ಹಸಿವು ಮುಕ್ತ ಸಮಾಜದ ಸಂಕಲ್ಪ; ಇಂದಿರಾ ಕ್ಯಾಂಟೀನ್ ಗೆ ಚಾಲನೆ


Team Udayavani, Aug 17, 2017, 3:52 PM IST

indira-canteen.jpg

ಬೆಂಗಳೂರು: ದೇಶದ ಪ್ರತಿಯೊಬ್ಬರಿಗೂ “ರೋಟಿ, ಕಪಡೆ, ಮಕಾನ್‌’ ದೊರೆಯಬೇಕೆಂಬುದು ಇಂದಿರಾ ಗಾಂಧಿಯವರ
ಆಶಯವಾಗಿತ್ತು. ಅದು ಕಾಂಗ್ರೆಸ್‌ ಸರ್ಕಾರವಿರುವ ಕರ್ನಾಟಕದಲ್ಲಿ ಸಾಕಾರಗೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಹರ್ಷ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವತಿಯಿಂದ ಬುಧವಾರ ಜಯನಗರ ವಾರ್ಡ್‌ನಲ್ಲಿ ಆಯೋಜಿಸಿದ್ದ ಇಂದಿರಾ ಕ್ಯಾಂಟೀನ್‌ಗೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ “ಪ್ರತಿಯೊಬ್ಬರಿಗೂ ಊಟ, ಬಟ್ಟೆ ಮತ್ತು ವಸತಿ ಕಲ್ಪಿಸುವ ಕೆಲಸಗಳನ್ನು ಕಾಂಗ್ರೆಸ್‌ ಮಾಡುತ್ತಿದೆ. ಏನನ್ನಾದರೂ ಸಾಧಿಸ ಬೇಕೆಂಬ ಛಲದಿಂದ ಬೆಂಗಳೂರಿಗೆ ಬರುವ ಕೆಲವರಿಗೆ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ಅಂತಹವರಿಗೆ ಕಡಿಮೆ ದರದಲ್ಲಿ ತಿಂಡಿ-ಊಟ ನೀಡುವ ಉದ್ದೇಶದಿಂದ ಯೋಜನೆ ಜಾರಿಗೆ ತರಲಾಗಿದೆ,’ ಎಂದು ತಿಳಿಸಿದರು.

ನಗರದಲ್ಲಿನ ಬಡವರು ಹಾಗೂ ಬಲಹೀನರು ಹಸಿವಿನಿಂದ ನರಳುವ ಸ್ಥಿತಿ ದೂರವಾಗಲಿದೆ. ಇಂದಿರಾ ಕ್ಯಾಂಟೀನ್‌ನಲ್ಲಿ
ಯಾವುದೇ ದುಬಾರಿ ರೆಸ್ಟೋರೆಂಟ್‌ಗೆ ಕಡಿಮೆಯಿಲ್ಲದ ಗುಣಮಟ್ಟದ ಆಹಾರ 5 ಮತ್ತು 10ರೂ. ಗಳಿಗೆ ಸಿಗುತ್ತಿರುವುದು ಸಂತಸದ ಸಂಗತಿ. ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಈ ಯೋಜನೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಸೂಚಿಸಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, “ಎರಡು ಹೊತ್ತಿನ ಊಟ ಮಾಡಲಾಗದವರು ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ 5 ವರ್ಷದೊಳಗಿನ ಶೇ.28ರಷ್ಟು ಮಕ್ಕಳು ನಿಗದಿಗಿಂತ ಕಡಿಮೆ ತೂಕವಿರುವ ಅಂಶ ಬೆಳಕಿಗೆ ಬಂದಿದೆ. ಉಳಿದಂತೆ ಶೇ.13ರಷ್ಟು ಮಹಿಳೆಯರು ಹಾಗೂ ಶೇ.10ರಷ್ಟು ಪುರುಷರು ಅಗತ್ಯಕ್ಕಿಂತ ಕಡಿಮೆ ತೂಕವಿದ್ದಾರೆ. ಹೀಗಾಗಿ ಜನರ ಅನುಕೂಲಕ್ಕಾಗಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

