ನಡುರಾತ್ರಿ ಬಾಗಿಲು ಬಡಿದ ಆಗಂತುಕ!


Team Udayavani, Aug 13, 2019, 3:07 AM IST

nadu-rtatri

ಬೆಂಗಳೂರು: ನಡುರಾತ್ರಿ ಹಲವು ಮನೆಗಳ ಬಾಗಿಲು ಬಡಿದ ಆಗಂತುಕ, ಹಿಡಿಯಲು ಬಂದವರ ಕಡೆಯೇ ಪಿಸ್ತೂಲ್‌ನಿಂದ ಗುಂಡು ಹಾರಿಸಿ ತಪ್ಪಿಸಿಕೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯ ಗೋವಿಂದಶೆಟ್ಟಿ ಪಾಳ್ಯದಲ್ಲಿ ನಡೆದಿದೆ.

ಶನಿವಾರ ತಡರಾತ್ರಿ ಸುಮಾರು 2.10ರ ಸುಮಾರಿಗೆ ಅಪರಿಚಿತ ದುಷ್ಕರ್ಮಿಯ ಈ ಅನಿರೀಕ್ಷಿತ ಕೃತ್ಯಕ್ಕೆ ಲಗುಮಪ್ಪ ಲೇಔಟ್‌ನ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ದುಷ್ಕರ್ಮಿಯ ಗುಂಡೇಟಿನಿಂದ ಸ್ವಲ್ಪದರಲ್ಲಿಯೇ ಬಚಾವಾದ ಸ್ಥಳೀಯ ಯುವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು, ದುಷ್ಕರ್ಮಿಯ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದು, ಅಷ್ಟರಲ್ಲಾಗಲೇ ಆರೋಪಿ ಪರಾರಿಯಾಗಿದ್ದ.

ಆತ ಬಿಟ್ಟು ಹೋಗಿರುವ ಪಲ್ಸರ್‌ ಬೈಕನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಗುಂಡೇಟಿನಿಂದ ತಪ್ಪಿಸಿಕೊಂಡ ಆರ್‌.ಲೋಕೇಶ್‌ ಎಂಬಾತ ನೀಡಿರುವ ದೂರಿನ ಅನ್ವಯ ಕೊಲೆ ಯತ್ನ, ಶಸ್ತ್ರಾಸ್ತ್ರ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.

ದುಷ್ಕರ್ಮಿಯು ಪಿಸ್ತೂಲ್‌ನಿಂದ ಹಾರಿಸಿರುವ ಕಾಟ್ರೇಜ್‌ ಸ್ಥಳದಲ್ಲಿ ದೊರೆತಿದೆ. ಘಟನಾ ಸ್ಥಳದಲ್ಲಿನ ಸಿಸಿ ಕ್ಯಾಮೆರಾದಲ್ಲಿ ದುಷ್ಕರ್ಮಿಯ ಮುಖಚಹರೆ ಕೂಡ ಅಸ್ಪಷ್ಟವಾಗಿ ದಾಖಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಜಪ್ತಿ ಮಾಡಿಕೊಂಡಿರುವ ಪಲ್ಸರ್‌ ಬೈಕ್‌ ನೋಂದಣಿ ಸಂಖ್ಯೆ ಆಧರಿಸಿ ಆತನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ನೀಡಿರುವ ಮಾಹಿತಿ ಅನ್ವಯ ಇದುವರೆಗೂ ಆ ಭಾಗದಲ್ಲಿ ಆರೋಪಿ ಒಮ್ಮೆ ಕೂಡ ಕಾಣಿಸಿಕೊಂಡಿರಲಿಲ್ಲ. ಜತೆಗೆ, ಪಾನಮತ್ತನಾಗಿ ಲೇಔಟ್‌ಗೆ ನುಗ್ಗಿದ್ದ ಆತ, ಹಲವರ ಹೆಸರುಗಳನ್ನು ಕರೆದು ಬಾಗಿಲು ಬಡಿದಿದ್ದಾನೆ. ಹೀಗಾಗಿ, ಯಾವ ಉದ್ದೇಶಕ್ಕೆ ಆತ ಬಂದಿದ್ದ, ಕಳವಿಗೆ ಸಂಚು ರೂಪಿಸಿಕೊಂಡು ಆಗಮಿಸಿದ್ದನೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದರು.

