ಜನರ ದೂರುಗಳಿಗೆ ಸ್ಪಂದಿಸದ ಪಾಲಿಕೆ


Team Udayavani, Apr 18, 2019, 3:00 AM IST

bbmp2

ಬೆಂಗಳೂರು: ನಗರದ ಜನತೆಯ ಸಮಸ್ಯೆಗಳಿಗೆ ಆನ್‌ಲೈನ್‌ ಮೂಲಕ ಶೀಘ್ರ ಪರಿಹಾರ ಒದಗಿಸುವಲ್ಲಿ ಬಿಬಿಎಂಪಿ ವಿಫ‌ಲವಾಗಿದ್ದು, ತಾನೇ ಜಾರಿಗೊಳಿಸಿದ ಗ್ಲೋಬಲ್‌ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್‌ ಸಿಸ್ಟಂ (ಜಿಪಿಎಂಎಸ್‌) ವ್ಯವಸ್ಥೆ ಮೂಲೆಗುಂಪಾಗಿದೆ.

ನಗರದ ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಹಾಗೂ ಪಾಲಿಕೆ ಅಧಿಕಾರಿಗಳು ಉತ್ತರದಾಯಿತ್ವಗೊಳಿಸುವ ಉದ್ದೇಶದಿಂದ ಜಿಪಿಎಂಎಸ್‌ ವ್ಯವಸ್ಥೆಯನ್ನು ಪಾಲಿಕೆಯಲ್ಲಿ 2011ರಲ್ಲಿ ಜಾರಿಗೊಳಿಸಲಾಗಿದೆ. ಜಿಪಿಎಂಎಸ್‌ ತಂತಾಂತ್ರಕ್ಕೆ ನಗರದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾದರೂ, ಪಾಲಿಕೆ ಮಾತ್ರ ತಂತ್ರಾಂಶ ಬಲಪಡಿಸುವ ಕೆಲಸಕ್ಕೆ ಮುಂದಾಗುತ್ತಿಲ್ಲ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಯಾವುದೇ ಸಮಸ್ಯೆಗಳನ್ನು ಬಿಬಿಎಂಪಿಯ ಗಮನಕ್ಕೆ ತರಲು ಜಿಪಿಎಂಎಸ್‌ ವ್ಯವಸ್ಥೆ ಸಹಕಾರಿಯಾಗಿದ್ದು, ಫೋಟೋ, ಆಡಿಯೋ ಸಮೇತವಾಗಿ ದೂರುಗಳನ್ನು ನೀಡಬಹುದಾಗಿದೆ. ಜತೆಗೆ ಸಾರ್ವಜನಿಕರ ದೂರುಗಳಿಗೆ ಪಾಲಿಕೆಯಿಂದ ಕೈಗೊಂಡ ಕ್ರಮಗಳ ಕುರಿತು ತಿಳಿಸುವ ವ್ಯವಸ್ಥೆಯೂ ತಂತ್ರಾಂಶದಲ್ಲಿದೆ.

ಅದರಂತೆ 2011ರಿಂದಲೂ ಸಾರ್ವಜನಿಕರಿಂದ ಹೆಚ್ಚಿನ ಸಂಖ್ಯೆ ದೂರುಗಳು ಬಂದರೂ, ಅವುಗಳಿಗೆ ಪರಿಹಾರ ಒದಗಿಸುವ ಕಾರ್ಯ ಪಾಲಿಕೆಯಿಂದ ಆಗುತ್ತಿಲ್ಲ. ಬೀದಿ ದೀಪ, ತ್ಯಾಜ್ಯ ಸಮಸ್ಯೆ, ರಸ್ತೆಗುಂಡಿ, ಆಸ್ತಿ ತೆರಿಗೆ ಗೊಂದಲ, ನಿಯಮ ಬಾಹಿರ ಕಟ್ಟಡ ನಿರ್ಮಾಣ ಸೇರಿದಂತೆ ಹತ್ತಾರು ವಿಚಾರಗಳಿಗೆ ಸಂಬಂಧಿಸಿದ ದೂರುಗಳು ಸಾರ್ವಜನಿಕರಿಂದ ಬರುತ್ತಿವೆ. ಆದರೆ, ಪಾಲಿಕೆಯಿಂದ ಅವುಗಳ ಪರಿಹಾರ ಮಾಡುವ ಕೆಲಸ ಆಗುತ್ತಿಲ್ಲ.

ಕಳೆದ ಒಂಬತ್ತು ವರ್ಷಗಳಲ್ಲಿ ಜಿಪಿಎಂಎಸ್‌ ತಂತ್ರಾಂಶಕ್ಕೆ 24 ಸಾವಿರಕ್ಕೂ ಹೆಚ್ಚಿನ ದೂರುಗಳು ಬಂದಿದ್ದು, ಈವರೆಗೆ ಕೇವಲ 31 ದೂರುಗಳಿಗೆ ಮಾತ್ರ ಸ್ಪಂದನೆ ಸಿಕ್ಕಿದೆ. ಉಳಿದ ದೂರುಗಳ ಪೈಕಿ ಹೆಚ್ಚಿನ ದೂರುಗಳು ಪ್ರಗತಿಯಲ್ಲಿದ್ದರೆ, 8 ಸಾವಿರಕ್ಕೂ ಹೆಚ್ಚಿನ ದೂರುಗಳಿಗೆ ಪರಿಹಾರ ನೀಡುವಲ್ಲಿ ಪಾಲಿಕೆ ಅಧಿಕಾರಿಗಳು ವಿಫ‌ಲರಾಗಿದ್ದಾರೆ.

ಜಿಪಿಎಂಎಸ್‌ಗೆ ಬಂದ ದೂರುಗಳ ವಿವರ
-ದಾಖಲಾದ ಒಟ್ಟು ದೂರುಗಳು 24,911
-ಪರಿಹಾರ ನೀಡುರುವುದು 31
-ಪ್ರಗತಿಯಲ್ಲಿರುವ ದೂರುಗಳು 16,659
-ಪರಿಹಾರ ದೊರೆಯುವುದು 8,221
-ಪ್ರತಿಕ್ರಿಯಿಸದ ದೂರುಗಳು 01
-ಬೇರೆ ಇಲಾಖೆಗಳಿಗೆ ವರ್ಗಾಹಿಸಿದ ದೂರುಗಳು 07

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.