ತಿದ್ದುಪಡಿ, ವಿಳಾಸ ಬದಲಾವಣೆಗೆ ಪ್ರತ್ಯೇಕ ಅರ್ಜಿ


Team Udayavani, Apr 2, 2018, 6:55 AM IST

Ban02041806Medn.jpg

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ.14ರವರೆಗೆ ಅವಕಾಶ ಇರುವಂತೆ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು, ತಿದ್ದುಪಡಿ ಮಾಡಲು, ಹೆಸರು ಮತ್ತು ವಿಳಾಸ ಬದಲಾವಣೆಗೆ ಇನ್ನೂ 13 ದಿನ ಸಮಯವಿದೆ. ಆದರೆ, ಮತದಾರರು ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯವೇನೆಂದರೆ,ಇದಕ್ಕಾಗಿ ಕೇವಲ ಫಾರಂ ಭರ್ತಿ ಮಾಡಿಕೊಟ್ಟು ನಮ್ಮ ಜವಾಬ್ದಾರಿ ಮಗಿಯಿತು ಎಂದು ತಿಳಿದು ಕೈಕಟ್ಟಿ ಕುಳಿತುಕೊಳ್ಳುವಂತಿಲ್ಲ. ತಿದ್ದುಪಡಿ, ವಿಳಾಸ ಬದಲಾವಣೆಗೆ ಅದರದೇ ಆದ ಪ್ರತ್ಯೇಕವಾದ ಅರ್ಜಿ ನಮೂನೆ ಭರ್ತಿ ಮಾಡಬೇಕು.

ಬೆಂಗಳೂರು: ಬರೀ ಅರ್ಜಿ ಸಲ್ಲಿಸುವುದರಿಂದ ಪರಿಹಾರ ಸಿಗುವುದಿಲ್ಲ. ತಿದ್ದುಪಡಿ, ವಿಳಾಸ ಬದಲಾವಣೆಗೆ ಅದರದೇ ಆದ ಪ್ರತ್ಯೇಕ ಅರ್ಜಿ ನಮೂನೆಗಳಿವೆ. ಆ ಅರ್ಜಿ ನಮೂನೆಗಳ ಸಲ್ಲಿಕೆಗೆ ಅದರದೇ ಆದ ಪ್ರಕ್ರಿಯೆ ಇರುತ್ತದೆ. ಜೊತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಇಲ್ಲದಿದ್ದರೆ, ನಾವು ಅರ್ಜಿ ತುಂಬಿದ್ದೇವೆ ಎಂದು ಈಗ ಸುಮ್ಮನೆ ಕುಳಿತುಕೊಂಡರೆ, ಮತದಾನದ ದಿನ ಸಮಸ್ಯೆ ಎದುರಿಸುವುದು ಅಥವಾ ಮತದಾನದಿಂದ ವಂಚಿತರಾಗುವುದು ನೀವೆ. ಈ ಕೊನೆ ಘಳಿಗೆಯಲ್ಲಿ ಯಾವ ಅಧಿಕಾರಿಯೂ ನಿಮ್ಮ ನೆರವಿಗೆ ಬರಲು ಸಾಧ್ಯವಿಲ್ಲ.

