ಗುಜರಾತ್‌ ಮಾದರಿಯಲ್ಲಿ ಅಮೃತ್‌

4 ಹಂತಗಳು: 1,580 ಎಕರೆ ಭೂಮಿ; ಭೂಸ್ವಾಧೀನ ಇಲ್ಲದೆ ಅಭಿವೃದಿ

Team Udayavani, Feb 17, 2021, 12:39 PM IST

ಗುಜರಾತ್‌ ಮಾದರಿಯಲ್ಲಿ ಅಮೃತ್‌

ಬೆಂಗಳೂರು: ಕೇಂದ್ರದ ಮಹತ್ವಾಕಾಂಕ್ಷಿ “ಅಮೃತ್‌’ ಯೋಜನೆಯಡಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದಿಂದ ನಗರ ಉತ್ತರ ತಾಲೂಕಿನ ಯಲಹಂಕ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ಈ ಪ್ರದೇಶವನ್ನು ಗುಜರಾತ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.

ಒಟ್ಟಾರೆ ನಾಲ್ಕು ಹಂತಗಳಲ್ಲಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದ್ದು, 1,580 ಎಕರೆಯಲ್ಲಿ 784 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಯಲಹಂಕ ಮತ್ತು ಜಾಲ ಹೋಬಳಿಯ ಲಕ್ಷ್ಮೀ ಸಾಗರ, ಗಂಟಿಗಾನಹಳ್ಳಿ, ನಾಗದಾಸನಹಳ್ಳಿ ಗ್ರಾಮಗಳನ್ನು ಗುರುತಿಸಲಾಗಿದ್ದು, ಸುಮಾರು 137.88 ಹೆಕ್ಟೇರ್‌ ಪ್ರದೇಶದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಇದರಲ್ಲಿ ಯಾವುದೇ ಭೂಸ್ವಾಧೀನ ಪ್ರಕ್ರಿಯೆ ಇರುವುದಿಲ್ಲ. ಬದಲಿಗೆ ಭೂಮಾಲಿಕರಿಗೆ ಶೇ. 50 ಜಮೀನು ಅಭಿವೃದ್ಧಿಪಡಿಸಿ ಹಿಂತಿರುಗಿಸಲಾಗುತ್ತದೆ. ಗುಜರಾತ್‌ನಲ್ಲಿ ಇದು ಯಶಸ್ವಿಯಾಗಿದ್ದರಿಂದಅದೇ ಮಾದರಿಯನ್ನು ಇಲ್ಲಿ ಅನುಸರಿಸಲಾಗುತ್ತಿದೆ.ಈಚೆಗೆ ನಡೆದ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಬಿಡಿಎನಿಂದ ಕೈಗೆತ್ತಿಕೊಳ್ಳೂವುದುಹಾಗೂ ಯೋಜನಾ ತಯಾರಿಕೆ ಉದ್ದೇಶ ಘೋಷಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಭೂಮಾಲಿಕತ್ವ ಬದಲಾವಣೆ ಸೇರಿದಂತೆ ಹಲವು ತಾಂತ್ರಿಕ ಅಂಶಗಳಿಗೆ ತೊಡಕು ಉಂಟಾಗದಿರಲು ಕೆಟಿಸಿಪಿ ಕಾಯ್ದೆಗೆ ಕೆಲವು ಅಗತ್ಯ ತಿದ್ದುಪಡಿಗಳನ್ನು ತರಲು ಸರ್ಕಾರಕ್ಕೆ ಬಿಡಿಎ ಪ್ರಸ್ತಾವನೆಯನ್ನೂ ಸಲ್ಲಿಸಿದೆ. ಅದು ಅನುಮೋದನೆಗೊಂಡ ನಂತರ ಶಿವರಾಮ ಕಾರಂತ ಬಡಾವಣೆ ಜತೆಗೆ ಈ ಯೋಜನೆಯನ್ನು ಜಾರಿಗೊಳಿಸುವ ಯೋಚನೆ ಇದೆ. ಆದರೆ, ಇನ್ನೂ ನಿರ್ದಿಷ್ಟ ಗಡುವು ನಿಗದಿ ಆಗಿಲ್ಲ ಎಂದು ಬಿಡಿಎ ಆಯುಕ್ತ ಡಾ.ಎಚ್‌.ಆರ್‌. ಮಹದೇವ್‌ ತಿಳಿಸಿದರು.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಮತ್ತು ಅಭಿವೃದ್ಧಿ ಪಡಿಸಿದ ನಿವೇಶನಗಳ ಹಂಚಿಕೆ ಯೋಜನೆಯಲ್ಲಿ ಅನೇಕ ಭೂಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ವರ್ಷಗಟ್ಟಲೆ ಪ್ರಕರಣ ಕೋರ್ಟ್‌ ನಲ್ಲಿ ವಿಚಾರಣೆ ಹಂತ ದಲ್ಲಿದ್ದು, ಪ್ರಕರಣಗಳ ವಿಲೇವಾರಿ ವಿಳಂಬದಿಂದ ಯೋಜನೆಗಳಿಗೂ ಹಿನ್ನಡೆಉಂಟಾಗಿದೆ. ಜತೆಗೆ ವೆಚ್ಚವೂ ಹೆಚ್ಚಳವಾಗಿದೆ. ಈ ಮಧ್ಯೆ ಕೆಲವು ಪ್ರಕರಣಗಳಲ್ಲಿ ಭೂಮಾಲೀಕರುಹೆಚ್ಚಿನ ಪರಿಹಾರಕ್ಕೆ ಬೇಡಿಕೆ ಇಟ್ಟಿರುವುದರಿಂದಪ್ರಾಧಿಕಾರಕ್ಕೆ ಆರ್ಥಿಕ ಹೊರೆ ಆಗುತ್ತಿದೆ. ಆದ್ದರಿಂದಭೂಮಾಲೀಕರ ಸಹಭಾಗಿತ್ವದಲ್ಲಿ ಅಮೃತ್‌ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ಸಮಜಾಯಿಷಿ ನೀಡುತ್ತಾರೆ.

