ಅಂಜನಾಪುರ ಮೆಟ್ರೋ ಮಾರ್ಗ ತುಸು ವಿಳಂಬ


Team Udayavani, Oct 30, 2020, 12:21 PM IST

bng-tdy3

ಬೆಂಗಳೂರು: ಯಲಚೇನಹಳ್ಳಿ- ಅಂಜನಾಪುರ ವಿಸ್ತರಿಸಿದ ಮಾರ್ಗದಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ವಾಣಿಜ್ಯ ಸಂಚಾರ ಆರಂಭವಾಗುವುದು ಸದ್ಯಕ್ಕಂತೂ ಅಸಾಧ್ಯ ವಾಗಿದ್ದು, ನವೆಂಬರ್‌ ಅಂತ್ಯ  ದೊಳಗೆ ಸೇವೆಗೆ ಮುಕ್ತಗೊಳಿಸಲು ಸಿದ್ಧತೆ ನಡೆದಿದೆ.

ಈ ಮೊದಲು ನ. 1ಕ್ಕೆ ವಾಣಿಜ್ಯ ಸಂಚಾರ ಆರಂಭಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವದ ಕೊಡುಗೆ ನೀಡುವ ಗುರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೊಂದಿತ್ತು. ಆದರೆ, ಇನ್ನೂ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ಪರಿಶೀಲನೆಗೂ ಬಂದಿಲ್ಲ. ಈ ಮಧ್ಯೆ 50ಕ್ಕೂ ಹೆಚ್ಚು ಅಂಶಗಳ ಪಟ್ಟಿ ಮಾಡಿ, ಅವೆಲ್ಲವುಗಳ ವ್ಯವಸ್ಥೆ ಸಮರ್ಪಕವಾಗಿ ವೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ಆಯುಕ್ತರು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಮೂರನೇ ವಾರದಲ್ಲೇ ಬಿಎಂಆರ್‌ ಸಿಎಲ್‌, ರೈಲ್ವೆ ಸುರಕ್ಷತಾ ಆಯುಕ್ತರಿಗೆ ಆಹ್ವಾನ ನೀಡಿತ್ತು. ಅದಕ್ಕೆ ಪ್ರತಿಯಾಗಿ ಆಯುಕ್ತರು ಕೆಲವು ಅಂಶಗಳನ್ನು ಪಟ್ಟಿ ಮಾಡಿ, ತಮಗೆ ಸಲ್ಲಿಸಿದೆ. ಅವುಗಳಿಗೆ ಮೂರ್‍ನಾಲ್ಕು ದಿನಗಳಲ್ಲಿ ಲಿಖೀತವಾಗಿ ಪ್ರತಿಕ್ರಿಯಿಸ ಲಾಗುವುದು. ನಂತರ ಆಯುಕ್ತ ರನ್ನು ಒಳಗೊಂಡ ತಂಡ ಭೇಟಿ ನೀಡಲಿದ್ದು, ಆಮೇಲೆ ಎಲ್ಲವೂ ಸರಿಯಾಗಿದ್ದರೆ ಗ್ರೀನ್‌ ಸಿಗ್ನಲ್‌ ಸಿಗಲಿದೆ. ಈ ಎಲ್ಲ ಪ್ರಕ್ರಿ ಯೆ ಗಳು ನವೆಂಬರ್‌ ಎರಡು ಅಥವಾ ಮೂರನೇ ವಾರದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ’ ಎಂದು ನಿಗಮದ ಅಧಿಕಾರಿ ಯೊಬ್ಬರು ಮಾಹಿತಿ ನೀಡಿದರು.

ಗಡುವು ಸಾಧನೆ ಅಸಾಧ್ಯ: “ನ. 1ರ ಒಳಗೆ ಎಲ್ಲ ಕಾರ್ಯ ಮುಗಿಯಬೇಕು ಎಂದು ಗಡುವು ನೀಡಲಾಗಿತ್ತು. ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ. ಆದರೂ, ತಿಂಗಳಲ್ಲಿ ಅಂಜನಾಪುರದವರೆಗೆ  ವಾಣಿಜ್ಯ ಸೇವೆ ಪ್ರಾರಂಭಿಸಲು ಸಾಧ್ಯವಾಗದು. ಇನ್ನೂ ಸ್ವಲ್ಪ ಕೆಲಸ ಬಾಕಿ ಇದೆ’ ಎಂದು ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಎಂಜಿನಿಯರೊಬ್ಬರು ಸ್ಪಷ್ಟಪಡಿಸಿದ್ದಾರೆ.

ಸದ್ಯದ ಸ್ಥಿತಿಯಲ್ಲಿ ನಿಗದಿತ ಅವಧಿಯಲ್ಲಿ ಯಲಚೇನಹಳ್ಳಿಯಿಂದ ಮೊದಲ ಮೂರು ನಿಲ್ದಾಣದವರೆಗೆ ಮಾತ್ರ ಸೇವೆ ನೀಡಬಹುದಾಗಿದೆ. ಅಂಜನಾಪುರದವರೆಗೆ ಸೇವೆ ಪ್ರಾರಂಭವಾಗಲು ಇನ್ನಷ್ಟು ದಿನ ಕಾಯಬೇಕಾಗುತ್ತದೆ. ಆದರೆ, ಹೀಗೆ ಅರ್ಧ ಮಾರ್ಗವನ್ನು ಮುಕ್ತಗೊಳಿಸಿ, ಉಳಿದರ್ಧ ಬಾಕಿ ಇಡಲು ಬರುವುದಿಲ್ಲ ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು.

ಕೆಲವೆಡೆ ಪ್ರಗತಿ ಮಂದಗತಿ :  ಯಲಚೇನಹಳ್ಳಿ- ಅಂಜನಾಪುರ ಮಾರ್ಗದ ಕೋಣನಕುಂಟೆ ಕ್ರಾಸ್‌, ದೊಡ್ಡಕಲ್ಲಸಂದ್ರ ಹಾಗೂ ವಜ್ರಹಳ್ಳಿನಿಲ್ದಾಣಗಳ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ನಿಲ್ದಾಣದೊಳಗೆ ಪ್ಲಾಟ್‌ಫಾರಂ, ಟಿಕೆಟ್‌ ಕೌಂಟರ್‌, ಗ್ರಾಹಕ ಸೇವಾ ಕೇಂದ್ರಗಳ ನಿರ್ಮಾಣ ಕಾರ್ಯವೂ ಬಹುತೇಕ ಪೂರ್ಣಗೊಂಡಿದೆ. ಆದರೆ, ತಲಘಟ್ಟಪುರ, ಅಂಜನಾಪುರ ನಿಲ್ದಾಣದೊಳಗೆ ಟಿಕೆಟ್‌ ಕೌಂಟರ್‌, ಗ್ರಾಹಕ ಸೇವಾ ಕೇಂದ್ರಗಳ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗಿದೆ.

ಟಾಪ್ ನ್ಯೂಸ್

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.