ಇಂದಿನಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ


Team Udayavani, Jun 18, 2018, 6:30 AM IST

ban18061807medn.jpg

ಬೆಂಗಳೂರು: ಪೆಟ್ರೋಲ್-ಡೀಸೆಲ್‌ ಬೆಲೆ ಮತ್ತು ಥರ್ಡ್‌ಪಾರ್ಟಿ ಪ್ರೀಮಿಯಂ ದರವನ್ನು ಅವೈಜ್ಞಾನಿಕವಾಗಿ ಹೆಚ್ಚಿಸಿರುವುದನ್ನು ಖಂಡಿಸಿ ಅಖೀಲ ಭಾರತ ಲಾರಿ ಮಾಲಿಕರ ಮಹಾಒಕ್ಕೂಟ ಸೋಮವಾರದಿಂದ ದೇಶಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ರಾಜ್ಯಕ್ಕೂ ಇದರ ಬಿಸಿ ತಟ್ಟುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೆಳಿಗ್ಗೆ 6ರಿಂದ ಎಲ್ಲ ಪ್ರಕಾರದ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದೆ. ಅಗತ್ಯವಸ್ತುಗಳನ್ನು ಪೂರೈಸುವ ಲಾರಿಗಳಿಗೆ ಮಾತ್ರ ಇದರಿಂದ ತಾತ್ಕಾಲಿಕವಾಗಿ ವಿನಾಯ್ತಿ ನೀಡಲಾಗಿದೆ ಎಂದು ಮಹಾಒಕ್ಕೂಟದ ಕಾರ್ಯದರ್ಶಿ ಗೋಪಾಲಸ್ವಾಮಿ ತಿಳಿಸಿದ್ದಾರೆ.

ಮುಷ್ಕರಕ್ಕೆ ಬೆಂಬಲ ಇಲ್ಲ
ಆದರೆ, ಈ ಮುಷ್ಕರಕ್ಕೆ ಕರ್ನಾಟಕ ಲಾರಿ ಮಾಲಿಕರು ಮತ್ತು ಏಜೆಂಟರುಗಳ ಒಕ್ಕೂಟದ ಬೆಂಬಲ ಇರುವುದಿಲ್ಲ. ಜುಲೈ 20ರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹಾಗಾಗಿ, ಲಾರಿಗಳ ಸಂಚಾರ ಸೋಮವಾರ ಎಂದಿನಂತೆ ಇರಲಿದೆ ಎಂದು ಒಕ್ಕೂಟದ ಅಧ್ಯಕ್ಷ ಜಿ.ಆರ್‌. ಷಣ್ಮುಗಪ್ಪ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೊಂದಲಗಳು ಇರುವುದರಿಂದ ಮುಷ್ಕರ ಪರಿಣಾಮಕಾರಿ ಆಗುವುದು ಅನುಮಾನವಾಗಿದೆ.

9.30 ಲಕ್ಷ ಲಾರಿಗಳು
ಬೆಳಗ್ಗೆ 6ರಿಂದ ಎಲ್ಲ ಲಾರಿಗಳು ಆಯಾ ಜಾಗದಲ್ಲೇ ಸ್ಥಗಿತಗೊಳ್ಳಲಿವೆ. ರಾಜ್ಯದಲ್ಲಿ ಸುಮಾರು 9.30 ಲಕ್ಷ ಲಾರಿಗಳಿದ್ದು, ಈ ಪೈಕಿ ಬೆಂಗಳೂರಿನಲ್ಲೇ 3 ಲಕ್ಷ ಇವೆ. ಇವೆಲ್ಲವುಗಳೂ ಮುಷ್ಕರದ ಹಿನ್ನೆಲೆಯಲ್ಲಿ ಸ್ತಬ್ದಗೊಳ್ಳಲಿವೆ. ಇದರಿಂದ ಕೈಗಾರಿಕೆ, ಆಹಾರಧಾನ್ಯ, ಗೂಡ್‌ಶೆಡ್‌ ಸೇರಿದಂತೆ ವಿವಿಧ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ. ಒಂದು ವೇಳೆ ಮುಷ್ಕರ ತೀವ್ರಗೊಂಡರೆ, ರಾಜ್ಯದಲ್ಲಿ ತರಕಾರಿ ಸೇರಿದಂತೆ ಅಗತ್ಯವಸ್ತುಗಳ ಪೂರೈಕೆಗೂ ಇದರ ಬಿಸಿ ತಟ್ಟಲಿದೆ ಗೋಪಾಲಸ್ವಾಮಿ ತಿಳಿಸಿದರು.

ನಿತ್ಯ ಬೆಂಗಳೂರಿಗೆ 10 ಸಾವಿರ ಲಾರಿಗಳು ಪ್ರವೇಶಿಸುತ್ತವೆ. ಮುಷ್ಕರದಂದು ಲಾರಿಗಳು ಒಳ ಪ್ರವೇಶಿಸಲು ಅವಕಾಶ ನೀಡಲಾಗುವುದು. ತದನಂತರದಲ್ಲಿ ನಿರ್ಗಮಿಸಲು ಅವಕಾಶ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.

ಪದೇ ಪದೇ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಹೆಚ್ಚಳ ಆಗುತ್ತಿದೆ. ಮತ್ತೂಂದೆಡೆ ಅವೈಜ್ಞಾನಿಕ ರೀತಿಯಲ್ಲಿ ಮೂರನೇ ಪಾರ್ಟಿ ಇನ್ಷೊರೆಸ್‌ಪ್ರೀಮಿಯಂ ದರ ಕೂಡ ಅತ್ಯಧಿಕ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ಇದರಿಂದ ಲಾರಿ ಮಾಲೀಕರ ಮೇಲೆ ಹೊರೆಯಾಗಿದೆ. ಈ ಬಗ್ಗೆ ಹಲವು ಬಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ. ಈ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಅಖೀಲ ಭಾರತ ಲಾರಿ ಮಾಲಿಕರ ಮಹಾಒಕ್ಕೂಟ ಕರೆ ನೀಡಿದ್ದು, ಇದಕ್ಕೆ ರಾಜ್ಯದ ಲಾರಿ ಮಾಲಿಕರ ಸಂಘ ಕೈಜೋಡಿಸಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.