ಅನ್ನ ಮೂಲ ಆರ್ಥಿಕ ನೀತಿ ಅತ್ಯಗತ್ಯ


Team Udayavani, Oct 25, 2018, 12:43 PM IST

blore-12.jpg

ಬೆಂಗಳೂರು: ದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹಣ ಮೂಲ ಆರ್ಥಿಕ ನೀತಿ ಬದಲು ಜನಸಂಖ್ಯೆ ಹಾಗೂ ಉದ್ಯೋಗಗಳ ನಡುವೆ ಸಮತೋಲನ ಕಾಯ್ದುಕೊಳ್ಳುವ ಅನ್ನ ಮೂಲ ಆರ್ಥಿಕ ನೀತಿ ರೂಪಿಸಬೇಕಾದ ಅವಶ್ಯಕತೆಯಿದೆ ಎಂದು ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸೆಂಟರ್‌ ಆಫ್ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ರಾಜ್ಯ ಸಮಿತಿ ವತಿಯಿಂದ ಕೆಇಬಿ ಇಂಜಿನಿಯರಿಂಗ್‌ ಅಸೋಸಿಯೇಷನ್ಸ್‌ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ “ಖಾಯಮೇತರ ಕೆಲಸಗಳು- ಉದ್ಯೋಗದ ಹಕ್ಕು’ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಸದ್ಯ ನಮ್ಮಲ್ಲಿ ಹಣ ಮೂಲ ಆರ್ಥಿಕ ನೀತಿ ಚಾಲ್ತಿಯಲ್ಲಿದೆ. ಹಣ ದುಪ್ಪಟ್ಟುಗೊಳಿಸುವ ಕಾಲಚಕ್ರದಲ್ಲಿ ನಾವು ಸಿಲುಕಿಕೊಂಡಿದ್ದೇವೆ. ಆದರೆ, ಶ್ರಮಕ್ಕೆ ಪ್ರತಿಫ‌ಲವಾಗಿರುವ ಅನ್ನ, ಮೂಲಸೌಕರ್ಯ ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ಆರ್ಥಿಕ ನೀತಿ ನಮಗೆ ಬೇಕಾಗಿದೆ.

ಆದ್ದರಿಂದ ಹಣ ಮೂಲದ ಆರ್ಥಿಕ ನೀತಿಯ ಬದಲಿಗೆ ಅನ್ನ ಮೂಲ ಆರ್ಥಿಕ ನೀತಿ ರೂಪಿಸುವ ಅವಶ್ಯಕತೆಯಿದೆ ಎಂದು ಪ್ರತಿಪಾದಿಸಿದರು. ದೇಶದಲ್ಲಿ ನಿರುದ್ಯೋಗ ಸಮಸ್ಯೆ ದೊಡ್ಡ ಮಟ್ಟದಲ್ಲಿದೆ. ಒಂದೆಡೆ ನಿರುದ್ಯೋಗ ಹೆಚ್ಚುತ್ತಿದ್ದರೆ, ಮತ್ತೂಂದಡೆ ಉದ್ಯೋಗದಲ್ಲಿರುವರಿಗೆ ಖಾಯಂಮಾತಿ ಇಲ್ಲವಾಗಿದೆ. ಜಾಗತೀಕರಣದ ಹೆಸರಿನಲ್ಲಿ ಬಂದ ಮುಕ್ತ ಮಾರುಕಟ್ಟೆಯ ಆರ್ಥಿಕ ನೀತಿಯೇ ಇದಕ್ಕೆ ಕಾರಣ. ಖಾಸಗಿಕರಣದಲ್ಲಿ ಹೆಚ್ಚು ದಕ್ಷತೆಯಿದೆ ಎಂಬ ನಂಬಿಕೆ ಹುಟ್ಟಿಸಿ ಅದನ್ನು ನಮ್ಮ ಮೇಲೆ ಹೇರಲಾಗುತ್ತಿದೆ. ಶ್ರಮ ಮತ್ತು ಸಾಮರ್ಥಯವನ್ನು ಅವಗಣಿಸುವ ವಿದೇಶಿ ಪ್ರಭಾವದ ಹಣ ಮೂಲ ಆರ್ಥಿಕ ನೀತಿ ಬದಲು ನಮಗೇ ನಮ್ಮದೇ ಆದ ಅನ್ನ ಮೂಲ ಆರ್ಥಿಕ ನೀತಿ ಬೇಕು ಎಂದು ಹೇಳಿದರು.