ಮುಖ್ಯವಾಗಿ ವಿಳಾಸ ಬದಲಾವಣೆ ವೇಳೆ ಅರ್ಜಿ ನಮೂನೆ- 7ರ ಜೊತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದೇ ಹೋದರೆ ವಿಳಾಸ ಬದಲಾವಣೆ ಆಗುವುದಿಲ್ಲ. ಮತದಾರನು ಬೇರೆ ಮತಕ್ಷೇತ್ರಕ್ಕೆ ಸ್ಥಳಾಂತರ ಅಥವಾ ವರ್ಗಾವಣೆ ಆಗಿದ್ದರೆ,  ಆಗ ನೀವು ಅರ್ಜಿ ನಮೂನೆ-7 ಬಳಸಬೇಕು. ಬಳಿಕ ತಾವು ಈ ಹಿಂದೆ ವಾಸವಾಗಿದ್ದ ಕ್ಷೇತ್ರದ ಸಂಬಂಧಪಟ್ಟ ಚುನಾವಣಾ ಕಚೇರಿ ಅಥವಾ ಚುನಾವಣಾಧಿಕಾರಿಗಳಿಂದ ಸ್ವೀಕೃತಿ ಪತ್ರ ಪಡೆದು ಅಗತ್ಯ ದಾಖಲೆಗಳೊಂದಿಗೆ ನೀವು ವರ್ಗಾವಣೆಗೊಂಡಿರುವ ಮತಕ್ಷೇತ್ರದ ಸಂಬಂಧಪಟ್ಟ ಚುನಾವಣಾ ಕಚೇರಿ ಅಥವಾ ಚುನಾವಣಾಧಿಕಾರಿಗಳಿಗೆ ಫಾರಂ ಸಂಖ್ಯೆ 9 ಭರ್ತಿ ಮಾಡಿಕೊಡಬೇಕು. ಆಗ ಹಳೆಯ ಕ್ಷೇತ್ರದ ಪಟ್ಟಿಯಲ್ಲಿ ನಿಮ್ಮ ಹೆಸರು ಮತ್ತು ವಿಳಾಸ ತೆಗೆದು ಹಾಕಿ, ಹೊಸ ಕ್ಷೇತ್ರದ ಮತದಾರ ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಮರಣ ಹೊಂದಿದ್ದರೆ ಅಥವಾ ಹೆಸರು ಮತ್ತು ವಿಳಾಸ ತಪ್ಪು ನಮೂದು ಆಗಿದ್ದರೂ ಫಾರಂ 7 ಬಳಸಬೇಕು.

ನಿಮ್ಮ ಮನೆ ಬೇರೆ ಮತ ಕ್ಷೇತ್ರಕ್ಕೆ ಬದಲಾಯಿಸಿದರೆ, ಆಗ ಮತದಾರರ ಪಟ್ಟಿಯಲ್ಲಿ ನಿಮ್ಮ ವಿವರ ಆ ಪ್ರದೇಶಕ್ಕೆ ವರ್ಗಾಯಿಸಲು ಅರ್ಜಿ ನಮೂನೆ 9  ಬಳಸಬೇಕು. ಇದರ ಜೊತೆಗೆ ವಿಳಾಸ ಪುರಾವೆಗೆ ಅರ್ಜಿದಾರ ಬ್ಯಾಂಕ್‌, ಅಂಚೆ ಕಚೇರಿಯ ಪ್ರಸ್ತುತ ಪಾಸ್‌ ಬುಕ್‌, ಪಡಿತರ ಚೀಟಿ ಅಥವಾ ಡ್ರೈವಿಂಗ್‌ ಲೈಸೆನ್ಸ್‌, ಆದಾಯ ಪ್ರಮಾಣ ಪತ್ರ ಅಥವಾ ಅರ್ಜಿದಾರ ಅಥವಾ ಅವರ ಪೋಷಕರ ಹೆಸರಲ್ಲಿರುವ ಆ ವಿಳಾಸದ ಇತ್ತೀಚಿನ ನೀರು, ದೂರವಾಣಿ, ವಿದ್ಯುತ್ಛಕ್ತಿ, ಗ್ಯಾಸ್‌ ಸಂಪರ್ಕದ ಬಿಲ್‌ ಸಲ್ಲಿಸಬೇಕು. ಮತದಾರರ ಪಟ್ಟಿ ಅಥವಾ ಮತದಾರ ಗುರುತಿನ ಚೀಟಿಯಲ್ಲಿ ತಪ್ಪು ಆಗಿದ್ದರೆ, ಅದನ್ನು ಸರಿಪಡಿಸಲಿಕ್ಕೆ ಫಾರಂ 8 ಬಸಳಬೇಕು.ಒಂದೇ ಕ್ಷೇತ್ರದಲ್ಲಿ ಮನೆ ಬದಲಾಯಿಸಿದ್ದರೆ ಸಂಬಂಧಪಟ್ಟ ಮತಗಟ್ಟೆಯಲ್ಲಿ ಹೆಸರು ಸೇರಿಸಲು ಅರ್ಜಿ ಮಮೂನೆ 8ಎ ಸಲ್ಲಿಸಬೇಕು.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.