ಅಂಜನಿಪುತ್ರ ಚಿತ್ರಕ್ಕೆ ನ್ಯಾಯಾಂಗ ನಿಂದನೆ ಕಂಟಕ
Team Udayavani, Dec 27, 2017, 1:25 PM IST
ಬೆಂಗಳೂರು: ಅಂಜನಿಪುತ್ರ ಸಿನಿಮಾ ಪ್ರದರ್ಶನ ನಿರ್ಬಂಧಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ಉಲ್ಲಂ ಸಲಾಗಿದೆ ಎಂದು ಆರೋಪಿಸಿ ನ್ಯಾಯಾಂಗ ನಿಂದನೆ ದೂರು ದಾಖಲಿಸಲಾಗಿದೆ.
ಸಿನಿಮಾ ಪ್ರದರ್ಶನಕ್ಕೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ವಿಧಿಸಿದ್ದರೂ ಪ್ರದರ್ಶನ ಮುಂದುವರಿಸಲಾಗಿದೆ ಎಂದು ನ್ಯಾಯಾಂಗ ನಿಂದನೆ ದೂರು ಸಲ್ಲಿಕೆಯಾಗಿದ್ದು, ಅಂಜನಿಪುತ್ರ ಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ವಕೀಲರಾದ ನಾರಾಯಣಸ್ವಾಮಿ, ವಿನೋದ್ಕುಮಾರ್, ವಿಜಯ್ಕುಮಾರ್ ಈ ದೂರು ನೀಡಿದ್ದು ಬುಧವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ವಕೀಲ ಸಮುದಾಯಕ್ಕೆ ಅವಮಾನವಾಗುವಂತಹ ಸಂಭಾಷಣೆಯನ್ನು ಚಿತ್ರದಲ್ಲಿ ಬಳಸಲಾಗಿದೆ. ಈ ಸಂಬಂಧ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ,
ಜ. 3ರವರೆಗೆ ಚಿತ್ರಪ್ರದರ್ಶನ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ಸಂಬಂಧ ನೋಟಿಸ್ ಕೂಡ ಜಾರಿಯಾಗಿದೆ. ಆದರೆ, ಆಕ್ಷೇಪಿತ ಸಂಭಾಷಣೆಯ ದೃಶ್ಯಾವಳಿಯನ್ನು ತೆಗೆದುಹಾಕದೇ ನ್ಯಾಯಾಲಯದ ಆದೇಶ ಉಲ್ಲಂ ಸಿ ಚಿತ್ರಪ್ರದರ್ಶನ ಮಾಡಲಾಗುತ್ತಿದೆ ಎಂದು ವಕೀಲ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.