ಅತಂತ್ರವಾದ “ಅನಿಲ ಭಾಗ್ಯ; ಫ‌ಲಾನುಭವಿಗಳಿಗೆ ಸಂಪರ್ಕ ಸಿಕ್ಕಿಲ್ಲ


Team Udayavani, Jun 12, 2018, 6:00 AM IST

gas-cylinder.jpg

ಬೆಂಗಳೂರು: ಪ್ರತಿಷ್ಠೆಗೆ ಬಿದ್ದು ಕೇಂದ್ರ ಸರ್ಕಾರದ “ಉಜ್ವಲ’ ಯೋಜನೆಗೆ ಸೆಡ್ಡು ಹೊಡೆದು ಹಿಂದಿನ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ “ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ’ ಫ‌ಲಾನುಭವಿಗಳಿಗೆ “ಅಂಗೈಯಲ್ಲಿ ಆಕಾಶ’ ತೋರಿಸಿದಂತಾಗಿದೆ.

ರಾಜ್ಯ ಸರ್ಕಾರದ “ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆಯ ವ್ಯಥೆ ಇದಾಗಿದೆ. ಹೊಸ ಸರ್ಕಾರದ ತೀರ್ಮಾನದ ಮೇಲೆ ಭವಿಷ್ಯ ಅವಲಂಬಿತವಾಗಿದೆ. ಯೋಜನೆ ಮುಂದುವರಿಸಲು ಈಗಿನ ಸಮ್ಮಿಶ್ರ ಸರ್ಕಾರ ತೀರ್ಮಾನಿಸಿದರೆ ಮಾತ್ರ ಫ‌ಲಾನುಭವಿಗಳ ಕೈಸೇರಲಿದೆ. ಇಲ್ಲದಿದ್ದರೆ, ಹತ್ತಾರು ತಿಂಗಳಿಂದ ಕಾದು ಕುಳಿತವರಿಗೆ “ಗ್ಯಾಸ್‌ ಟ್ರಬಲ್‌ ಗ್ಯಾರಂಟಿ’.

2017-18ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ಘೋಷಣೆ ಮಾಡಲಾಗಿತ್ತು. ಅದನ್ನು 2017ರ ಜೂನ್‌ 1ರಿಂದ ಜಾರಿಗೆ ತರುವುದಾಗಿ ಸರ್ಕಾರ ಹೇಳಿತ್ತು. ಈ ನಡುವೆ ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಹಗ್ಗ ಜಗ್ಗಾಟದ ಪರಿಣಾಮ ಯೋಜನೆ ಜಾರಿಗೆ ಬಂದಿರಲಿಲ್ಲ. ಕೊನೆಯದಾಗಿ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ 2018ರ ಫೆ.21ರಂದು ಯೋಜನೆಗೆ ಚಾಲನೆ ನೀಡಲಾಯಿತು. ಆದರೆ, ಈವರೆಗೆ ಯಾವೊಬ್ಬ ಫ‌ಲಾನುಭವಿಗೂ ಅದರ ಸೌಲಭ್ಯ ಸಿಕ್ಕಿಲ್ಲ.

ಅಡ್ಡಿಯಾದ ನೀತಿ ಸಂಹಿತೆ
ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯ ಅನುಷ್ಠಾನದ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳು ಆಗಿವೆ. ಫ‌ಲಾನುಭವಿಗಳ ಆಯ್ಕೆಯೂ ನಡೆದಿದೆ. ಅವರಿಗೆ ಸಿಎಂ ಪತ್ರವೂ ಹೋಗಿದೆ. ಆದರೆ, ಯೋಜನೆ ಇನ್ನೇನು ಅನುಷ್ಠಾನಗೊಳಿಸಬೇಕು ಎಂಬ ಹಂತದಲ್ಲಿ ಚುನಾವಣೆ ಎದುರಾಯಿತು. ನೀತಿ ಸಂಹಿತೆ ಅಡ್ಡಿ ಆಗಿದ್ದರಿಂದ ಫ‌ಲಾನುಭವಿಗಳಿಗೆ ಉಚಿತ ಗ್ಯಾಸ್‌ ಸಂಪರ್ಕ ಒದಗಿಸಲು ಸಾಧ್ಯವಾಗಿಲ್ಲ. ಶೀಘ್ರದಲ್ಲೇ ಮುಖ್ಯಮಂತ್ರಿ ಅವರು ಸಭೆ ಕರೆಯಲಿದ್ದು, ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ಸಮಜಾಯಿಷಿ ನೀಡುತ್ತಾರೆ. ಹೊಸ ಸರ್ಕಾರದಲ್ಲಿ ಯೋಜನೆ ಮುಂದುವರಿಯುತ್ತಾ ಎಂದು ಕೇಳಿದ್ದಕ್ಕೆ ಅಧಿಕಾರಿಗಳ ಬಳಿ ಉತ್ತರವಿಲ್ಲ.

