ಪುಟಗೋಸಿ ಪಕ್ಷಕ್ಕೆ ಕಾಂಗ್ರೆಸ್ ಸಲಾಂ ಹೊಡೆದಿದೆ: ಸಚಿವ ಹೆಗಡೆ
Team Udayavani, Jun 2, 2018, 4:46 PM IST
ಕುಮಟಾ: ಒಂದು ಕಾಲದಲ್ಲಿ ಕಾಂಗ್ರೆಸ್ ಬಿಟ್ಟರೆ ಬೇರೆ ಪಕ್ಷಗಳಿರಲಿಲ್ಲ,ಕಾಂಗ್ರೆಸ್ ಎದುರು ಅಭ್ಯರ್ಥಿಗಳು ಇರಲಿಲ್ಲ. ಅಂತಹ ಪಕ್ಷ ಇಂದು ಪುಟಗೋಸಿ ಪಕ್ಷ ಕ್ಕೆ ಸಲಾಂ ಹೊಡೆಯುವ ದಯನೀಯ ಸ್ಥಿತಿ ಬಂದಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸಮ್ಮಿಶ್ರ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.
ಕುಮಟಾದ ಹವ್ಯಕ ಭವನದಲ್ಲಿ ಶಾಸಕ ದಿನಕರ್ ಶೆಟ್ಟಿ ಅವರ ಅಭಿನಂದನಾ ಸಮಾರಂಭದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದರು.
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷವೆಂಬ ಹೆಗ್ಗಳಿಕೆ ಇರುವ ಕಾಂಗ್ರೆಸ್ ಇಂದು ಅಧಿಕಾರಕ್ಕಾಗಿ ಮೂವತ್ತು ಸೀಟ್ ಗೆದ್ದಿರುವ ಪುಟಗೋಸಿ ಪಕ್ಷಕ್ಕೆ ಸಲಾಂ ಹೊಡೆಯಬೇಕಾಗಿದೆ ಎಂದರು.
ಜಿಲ್ಲೆಯಲ್ಲಿ ಆರಕ್ಕೆ ಆರೂ ಕ್ಷೇತ್ರಗಳಲ್ಲಿ ಬಿಜೆಪಿ ಧ್ವಜ ಹಾರಿಸಿಯೇ ನಾನು ರಾಜಕೀಯ ನಿವೃತ್ತಿ ಪಡೆಯುವುದು. ಭಟ್ಕಳವನ್ನು ಈ ಬಾರಿ ಗೆದ್ದಿದ್ದೇವೆ. ಮುಂದಿನ ದಿನಗಳಲ್ಲಿ ದೇಶಪಾಂಡೆ ಅವರ ಹಳಿಯಾಳವನ್ನು ಗೆಲ್ಲಬೇಕಾಗಿದೆ. ಅವರು ಬಿಜೆಪಿಗೆ ಬರುತ್ತಾರೋ ,ನಮ್ಮ ಅಭ್ಯರ್ಥಿ ಗೆಲ್ಲುತ್ತಾರೋ ಒಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕೆನ್ನುವುದು ನಮ್ಮ ಗುರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!