ನಗರ ಆಯುಕ್ತರಾಗಿ ಅಲೋಕ್ ಅಧಿಕಾರ ಸ್ವೀಕಾರ
Team Udayavani, Jun 18, 2019, 3:04 AM IST
ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಆಧಿಕಾರಿ ಅಲೋಕ್ಕುಮಾರ್ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ನಿರ್ಗಮಿತ ಆಯುಕ್ತ ಸುನೀಲ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಅಲೋಕ್ಕುಮಾರ್, ಬೆಂಗಳೂರಿನಲ್ಲಿನ ಭೂ ಕಬಳಿಕೆ, ಅಪರಾಧ ಕೃತ್ಯಗಳನ್ನು ಎಸಗುವವರು, ಕಾನೂನು ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಬಿಹಾರ ಮೂಲದ 1994ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ಕುಮಾರ್, ಈ ಹಿಂದೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ, ಕಾನೂನು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಆಯುಕ್ತ, ಸಿಸಿಬಿ ಜಂಟಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
ನಕ್ಸಲ್ ನಿಗ್ರಹದ (ಎಎನ್ಎಫ್) ಮುಖ್ಯಸ್ಥ ಹಾಗೂ ಭಾರೀ ಸದ್ದು ಮಾಡಿದ್ದ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ನಡೆಸಿದ ಹೆಗ್ಗಳಿಕೆಯನ್ನು ಅಲೋಕ್ಕುಮಾರ್ ಹೊಂದಿದ್ದಾರೆ.
ಕೆಎಸ್ಆರ್ಪಿ ಎಡಿಜಿಪಿ ಭಾಸ್ಕರ್ ರಾವ್, ಎಡಿಜಿಪಿಗಳಾದ ಪ್ರತಾಪ್ ರೆಡ್ಡಿ, ಸುನೀಲ್ ಅಗರ್ವಾಲ್, ಆರ್.ಪಿ ಶರ್ಮಾ ಸೇರಿದಂತೆ ಹಲವು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರು ನಗರ ಪೊಲೀಸ್ ಆಯುಕ್ತರ ಹುದ್ದೆಯ ರೇಸ್ನಲ್ಲಿದ್ದರು.
ಆದರೆ, ಐಜಿಪಿಯಿಂದ ಎಡಿಜಿಪಿ ಹುದ್ದೆಗೆ ಮುಂಬಡ್ತಿ ಪಡೆದ ತಕ್ಷಣವೇ ರಾಜಧಾನಿಯ ಪೊಲೀಸ್ ಮುಖ್ಯಸ್ಥರಾಗಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಅಲೋಕ್ಕುಮಾರ್ ಯಶಸ್ವಿಯಾಗಿದ್ದಾರೆ.
ಎರಡು ವರ್ಷ ಸೇವೆ ಮಾಡಿದ್ದು ತೃಪ್ತಿ ಇದೆ. ಹೆಮ್ಮೆ ಇದೆ. ಅಪರಾಧ ಪ್ರಕರಣಗಳನ್ನು. ಈ ಕಾನೂನು ಸುವ್ಯವಸ್ಥೆ ಕಾಪಾಡಿದ್ದು ಹೆಮ್ಮೆ ಇದೆ. ಧನ್ಯವಾದ ಹೊಸ ವರ್ಷಾಚರಣೆ ಬೆಂಗಳೂರು ಕಾನೂನು ಸುವ್ಯವಸ್ಥೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು