ಕಾಡ್ಗಿಚ್ಚು ತಡೆಗೆ ವಿಶೇಷ ಕಾರ್ಯಪಡೆ ರಚನೆಗೆ ಅಸ್ತು


Team Udayavani, Mar 28, 2017, 3:45 AM IST

170327kpn79.jpg

ವಿಧಾನಪರಿಷತ್ತು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಪದೇ ಪದೇ ಹೆಚ್ಚಾಗುತ್ತಿರುವ ಕಾಡ್ಗಿಚ್ಚು ಪ್ರಕರಣಗಳಿಗೆ ಕಡಿವಾಣ ಹಾಕಲು ಅಗ್ನಿಶಾಮಕ ಇಲಾಖೆಯನ್ನೊಳಗೊಂಡಂತೆ ಒಂದು ವಿಶೇಷ ಕಾರ್ಯಪಡೆ ರಚಿಸಲಾಗುವುದು ಕೃಷಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಕಾಡ್ಗಿಚ್ಚು ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆದ ಚರ್ಚೆಗೆ ಅರಣ್ಯ ಸಚಿವರ ಪರವಾಗಿ ಉತ್ತರ ನೀಡಿದ ಕೃಷ್ಣಭೈರೇಗೌಡ, ಕಾಡ್ಗಿಚ್ಚು ಪ್ರಕರಣಗಳು ನಡೆಯದಂತೆ, ಒಂದೊಮ್ಮೆ ಆವಘಡಗಳು ನಡೆದು ಹೋದಾಗ ಅವುಗಳನ್ನು ನಿರ್ವಹಿಸಲು ವಿಶೇಷ ಕಾರ್ಯಪಡೆ ರಚಿಸಲಾಗುವುದು ಎಂದು ಹೇಳಿದರು.ರಾಜ್ಯದಲ್ಲಿ ಒಟ್ಟು 43 ಲಕ್ಷ ಹೆಕ್ಟೇರ್‌ ಅರಣ್ಯ ಪ್ರದೇಶ ಇದ್ದು, ಅದರಲ್ಲಿ ಈ ವರ್ಷ ಕೇವಲ 6 ಸಾವಿರ ಹೆಕ್ಟೇರ್‌ ಅರಣ್ಯ ಕಾಡ್ಗಿಚ್ಚಿಗೆ ನಾಶವಾಗಿದೆ. ಈ ಪೈಕಿ ಬಂಡೀಪುರ ಒಂದರಲ್ಲೇ 4 ಸಾವಿರಕ್ಕೂ ಹೆಚ್ಚು ಪ್ರದೇಶ ಬೆಂಕಿಯಿಂದ ನಾಶ ಆಗಿದೆ. 

ಹಾಗಾಗಿ ಕಾಡ್ಗಿಚ್ಚಿನ ಪರಿಣಾಮವಾಗಿ ಇಡೀ ಕಾಡು ನಾಶ ಆಗಿದೆ ಎಂಬ ಅಭಿಪ್ರಾಯ ಸರಿಯಲ್ಲ. ಹಾಗಂತ ನಾನು ಕಾಡ್ಗಿಚ್ಚ ಪ್ರಕರಣಗಳನ್ನು ಸಮರ್ಥಿಸಿಕೊಳ್ಳುತ್ತಿಲ್ಲ. ಮೂರು ವರ್ಷಗಳಿಂದ ಸತತ ಬರ ಹಾಗೂ ತೀವ್ರ ಮಳೆ ಕೊರತೆ ಕಾಡ್ಗಿಚ್ಚಿಗೆ ಪ್ರಮುಖ ಕಾರಣ. ಕಿಡಿಗೇಡಿಗಳಿಂದಲೂ ಕೃತ್ಯ ನಡೆದಿದೆ. 15 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದಾಗ್ಯೂ ಸರ್ಕಾರ ಇದನ್ನು ಸಾಕಷ್ಟು ಗಂಭೀರವಾಗಿ ಪರಿಗಣಿಸಿದೆ. ಸಾಕಷ್ಟು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೇಸಿಗೆಯ ಮುಂದಿನ ಎರಡು ತಿಂಗಳ ನಮ್ಮ ಪಾಲಿಗೆ ಸವಾಲಿನ ತಿಂಗಳುಗಳಾಗಿದ್ದು ಈ ಅವಧಿಯಲ್ಲಿ ಮೈಯೆಲ್ಲಾ ಕಣ್ಣಾಗಿಸಿಕೊಂಡು ಕೆಲಸ ಮಾಡುತ್ತೇವೆ ಎಂದು ಸಚಿವರು ಭರವಸೆ ನೀಡಿದರು.

ಉದಯವಾಣಿ ವರದಿ ಪ್ರಸ್ತಾಪ.
ಈ ವೇಳೆ ಮಾತನಾಡಿದ ಬಿಜೆಪಿ ಎಸ್‌.ವಿ. ಸಂಕನೂರು, ಕಳೆದ 20 ವರ್ಷಗಳಲ್ಲೇ ಈ ವರ್ಷ ಅತಿ ಹೆಚ್ಚು ಕಾಡ್ಗಿಚ್ಚು ಘಟನೆಗಳು ನಡೆದಿವೆ. ಬಂಡಿಪುರದಲ್ಲಿ ಈ ವರ್ಷ 19 ಬೆಂಕಿ ಪ್ರಕರಣಗಳು ನಡೆದಿದ್ದರೆ, ಕಪ್ಪತ್ತಗುಡ್ಡದಲ್ಲಿ 20 ಬಾರಿ ಬೆಂಕಿ ಬಿದ್ದಿದೆ. ಅದೇ ರೀತಿ ಕಾಡ್ಗಿಚ್ಚು ಬಗ್ಗೆ ಎಚ್ಚರಿಕೆಯ ಸಂದೇಶ ರವಾನಿಸುವ ಬಗ್ಗೆ ನಾಸಾ ಸಂಸ್ಥೆ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ಕುರಿತು “ಉದಯವಾಣಿ’ ಪತ್ರಿಕೆಯಲ್ಲಿ ಪ್ರಕಟವಾದ ವರದಿಗಳನ್ನು ಉಲ್ಲೇಖೀಸಿ, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.

ವಿಷಯ ಪ್ರಸ್ತಾಪಿಸಿ ಮೊದಲಿಗೆ ಕಾಂಗ್ರೆಸ್‌ನ ಡಾ. ಜಯಮಾಲಾ ರಾಮಚಂದ್ರ ಮಾತನಾಡಿದರು. ಬಳಿಕ ಪ್ರತಾಪಚಂದ್ರ ಶೆಟ್ಟಿ, ಶರಣಪ್ಪ ಮಟ್ಟೂರು, ಪ್ರಸನ್ನಕುಮಾರ್‌, ಕೆ.ಸಿ, ಕೊಂಡಯ್ಯ, ಜೆಡಿಎಸ್‌ನ ಶ್ರೀಕಂಠೇಗೌಡ, ಬಿಜೆಪಿಯ ಕ್ಯಾ. ಗಣೇಶ್‌ ಕಾರ್ಣಿಕ್‌ ಈ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.