ಆನೇಕಲ್: ನಾಪತ್ತೆ ಪ್ರಕರಣ ಸುಖಾಂತ್ಯ ; ನಾಲ್ವರು ಬಾಲಕರು ಮನೆಗೆ !
Team Udayavani, Jun 10, 2018, 10:37 AM IST
ಆನೇಕಲ್: ಮಕ್ಕಳ ಕಳ್ಳರ ವದಂತಿ ವ್ಯಾಪಕವಾಗಿರುವ ವೇಳೆಯಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ನಾಲ್ವರು ಬಾಲಕರು ಶನಿವಾರ ಸಂಜೆ ನಾಪತ್ತೆಯಾಗಿ ಪೋಷಕರು ತೀವ್ರ ಆತಂಕಕ್ಕೊಳಗಾದ ಘಟನೆ ನಡೆದಿದೆ.
ಆನೇಕಲ್ ತಾಲೂಕಿನ ತಾಲೂಕಿನ ಮಂಚನಹಳ್ಳಿ ಗ್ರಾಮದ ಚಂದನ್ (12), ಕಾಸ್(15), ಕಾರ್ತಿಕ್(15), ನಂದನ್ (12) ನಾಪತ್ತೆಯಾದ ಬಾಲಕರು.ಇವರೆಲ್ಲರೂ ಎಲ್ಲರೂ ಒಂದೇ ಶಾಲೆಯಲ್ಲಿ ಓದುತ್ತಿದ್ದು ಶನಿವಾರ ಸಂಜೆ ಒಟ್ಟಿಗೆ ಆಟವಾಡುತ್ತಿದ್ದರು.
ನಾಲ್ವರು ಮನೆಯವರಿಗೆ ಹೇಳದೆ ಹೊಸೂರು ಬೆಟ್ಟಕ್ಕೆ ತೆರಳಿದ್ದಾರೆ ಅಲ್ಲಿ ಇದ್ದೆಲ್ಲಾ ಹಣ ಖಾಲಿ ಮಾಡಿ ಮನೆಗೆ ಬಾರಲು ಪರದಾಡಿದ್ದಾರೆ. ಹೊಸೂರು ಬಸ್ ನಿಲ್ದಾಣದಲ್ಲಿ ದಿಕ್ಕು ತೋಚದೆ ಕುಳಿತಿದ್ದ ನಾಲ್ವರು ಪೊಲೀಸರ ಕಣ್ಣಿಗೆ ಬಿದ್ದಿದ್ದು, ಪೊಲೀಸರು ಮನೆಗೆ ಕರೆ ತಂದು ಪೋಷಕರ ಆತಂಕ ದೂರ ಮಾಡಿದ್ದಾರೆ.
ಮಕ್ಕಳಾದ ದಿಂದ ಕಂಗಾಲಾದ ಪೋಷಕರು ಮಕ್ಕಳು ಮನೆಗೆ ಬರುತ್ತಿದ್ದಂತೆ ತೀವ್ರ ತರಾಟಗೆ ತೆಗೆದುಕೊಂಡಿದ್ದಾರೆ.
ಸಂಜೆ 6 ಗಂಟೆಯಾದರೂ ಬಾಲಕರು ಮನೆಗೆ ಬಾರದಿದ್ದರಿಂದ ಆತಂಕಕೊಂಡ ಪೋಷಕರು, ಅತ್ತಿಬೆಲೆ ಠಾಣೆಯಲ್ಲಿ ಬಾಲಕರು ನಾಪತ್ತೆಯಾಗಿರುವ ಬಗ್ಗೆ ದೂರು
ನೀಡಿದ್ದರು.
ಚಂದನ್ ಮಂಚನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್ರ ಪುತ್ರನಾಗಿದ್ದಾನೆ. ಉಳಿದವರೂ ಆರ್ಥಿಕವಾಗಿ ಸ್ಥಿತಿವಂತರ ಮಕ್ಕಳಾಗಿದ್ದಾರೆಂದು ತಿಳಿದು ಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಾಲಕರ ಪತ್ತೆಗೆ 4 ತಂಡಗಳನ್ನು ರಚಿಸಿ ತೀವ್ರ ಶೋಧಕ್ಕಿಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