70ರ ದಶಕದಲ್ಲಿ ಇಂದಿರಾ ಹಠಾವೋ ಎಂದು ವಿರೋಧ ಪಕ್ಷಗಳು ಕೂಗಿದ್ದವು. ಆಗ “ಗರೀಬಿ ಹಠಾವೋ’ ಮೂಲಕ ಇಂದಿರಾ ಅವರು ಉತ್ತರ ನೀಡಿದ್ದರು. ಅವರ ನೂರನೇ ಜನ್ಮಶತಮಾನೋತ್ಸವ ವರ್ಷ ಇದಾಗಿದ್ದು, ಅವರು ಬಡವರ ಬಗೆಗೆ ಹೊಂದಿದ್ದ ಕಾಳಜಿಯ ಪ್ರತೀಕವಾಗಿ ಕ್ಯಾಂಟೀನ್‌ಗಳಿಗೆ ಅವರ ಹೆಸರಿಡಲಾಗಿದೆ ಎಂದು ತಿಳಿಸಿದರು. 

ಮೊದಲ ದಿನ ಕ್ಯಾಂಟೀನ್‌ ಭೋಜನ ಸವಿದವರ ಸಂಖ್ಯೆ 60 ಸಾವಿರ! 
ಬೆಂಗಳೂರು :ಬುಧವಾರ ಉದ್ಘಾಟನೆಗೊಂಡ ಇಂದಿರಾ ಕ್ಯಾಂಟೀನ್‌ನಲ್ಲಿ ಮೊದಲ ದಿನ 60 ಸಾವಿರಕ್ಕೂ ಹೆಚ್ಚು ಮಂದಿ ಉಚಿತವಾಗಿ ಭೋಜನ ಸವಿದಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಉದ್ಘಾಟಿಸಿದ ಕನಕನಪಾಳ್ಯ ಇಂದಿರಾ ಕ್ಯಾಂಟೀನ್‌ನಲ್ಲಿ ಮಧ್ಯಾಹ್ನ 7 ಸಾವಿರ ಮಂದಿ ಭೋಜನ ಸ್ವೀಕರಿಸಿದ್ದು, ರಾತ್ರಿ 101 ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ
ವಿತರಿಸಲಾದ ಊಟವನ್ನು 55 ಸಾವಿರಕ್ಕೂ ಹೆಚ್ಚು ಮಂದಿ ಸೇವಿಸಿದ್ದಾರೆ. ಕೆಲವು ವಾರ್ಡ್‌ಗಳಲ್ಲಿ 1500ಕ್ಕೂ ಹೆಚ್ಚು ಜನರು ಕ್ಯಾಂಟೀನ್‌ಗಳಿಗೆ ಭೇಟಿ  ನೀಡಿರುವುದು ವಿಶೇಷವಾಗಿದೆ. ಆ ಹಿನ್ನೆಲೆಯಲ್ಲಿ ಕ್ಯಾಂಟೀನ್‌ಗೆ ಭೇಟಿ ನೀಡುವ ಜನರಿಗೆ
ಅನುಗುಣವಾಗಿ ಆಹಾರ ಪೂರೈಕೆ ಮಾಡಿಕೊಳ್ಳಲು ಕ್ಯಾಂಟೀನ್‌ಗೆ ಆಹಾರ ಪೂರೈಕೆ ಗುತ್ತಿಗೆ ಪಡೆದ ಸಂಸ್ಥೆಗಳಿಗೆ ಸೂಚಿಸಿದ್ದಾರೆ. 

ಬಡವರ ಪರ ಯೋಜನೆಗಳು ಎಲ್ಲಿದ್ದರೂ ಕಾಪಿ ಮಾಡುತ್ತೇವೆ
ತಮಿಳುನಾಡಿನ ಯೋಜನೆಯನ್ನು ಸರ್ಕಾರ ಕಾಪಿ ಮಾಡಿದೆ ಎಂದು ಕೆಲವರು ದೂರುತ್ತಾರೆ. ಆದರೆ, ಬಡವರ ಪರವಾದ ಯೋಜನೆಗಳು ಎಲ್ಲಿದ್ದರೂ ಅವುಗಳನ್ನು ಕಾಪಿ ನಾವು ಮಾಡುತ್ತೇವೆ. ತಮಿಳುನಾಡಿನ ಕ್ಯಾಂಟೀನ್‌ಗಿಂತಲೂ ಕ್ಯಾಂಟೀನ್‌ ಭಿನ್ನ ಎಂದು ಸಿಎಂ ಹೇಳಿದರು. 

