ಅಂಜನಿ ಪುತ್ರ ಸಿನಿಮಾ ಪ್ರದರ್ಶನ ರದ್ದು
Team Udayavani, Dec 24, 2017, 6:30 AM IST
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ “ಅಂಜನಿ ಪುತ್ರ’ ಚಿತ್ರ ಪ್ರದರ್ಶನಕ್ಕೆ ನಗರದ ಸಿಟಿ ಸಿವಿಲ್ ನ್ಯಾಯಾಲಯ ಜ.3 ರವರೆಗೆ ತಡೆಯಾಜ್ಞೆ ನೀಡಿದೆ. ಚಿತ್ರದ ದೃಶ್ಯವೊಂದರಲ್ಲಿ ವಕೀಲ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಲಾಗಿದೆ.
ಈ ಸಂಭಾಷಣೆ ಯನ್ನು ಸಿನಿಮಾದಿಂದ ತೆಗೆಯಬೇಕು ಇಲ್ಲವೇ ಚಿತ್ರ ಪ್ರದರ್ಶನ ರದ್ದು ಪಡಿಸಬೇಕೆಂದು ನಾರಾಯಣಸ್ವಾಮಿ,
ಲಕ್ಷ್ಮೀನಾರಾಯಣ ಸೇರಿ ಐವರು ವಕೀಲರು ಸಿಟಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಶನಿವಾರ ಅರ್ಜಿ ವಿಚಾರಣೆ ನಡೆಸಿದ 40ನೇ ಸಿವಿಲ್ ನ್ಯಾಯಾಲಯದ ನ್ಯಾ. ಕೋಮಲಾ, ಚಿತ್ರ ಪ್ರದರ್ಶನಕ್ಕೆ ತಡೆ ನೀಡಿದ್ದು, ಸಿನಿಮಾ ನಿರ್ಮಾಪಕ ಎಂ.ಎನ್.ಕುಮಾರ್, ನಿರ್ದೇಶಕ ಎ.ಹರ್ಷ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್ ಜಾರಿ ಮಾಡಿ ಆದೇಶಿಸಿದ್ದಾರೆ. ಅರ್ಜಿ ಕುರಿತು ವಾದ ಮಂಡಿಸಿದ ವಕೀಲ ನಾರಾಯಣಸ್ವಾಮಿ, ಅಂಜನಿ ಪುತ್ರ ಸಿನಿಮಾದಲ್ಲಿ ವಕೀಲ ವೃತ್ತಿಯನ್ನು ವ್ಯಂಗ್ಯವಾಗಿ ಚಿತ್ರಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ವಕೀಲರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ.
ಈ ಸಂಭಾಷಣೆಯಿಂದ ಇಡೀ ವಕೀಲ ವೃತ್ತಿಗೆ ಅಪಮಾನ ಮಾಡಲಾಗಿದೆ. ಚಿತ್ರದಲ್ಲಿನ ದೃಶ್ಯಗಳು ಅಪಾರ್ಥ ಸೂಚಿಸುತ್ತಿವೆ. ಆದ್ದರಿಂದ ಚಿತ್ರದಲ್ಲಿನ ಸಂಭಾಷಣೆ ತೆಗೆಯಬೇಕು ಎಂದು ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾ.ಕೋಮಲ ಜ.3ರವರೆಗೆ ಪ್ರದರ್ಶನಕ್ಕೆ ತಡೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ನೂರಕ್ಕೆ ನೂರು ಸಿಎಂ ಆಗ್ತಾರೆ; ಪುಟ್ಟಣ್ಣ
ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗಲ್ಲ: ಸಿಎಂ
ಎಸ್ಐಟಿ ಉಲ್ಲೇಖೀಸಿರುವ ಕಾನೂನುಬದ್ಧ ನಿಯಮಗಳು ಸಿಎಂ ಗಮನಕ್ಕೆ ಬಂದಿಲ್ಲವೇ?: ಎಚ್ಡಿಕೆ
Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ
ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ಪಕ್ಷದಿಂದ ಉಚ್ಚಾಟನೆ