ಉತ್ತರದಲ್ಲೇ ಯಾಕೆ?: ಯಲಹಂಕ ಮತ್ತು ಸುತ್ತಲಿನ ‌¤ ಪ್ರದೇಶದಲ್ಲಿ ಹೆಚ್ಚು ಜಾಗದ ಲಭ್ಯತೆ ಇದೆ. ಅದೂ ಕಡಿಮೆ ಜನರ ಮಾಲಿಕತ್ವದಲ್ಲಿ ಅಧಿಕ ಭೂಮಿ ಸಿಗುವುದರಿಂದ ಯೋಜಿತ ಅಭಿವೃದ್ಧಿ ತ್ವರಿತಗತಿಯಲ್ಲಿ ಆಗುತ್ತದೆ. ಅಲ್ಲದೆ, ಸ್ವತ: ಬಿಡಿಎ ಅಧ್ಯಕ್ಷ ಎಸ್‌.ಆರ್‌. ವಿಶ್ವನಾಥ್‌ ಪ್ರತಿನಿಧಿಸುವ ಕ್ಷೇತ್ರವೂ ಅಲ್ಲಿಯೇ ಬರುವುದರಿಂದ ಜನರ ಮನವೊಲಿಕೆಗೆ ಮತ್ತಷ್ಟು ಸುಲಭವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಈ ಮಾರ್ಗದಲ್ಲಿ ಬರುತ್ತಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಪೂರಕ ವಾತಾವರಣವಿದೆ ಎಂಬುದು ಪ್ರಾಧಿಕಾರದ ಲೆಕ್ಕಾಚಾರ.

ಏನೇನು ಬರಲಿದೆ? :

137.88 ಹೆಕ್ಟೇರ್‌ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮನೆಗಳು, ಉದ್ಯಾನಗಳು ಮತ್ತು ಮುಕ್ತ ಪ್ರದೇಶ, ನಾಗರಿಕ ಸೌಲಭ್ಯಗಳು, ರಸ್ತೆ ಅಭಿವೃದ್ಧಿ, ಭೂಬ್ಯಾಂಕ್‌ ಸೇರಿದಂತೆ ಮತ್ತಿತರ ಸೌಕರ್ಯಗಳು ಬರಲಿವೆ. ಮೊದಲಹಂತದ ಮೊದಲ ಕಂತಿನಲ್ಲಿ ಸುಮಾರು 40 ಲಕ್ಷರೂ. ಬಿಡುಗಡೆ ಆಗಿದೆ.ಕೇಂದ್ರ ಸರ್ಕಾರ 25 ನಗರಗಳನ್ನು ಈ ಅಮೃತ್‌ ಯೋಜನೆ ಅಡಿ ಆಯ್ಕೆ ಮಾಡಿದೆ. ಅದರಲ್ಲಿ ಬೆಂಗಳೂರು ಕೂಡ ಒಂದು

 

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.