ಏನಿದು ಮುಖ್ಯಮಂತ್ರಿ ಅನಿಲಭಾಗ್ಯ?
ಕರ್ನಾಟಕವನ್ನು ಪಡಿತರ ಸೀಮೆ ಎಣ್ಣೆ ಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ಅಡುಗೆ ಅನಿಲ ಸಂಪರ್ಕ ಇಲ್ಲದ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ಕೊಡಲು ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ “ಮುಖ್ಯಮಂತ್ರಿ ಅನಿಲಭಾಗ್ಯ’ ಯೋಜನೆ ಜಾರಿಗೆ ತರಲಾಗಿತ್ತು. 30 ಲಕ್ಷ ಕುಟುಂಬಗಳನ್ನು ಯೋಜನೆಗೆ ಪರಿಗಣಿಸಲಾಗಿತ್ತು. ಮೊದಲ ಹಂತದಲ್ಲಿ 10 ಲಕ್ಷ ಫ‌ಲಾನುಭವಿಗಳಿಗೆ ಸೌಲಭ ಒದಗಿಸಲು ಗುರಿ ಇಟ್ಟುಕೊಳ್ಳಲಾಗಿತ್ತು. ಇದಕ್ಕಾಗಿ ಗ್ರಾ.ಪಂ. ಕಚೇರಿ, ಕರ್ನಾಟಕ ಒನ್‌, ಅಟಲ್‌ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಆಯ್ಕೆಯಾದ ಪ್ರತಿ ಅರ್ಹ ಕುಟುಂಬಕ್ಕೆ ಉಚಿತ ಅನಿಲ ಸಂಪರ್ಕ, ಗ್ಯಾಸ್‌ಸ್ಟೌವ್‌, 2 ಸಿಲಿಂಡರ್‌ ಮತ್ತು ಲೈಟರ್‌ ನೀಡಲಾಗುತ್ತದೆ. ಇದಕ್ಕೆ ಒಂದು ಕುಟುಂಬಕ್ಕೆ 4,254 ರೂ. ಖರ್ಚು ಬರುತ್ತದೆ.  ಈ ಖರ್ಚನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವೇ ಭರಿಸುತ್ತದೆ. ಅದನ್ನು ಪೂರ್ತಿಯಾಗಿ ಸರ್ಕಾರವೇ ಭರಿಸಲಿದೆ.

ಕೈಸೇರಿದ್ದು ಸಿಎಂ ಪತ್ರ ಮಾತ್ರ!
ರಾಜ್ಯ ಸರ್ಕಾರದ 2011ರ ಸಾಮಾಜಿಕ-ಆರ್ಥಿಕ ಸಮೀಕ್ಷೆಯ ಮಾನದಂಡಗಳನ್ನು ಮುಂದಿಟ್ಟುಕೊಂಡು ಬಡತನ ರೇಖೆಗಿಂತ ಕೆಳಗಿನ 30 ಲಕ್ಷ ಕುಟುಂಬಗಳನ್ನು “ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ’ಗೆ ಪರಿಗಣಿಸಲಾಗಿತ್ತು. ಈ ಪೈಕಿ ಮೊದಲ ಹಂತದಲ್ಲಿ 10 ಲಕ್ಷ ಫ‌ಲಾನುಭವಿಗಳಿಗೆ ಸೌಲಭ್ಯ ಒದಗಿಸುವ ಗುರಿ ಇಟ್ಟುಕೊಳ್ಳಲಾಗಿತ್ತು. ಒಟ್ಟು 33 ಲಕ್ಷ ಅರ್ಜಿಗಳು ಸ್ವೀಕೃತವಾಗಿದ್ದವು. ಇದರಲ್ಲಿ 9.71 ಲಕ್ಷ ಫ‌ಲಾನುಭವಿಗಳನ್ನು ಆಹಾರ ಇಲಾಖೆ ಆಯ್ಕೆ ಮಾಡಿದೆ. ಅದರಲ್ಲಿ 9.50 ಲಕ್ಷ ಫ‌ಲಾನುಭವಿಗಳಿಗೆ “”ನೀವು ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಅರ್ಹರಾದ್ದೀರಿ” ಎಂದು ಸ್ವತಃ ಮುಖ್ಯಮಂತ್ರಿಯವರು ಪತ್ರ ಬರೆದು ತಿಳಿಸಿದ್ದಾರೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ, ಯೋಜನೆಗೆ ಆಯ್ಕೆಯಾದ ಫ‌ಲಾನುಭವಿಗಳಿಗೆ ಸಿಎಂ ಪತ್ರ ಮಾತ್ರ ಸಿಕ್ಕಿದ್ದು, ಕಳೆದ ನಾಲ್ಕು ತಿಂಗಳಿಂದ ಉಚಿತ ಗ್ಯಾಸ್‌ ಸಂಪರ್ಕ ಸಿಕ್ಕಿಲ್ಲ.

ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ಅಷ್ಟಕ್ಕೆ ನಿಂತು ಹೋಗಿತ್ತು. ಈಗ ಹೊಸ ಸರ್ಕಾರ ಬಂದಿದೆ. ಹೊಸ ತೀರ್ಮಾನ, ಹೊಸ ಪ್ರಕ್ರಿಯೆ ಆಗಬೇಕಿದೆ.
– ಮನೋಜ್‌ ಕೊಳ್ಳ, ನೋಡಲ್‌ ಅಧಿಕಾರಿ, ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.