಿಂಬೆ ಹಣ್ಣು ಮಂತ್ರ ಮಾಡಿಸಿ ದೇವೇಗೌಡರನ್ನೇ ಬಲಿ ತೆಗೆದುಕೊಂಡರು. ಕುಮಾರಸ್ವಾಮಿಯವರಿಗೆ ನೈತಿಕತೆ ಇದ್ದರೆ ಜನಾದೇಶ ಗೌರವಿಸಿ ರಾಜೀನಾಮೆ ನೀಡಲಿ’ ಎಂದು ಹೇಳಿದರು.

ಮರ್ಯಾದೆ ಇದ್ದರೆ ರಾಜೀನಾಮೆ ನೀಡಲಿ: ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಮಾತನಾಡಿ, ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ, ಗೌರವವಿದ್ದರೆ ರಾಜೀನಾಮೆ ನೀಡಲಿ. ಕುಮಾರಸ್ವಾಮಿಯವರಿಗೆ ಕಿಂಚಿತ್ತಾದರೂ ಮರ್ಯಾದೆ ಇದ್ದರೆ ರಾಜೀನಾಮೆ ನೀಡಬೇಕು. ಈ ಹಿಂದೆ ರಾಮಕೃಷ್ಣ ಹೆಗಡೆ ಅವರು ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ಹೇಳಿದರು.

ರಾಜ್ಯ ವಿಧಾನಸಭೆಗೆ ಈ ಕ್ಷಣ ಚುನಾವಣೆ ನಡೆದರೆ ಬಿಜೆಪಿ 177 ಸ್ಥಾನ ಗೆಲ್ಲುತ್ತದೆ. ಲೋಕಸಭೆ ಚುನಾವಣೆಯಲ್ಲಿ 177 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್‌ ಬಂದಿದೆ. ಕಾಂಗ್ರೆಸ್‌- ಜೆಡಿಎಸ್‌ ಮುಳುಗಿದ ಹಡಗು. ವರ್ಷದ ಹಿಂದೆ ಮೈತ್ರಿ ಹಡಗಿಗೆ ರಮೇಶ್‌ ಜಾರಕಿಹೊಳಿಯಿಂದ ತೂತು ಬಿತ್ತು. ಇದೀಗ ಮೈತ್ರಿ ಹಡಗು ಪೂರ್ತಿ ಮುಳುಗಿದೆ. ಈಗ ಕಾಂಗ್ರೆಸ್‌ ಒಣಗಿದ ಮರ. ಅಲ್ಲಿ ನೆರಳು ಅರಸಿ ಯಾರೂ ಹೋಗುವುದಿಲ್ಲ. ಕಾಂಗ್ರೆಸ್‌ ಶಾಸಕರು ಒಣಗಿದ ಎಲೆಗಳಂತೆ ಉದುರುತ್ತಿದ್ದಾರೆ ಎಂದರು.

ರಾಹುಲ್‌ ಗಾಂಧಿ ಬಫ‌ೂನ್‌ನಂತೆ ದೇಶವೆಲ್ಲಾ ಸುತ್ತಿದರೂ ಸೋಲಾಯಿತು. ಚುನಾವಣೆ ಸಮಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿಯವರು ಮೋದಿಯನ್ನು ಟೀಕಿಸಿದರು. ಕಳ್ಳರು, ಸುಳ್ಳರು, ಜೈಲಿಗೆ ಹೋಗಿ ಬಂದವರೆಂದು ತೆಗಳಿದರು. ಇನ್ನಾದರೂ ಯಡಿಯೂರಪ್ಪಗೆ ಗೌರವ ನೀಡಿ ಮಾತನಾಡಲಿ. ಮೈತ್ರಿ ನಾಯಕರ ಪುಟಗೋಸಿಯನ್ನು ರಾಜ್ಯದ ಜನ ಹರಿದು ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.

ಮೋದಿಯವರು ಮತ್ತೂಮ್ಮೆ ಪ್ರಧಾನಿಯಾದರೆ ರಾಜೀನಾಮೆ ನೀಡುವುದಾಗಿ ಸಚಿವ ರೇವಣ್ಣ ಈ ಹಿಂದೆ ನೀಡಿದ್ದ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅಶೋಕ್‌, ನಿಂಬೆಹಣ್ಣು ಇಟ್ಟು ಸಮಯ ನೋಡಿ ರಾಜೀನಾಮೆ ನೀಡಲಿ. ದೇವೇಗೌಡರು ಸೋತರೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಸಚಿವ ಗುಬ್ಬಿ ಶ್ರೀನಿವಾಸ್‌, ತಮ್ಮ ಮಾತಿನಂತೆ ನಡೆದುಕೊಳ್ಳುವರೆ? ಸಿದ್ದರಾಮಯ್ಯ ಅವರು ಯಾರಿಗಾದರೂ, ಏನಾದರೊಂದು ಹೇಳಿದರೆ ಅದರ ವಿರುದ್ಧ ಫ‌ಲಿತಾಂಶ ಬರಲಿದೆ. ಅದರಂತೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲ್ಲ ಎಂದು ಜಪ ಮಾಡುತ್ತಿರಲಿ ಎಂದು ಕುಟುಕಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.