ಮೋದಿ ಅವರದ್ದು ಮನ್‌ ಕೀ ಬಾತ್‌ ನಮ್ಮದು ವಾಂಗೀಬಾತ್‌
ಇಂದಿರಾ ಗಾಂಧಿಯವರು ಬ್ಯಾಂಕ್‌ಗಳನ್ನು ರಾಷ್ಟ್ರೀಕರಣಗೊಳಿಸಿ ಬಡವರು ಸಹ ಬ್ಯಾಂಕ್‌ಗಳ ಮೆಟ್ಟಿಲು ಹತ್ತುವಂತೆ ಮಾಡಿದ್ದರು. ಆದರೆ, ಕಪ್ಪು ಹಣ ಹೊರತರುವ ಹೆಸರಲ್ಲಿ ಮೋದಿ ಡಿಮಾನಿಟೈಸೇಷನ್‌ ಮಾಡಿ ಬ್ಯಾಂಕ್‌ಗಳಿಂದ ಬಡವರನ್ನು, ರೈತರನ್ನು ದೂರ
ಮಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಮೋದಿಯವರದ್ದು ಕೇವಲ “ಮನ್‌ ಕೀ ಬಾತ್‌’ ಆಯಿತು. ಆದರೆ, ನಮ್ಮದು ವಾಂಗಿಬಾತ್‌ ಎಂದು ಮೋದಿಯವರನ್ನು ಸಿಎಂ ಲೇವಡಿ ಮಾಡಿದರು. 

ಸಿಎಂರಿಂದ “ಹಸಿವು ಹಠಾವೋ’
ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಯವರು ಗರೀಬಿ ಹಠಾವೋ ಎಂದಿದ್ದರು. ಇದೀಗ ರಾಜ್ಯದಲ್ಲಿ ಹಸಿವು ಹಠಾವೋ ಎನ್ನುವ ಮೂಲಕ ರಾಜ್ಯವನ್ನು ಹಸಿವು ಮುಕ್ತಗೊಳಿಸಲು ಸಿಎಂ ಮುಂದಾಗಿದ್ದಾರೆ ಎಂದು ಮೇಯರ್‌ ಜಿ.ಪದ್ಮಾವತಿ
ತಿಳಿಸಿದರು. 

ಸರ್ವಜ್ಞರ ವಾಕ್ಯ ಉಲ್ಲೇಖ
ಹಸಿದವರಿಗೆ ಊಟ ನೀಡುವ ಕುರಿತು ಮಾತನಾಡುವ ವೇಳೆ ರಾಹುಲ್‌ ಗಾಂಧಿ ಅವರು ಕವಿ ಸರ್ವಜ್ಞ ಅವರ, “”ಅನ್ನದಾನಗಳಿಗಿಂತ ಇನ್ನ ದಾನಗಳಿಲ್ಲ, ಅನ್ನಕ್ಕೆ ಮೇಲು ಹಿರಿದಿಲ್ಲ, ಲೋಕಕ್ಕೆ ಅನ್ನವೇ ಪ್ರಾಣ” ಎನ್ನುವ ವಾಕ್ಯವನ್ನು ಇಂಗಿಷ್‌ನಲ್ಲಿ ಉಲ್ಲೇಖೀಸುವ ಮೂಲಕ ಇಂದಿರಾ ಕ್ಯಾಂಟೀನ್‌ಗಳ ಮಹತ್ವವನ್ನು ತಿಳಿಸಿದರು. 

ಹಣ ಪಾವತಿಸಿ ಟೋಕನ್‌ ಪಡೆದ ರಾಹುಲ್‌
ಇಂದಿರಾ ಕ್ಯಾಂಟೀನ್‌ನಲ್ಲಿ ರಾಹುಲ್‌ ಗಾಂಧಿಯವರು 10 ರೂ. ಪಾವತಿಸಿ ಟೋಕನ್‌ ಪಡೆದು ಊಟ ಮಾಡಿದರು. ಉಚಿತವಾಗಿ ಊಟ ನೀಡುತ್ತಿದ್ದರೂ, ಸಾಂಕೇತಿಕವಾಗಿ ಅವರು ಹಣ ಪಾವತಿಸಿ, ವಾಂಗಿಬಾತ್‌ ಮತ್ತು ಮೊಸರನ್ನು ಸವಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಅವರು ಸಹ ಹಣ ಪಾವತಿಸಿ ಊಟ ಮಾಡಿದರು. 

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.