ವಿದೇಶಿ ಬಂಡವಾಳ ಹೂಡಿಕೆಯ ಪರಿಣಾಮ ದೇಶದ ರಕ್ಷಣಾ ಇಲಾಖೆ ಸೇರಿದಂತೆ ಹಲವು ಪ್ರಮುಖ ವಲಯಗಳನ್ನು ವಿದೇಶಿಗರು ನೇರವಾಗಿ ಗುತ್ತಿಗೆ ಪಡೆದಿದ್ದಾರೆ. ಜಾಗತೀಕರಣದ ಪ್ರಭಾವದಿಂದಲೇ ಈ ಗುತ್ತಿಗೆ ಪದ್ದತಿ ಎಂಬ ಪರಿಕಲ್ಪನೆ ಹುಟ್ಟಿಕೊಂಡಿದ್ದು. ವಿದೇಶಿ ನೇರ ಬಂಡವಾಳ ಹೂಡಿಕೆ ಎಂಬ ಪೆಡಂಭೂತದಲ್ಲಿ ಕಾರ್ಮಿಕರಷ್ಟೇ ಅಲ್ಲ, ಇಡೀ ದೇಶ ಗುತ್ತಿಗೆಯಲ್ಲಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಇತ್ತೀಚಿನ ಕಾಲಮಾನದಲ್ಲಿ ಮಾನವ ಶಕ್ತಿ ಕಡಿಮೆಗೊಳಿಸುವ ತಂತ್ರಜ್ಞಾನ ಬಳಕೆಗೆ ನಾವು ಒತ್ತು ಕೊಡುತ್ತಿದ್ದೇವೆ. ಹಾಗಂತ ತಂತ್ರಜ್ಞಾನ ಮತ್ತು ಆಧುನಿಕತೆಯ ವಿರೋಧಿಗಳು ಎಂದು ಭಾವಿಸಬೇಕಿಲ್ಲ. ಆದರೆ, ಖಾಸಗೀಕರಣದಿಂದಲೇ ದೇಶ ಪ್ರಗತಿ ಸಾಧಿಸಲಿದೆ ಎಂಬ ವಾದವನ್ನೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕೇಂದ್ರ ಸರ್ಕಾರ “ನೋಟು ಅಮಾನ್ಯ’ದ ಪರಿಣಾಮ ದೇಶದಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಸಣ್ಣ ಕೈಗಾರಿಕೆಗಳು ನಷ್ಟ ಅನುಭವಿಸಿದವು, ಇದರಿಂದ ಲಕ್ಷಾಂತರ ಜನ ಉದ್ಯೋಗ ಕಳೆದುಕೊಂಡರು. ಇದಕ್ಕೆಲ್ಲ ದೊಡ್ಡ ಬಂಡವಾಳಶಾಹಿಗಳು ಕಾರಣ. ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ವರದಿಯೇ ಇದಕ್ಕೆ ಸಾಕ್ಷಿ. ಹಾಗಾಗಿ ನೋಟು ಅಮಾನ್ಯದಿಂದ ನಷ್ಟವೇ ಆಗಿದೆ. ದೇಶದ ಶಿಕ್ಷಣ ಕ್ಷೇತ್ರದಲ್ಲಿಯೆ 50 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯೋಗ ನೀತಿ ರೂಪಿಸಬೇಕು ಎಂದರು. ವಿಚಾರಸಂಕಿರಣದಲ್ಲಿ ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮೀ, ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.