ನಡೆದಿದ್ದೇನು?: ಲಗುಮಪ್ಪ ಲೇಔಟ್‌ನಲ್ಲಿ ಲೋಕೇಶ್‌, ಶಂಕರ್‌ ಸೇರಿದಂತೆ ಅವರ ಸಹೋದರರಿಗೆ ಸೇರಿದ 100ಕ್ಕೂ ಅಧಿಕ ಮನೆಗಳನ್ನು ಒಳಗೊಂಡ ವಠಾರಗಳಿವೆ. ಎಲ್ಲ ಮನೆಗಳನ್ನು ಬಾಡಿಗೆಗೆ ನೀಡಿದ್ದಾರೆ. ಶನಿವಾರ ತಡರಾತ್ರಿ 1.30ರ ಸುಮಾರಿಗೆ ಪಲ್ಸರ್‌ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿ, ಕೆಲವು ಮನೆಗಳ ಬಾಗಿಲು ಬಡಿದು, ಲತಾ, ಪುರುಷೋತ್ತಮ್‌ ಇದ್ದಾರಾ? ಎಂದು ಕೇಳಿದ್ದಾನೆ. ಜತೆಗೆ ಕೂಗಾಟ ಕೂಡ ನಡೆಸಿದ್ದಾನೆ. ಇದರಿಂದ ಆತಂಕಗೊಂಡ ಬಾಡಿಗೆದಾರರು ಲೋಕೇಶ್‌ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಲೋಕೇಶ್‌ ಸ್ಥಳಕ್ಕೆ ತೆರಳಿ ಬಾಡಿಗೆದಾರರ ಬಳಿ ಅಪರಿಚಿತನ ಬಗ್ಗೆ ವಿಚಾರಿಸುತ್ತಿರುವಾಗಲೇ ಮತ್ತೂಂದು ಮನೆಯ ಮಹಡಿಯ ಮೆಟ್ಟಿಲುಗಳಿಂದ ದುಷ್ಕರ್ಮಿ ಇಳಿದು ಬರುತ್ತಿದ್ದುದನ್ನು ನೋಡಿದ ಲೋಕೇಶ್‌ ಹಾಗೂ ಇತರರು ಆತನನ್ನು ಹಿಡಿಯಲು ಮುಂದಾಗಿದ್ದಾರೆ. ಕೂಡಲೇ ಕಾಂಪೌಂಡ್‌ ಹಾರಿದ ದುಷ್ಕರ್ಮಿ ಓಡತೊಡಗಿದ್ದಾನೆ.

ಲೋಕೇಶ್‌ ಹಾಗೂ ಇತರೆ ಯುವಕರು ಆತನ ಬೆನ್ನುಬಿದ್ದಾಗ ಗಾಣಿಗರ ಬಡವಾಣೆಯ ರಸ್ತೆಯಲ್ಲಿ ನಿಂತು ತನ್ನ ಬಳಿಯಿದ್ದ ಪಿಸ್ತೂಲ್‌ನಿಂದ ನೇರವಾಗಿ ಲೋಕೇಶ್‌ ಕಡೆಗೆ ಒಂದು ಗುಂಡು ಹಾರಿಸಿದ್ದಾನೆ. ಲೋಕೇಶ್‌ ತಪ್ಪಿಸಿಕೊಂಡಿದ್ದಾರೆ. ಗುಂಡಿನ ದಾಳಿ ಕಂಡು ಲೋಕೇಶ್‌ ಹಾಗೂ ಇತರರು ಹೆದರಿದ್ದಾರೆ. ಕೂಡಲೇ ದುಷ್ಕರ್ಮಿ ಸ್ಥಳದಿಂದ ಚಪ್ಪಲಿ ಕೂಡ ಅಲ್ಲಿಯೇ ಬಿಟ್ಟು ಕತ್ತಲಲ್ಲಿ ಪರಾರಿಯಾಗಿದ್ದಾನೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು, ಸ್ಥಳೀಯರ ನೆರವಿನೊಂದಿಗೆ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಆರೋಪಿಯ ಸುಳಿವು ಸಿಕ್ಕಿಲ್ಲ. ಆತ ಬಿಟ್ಟು ಹೋಗಿರುವ ಪಲ್ಸರ್‌ ಬೈಕ್‌ ಜಪ್ತಿಯಾಗಿದೆ ಎಂದು ಹಿರಿಯ ಅಧಿಕಾರಿ ವಿವರಿಸಿದರು.

ಹದಿನೈದು ಜನರ ಕೈ ಬದಲಾಗಿರುವ ಬೈಕ್‌!: ಜಪ್ತಿಯಾಗಿರುವ ಬೈಕ್‌ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಿದಾಗ ಮೂಲ ಮಾಲೀಕರು ಸೇರಿ 15 ಮಂದಿಯ ಕೈ ಬದಲಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಬೈಕ್‌ ಸುಳಿವನ್ನೇ ಆಧರಿಸಿ ಕೆಲವರನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ ಎಂದು ಅಧಿಕಾರಿ ಹೇಳಿದರು.

ಆತ ನನ್ನನ್ನು ಕೊಲ್ಲಲೆಂದೇ ಬಂದಿದ್ದ!: “ರಿಯಲ್‌ ಎಸ್ಟೇಟ್‌, ಕ್ಯಾಬ್‌ ಚಾಲನೆ ಸೇರಿ ಹಲವು ವ್ಯವಹಾರ ಮಾಡಿಕೊಂಡಿರುವ ನಾನು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ಹಲವರಿಗೆ ಸಹಾಯ ಮಾಡಿದ್ದೇನೆ. ರಾತ್ರಿ ನಾವು ಬೆನ್ನುಹತ್ತಿದಾಗ ದುಷ್ಕರ್ಮಿ ನನ್ನ ಕಡೆಯೇ ಗುರಿ ಇಟ್ಟು ಗುಂಡು ಹಾರಿಸಿದ್ದು, ಆತ ನನ್ನನ್ನು ಕೊಲ್ಲುವ ಉದ್ದೇಶಕ್ಕೆ ಆಗಮಿಸಿದ್ದ ಎಂಬುದು ಸ್ಪಷ್ಟವಾಗುತ್ತದೆ ಎಂದು ದೂರುದಾರ ಲೋಕೇಶ್‌ “ಉದಯವಾಣಿ’ಗೆ ತಿಳಿಸಿದರು.

ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ದುಷ್ಕರ್ಮಿ ಗುಂಡು ಹಾರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದು, ಆರೋಪಿ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
-ಇಶಾ ಪಂತ್‌, ಆಗ್ನೇಯ ವಿಭಾಗ ಡಿಸಿಪಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.