ಆಳ್ವಾಸ್ ಚಿತ್ರಸಿರಿ, ವ್ಯಂಗ್ಯಚಿತ್ರಸಿರಿ ಪ್ರಶಸ್ತಿ ಪ್ರದಾನ
Team Udayavani, Nov 27, 2017, 11:56 AM IST
ಮೂಡಬಿದಿರೆ: ಆಳ್ವಾಸ್ ನುಡಿಸಿರಿ ಸಮ್ಮೇಳನದಂಗವಾಗಿ ಏರ್ಪಡಿಸಲಾದ ರಾಜ್ಯಮಟ್ಟದ ಆಳ್ವಾಸ್ ಚಿತ್ರಸಿರಿ,
ವ್ಯಂಗ್ಯಚಿತ್ರ ಸಿರಿ ಶಿಬಿರ ಹಾಗೂ ಛಾಯಾಚಿತ್ರಸಿರಿ ಸ್ಪರ್ಧೆಯ ವಿಜೇತರಿಗೆ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ
ಪ್ರದಾನ ಮಾಡಲಾಯಿತು.
ಹಿರಿಯ ಛಾಯಾ ಚಿತ್ರಗ್ರಾಹಕ ಡಾ.ಓ.ಪಿ. ಶರ್ಮ ಅವರಿಗೆ “ಆಳ್ವಾಸ್ ಛಾಯಾಚಿತ್ರಸಿರಿ” ಪ್ರಶಸ್ತಿ, ಉಡುಪಿಯ
ರಮೇಶ್ ರಾವ್ ಅವರಿಗೆ “ಆಳ್ವಾಸ್ ಚಿತ್ರಸಿರಿ’ ಪ್ರಶಸ್ತಿ ಹಾಗೂ ಮಂಗಳೂರು ಮೂಲದ ವ್ಯಂಗ್ಯ ಚಿತ್ರಕಲಾವಿದ
ಪ್ರಕಾಶ್ ಶೆಟ್ಟಿ ಬೆಂಗಳೂರು ಅವರಿಗೆ “ವ್ಯಂಗ್ಯಚಿತ್ರಸಿರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭಾನುವಾರ
ವಿದ್ಯಾಗಿರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಪ್ರಶಸ್ತಿ ಪ್ರದಾನ ನೆರವೇರಿಸಿದರು. ಪ್ರಶಸ್ತಿ ತಲಾ 25,000 ರೂ.ನಗದು, ಸನ್ಮಾನ ಫಲಕ ಒಳಗೊಂಡಿದೆ. ಮೂಡಬಿದಿರೆ ಜೈನಮಠದ ಶ್ರೀ ಚಾರು ಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನವಿತ್ತರು. ಈ ವೇಳೆ ಮಾತನಾಡಿದ ಮೋಹನ ಆಳ್ವ, ಮುಂದಿನ ವರ್ಷ ನುಡಿಸಿರಿಯ ಒಂದು ತಿಂಗಳ ಮೊದಲು ಶಿಲಾಶಿಲ್ಪ, ಕಾಷ್ಠ ಶಿಲ್ಪ ಶಿಬಿರ ಏರ್ಪಡಿಸಲಾಗುವುದು.
ಆಳ್ವಾಸ್ ಸಂಸ್ಥೆಯ ವತಿಯಿಂದ ಇದೇ ಮೊದಲ ಬಾರಿಗೆ ರಾಜ್ಯಮಟ್ಟದಲ್ಲಿ ಆಯೋಜಿಸಲಾಗಿರುವ ವ್ಯಂಗ್ಯ ಚಿತ್ರಸಿರಿಯನ್ನು ದಕ್ಷಿಣ ವಲಯ, ರಾಷ್ಟ್ರಮಟ್ಟದಲ್ಲಿ ಆಯೋಜಿಸುವ ಚಿಂತನೆ ನಡೆಯುತ್ತಿದೆ ಎಂದು ಹೇಳಿದರು.
ಛಾಯಾಚಿತ್ರಸಿರಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ, ಶಿಬಿರದಲ್ಲಿ ಪಾಲ್ಗೊಂಡ ವ್ಯಂಗ್ಯ ಚಿತ್ರಕಾರರು ಹಾಗೂ ಚಿತ್ರ ಕಲಾವಿದರಿಗೆ ಪ್ರಮಾಣ ಪತ್ರ ತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